ಕೊರೊನ ಮುಕ್ತ ಸಮಾಜ ನಿರ್ಮಾಣ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ತರವಾದುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು,
ಅವರು ಉಜಿರೆಯ ಕ್ರಷ್ಞಾನುಗ್ರಹ ಸಭಾಭವನದಲ್ಲಿ ಎ.25ರಂದು ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದಿಂದ ಉಜಿರೆ ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಆಹಾರಧಾನ್ಯದ ಕಿಟ್ ವಿತರಿಸಿ ಮಾತನಾಡುತ್ತದ್ದರು.

ವೇದಿಕೆಯಲ್ಲಿ ಉಜಿರೆ ಶ್ರೀ ಜನಾರ್ದನ ದೇವಾಲಯದ ಶರತ್ ಕ್ರಷ್ಣ ಪಡ್ವೆಟ್ನಾಯ, ಬದುಕು ಕಟ್ಟೋಣ ಬನ್ನಿ ತಂಡದ ರಾಜೇಶ್ ಪೈ ಇದ್ದರು.
ಬದುಕು ಕಟ್ಟೋಣ ಬನ್ನಿ ತಂಡದ ಮೋಹನ್ ಕುಮಾರ್ ಪ್ರಸ್ತಾವಿಸಿ, ತಿಮ್ಮಯ್ಯ ನಾಯ್ಕ ನಿರೂಪಿಸಿದರು.








