ಬೆಳ್ತಂಗಡಿ: ಕೊರೋನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಗೊಳಗಾಗಿದ್ದ ಬೆಳ್ತಂಗಡಿ ತಾಲೂಕಿನ ಖಾಸಗಿ ಬಸ್ ಸಿಬ್ಬಂದಿಗಳಿಗೆ ವಿಧಾನ ಪರಿಷತ್ ಶಾಸಕ , ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಆಹಾರ ಕಿಟ್ ಗಳನ್ನು ಬುಧವಾರ ಬೆಳ್ತಂಗಡಿಯಲ್ಲಿ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಫಲಾನುಭವಿಗಳಾದ ಖಾಸಗಿ ಬಸ್ ಸಿಬ್ಬಂದಿಗಳು ಮಾತ್ರವಲ್ಲದೇ ಎಂ.ಎಲ್.ಸಿ. ಹರೀಶ್ ಕುಮಾರ್ ಜೊತೆಗಿದ್ದವರೂ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರ ಕಾಪಾಡಿ ಭಾಗವಹಿಸುವ ಮೂಲಕ ಇತರರಿಗೆ ಮಾದರಿಯಾದರು.

ಕಳೆದ ಮಾರ್ಚ್ 22 ರಿಂದ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಖಾಸಗಿ ಬಸ್ ಸಿಬ್ಬಂದಿಗಳ ಬಗ್ಗೆ ಖಾಸಗಿ ಬಸ್ ನೌಕರರ ಸಂಘದ ಉಪಾಧ್ಯಕ್ಷ ಪದ್ಮಪ್ರಸಾದ್ ಸವಣಾಲು ಅವರ ಮನವಿ ಮೇರೆಗೆ ಎಲ್ಲಾ ಸಿಬ್ಬಂದಿಗಳಿಗೆ ನಿತ್ಯೋಪಯೋಗಿ ವಸ್ತುಗಳ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೊಡಿ , ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ , ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್ , ನಗರ ಪಂಚಾಯತ್ ಸದಸ್ಯ ಡಿ. ಜಗದೀಶ್ , ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ ಪೂಜಾರಿ , ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾ ಸಮಿತಿ ಸದಸ್ಯ ಪ್ರಭಾಕರ್ ಶಾಂತಿಕೋಡಿ , ಕಾಂಗ್ರೆಸ್ ಮುಖಂಡರಾದ ರಘು ಧರ್ಮಸೇನ್ , ಸತೀಶ್ ಶೆಟ್ಟಿ ದೊಡ್ಡಮನೆ , ಸುರೇಂದ್ರ ಕೋಟ್ಯಾನ್ , ಧನಂಜಯ (ಧನು) ಗುರುವಾಯನಕೆರೆ , ಜಿ.ವಿ ಹರೀಶ್ ಸವಣಾಲು , ಗಣೇಶ್ ಕಣಿಯೂರು , ಖಾಸಗಿ ಬಸ್ ನೌಕರರ ಸಂಘದ ಉಪಾಧ್ಯಕ್ಷ ಪದ್ಮಪ್ರಸಾದ್ ಸವಣಾಲು , ಪ್ರಧಾನ ಕಾರ್ಯದರ್ಶಿ ದೀಪಕ್ ಜಿ. ರೆಂಕೆದಗುತ್ತು , ಕೋಶಾಧಿಕಾರಿ ಇಲ್ಯಾಸ್ ಕರಾಯ ಮೊದಲಾದವರು ಉಪಸ್ಥಿತರಿದ್ದರು.








