ಮದ್ದಡ್ಕ ಪೇಟೆಯಲ್ಲೊಂದು ಸೊಳ್ಳೆ ಉತ್ಪಾದನಾ ಕೇಂದ್ರ

Facebook
Twitter
LinkedIn
WhatsApp

ಬೆಳ್ತಂಗಡಿ: ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಚರಂಡಿಯಲ್ಲಿ ಹರಿಯಬೇಕಾದ ಮಳೆ ನೀರು ರಸ್ತೆಯಲ್ಲಿಯೇ ಬಸ್ ತಂಗುದಾಣದ ಸುತ್ತ ನಿಂತು ನಾಗರಿಕರಿಗೆ ಹೊಸ ಸಮಸ್ಯೆ ಸೃಷ್ಟಿಸಿದೆ. ಕುವೆಟ್ಟು ಗ್ರಾಮದ ಬೆಳ್ತಂಗಡಿ-ಮಂಗಳೂರು ಹೆದ್ದಾರಿಯಲ್ಲಿ ಮದ್ದಡ್ಕ ಪೇಟೆಯಲ್ಲಿ ನಾಗರಿಕರು ಈ ಸಮಸ್ಯೆ ಎದುರಿಸುತ್ತಿದ್ದು; ಹೀಗೆ ನಿಂತ ನೀರಲ್ಲಿ ಸೊಳ್ಳೆ ಉತ್ಪತ್ತಿಯಾಗಿ, ಡೆಂಗ್ಯೂನಂತಹ ಸಾಂಕ್ರಾಮಿಕ ರೋಗ ಹರಡುವ ಕೇಂದ್ರವಾಗುವ ಮುನ್ನ ಸಂಬಂಧಪಟ್ಟ ಇಲಾಖೆ ಎಚ್ಚೆತ್ತು ಚರಂಡಿ ದುರಸ್ಥಿಗೊಳಿಸಿ, ರಸ್ತೆಯ ಬದಿಯಲ್ಲಿ-ರಸ್ತೆಯಲ್ಲಿ ನಿಂತ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯುವಂತೆ ಮಾಡಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Latest News

Related Posts