
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ರ ಕಾರು ಅಪಘಾತಗೊಂಡ ಘಟನೆ ಮೂಡಬಿದ್ರೆಯಿಂದ ವರದಿಯಾಗಿದೆ.
ಜುಲೈ 1ರಂದು ಮೀಜಾರ್ ಸಮೀಪ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಪಯಣಿಸುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ, ಕೆಸರಿನಲ್ಲಿ ಕಾರು ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ರಿಗೆ ಯಾವುದೇ ಗಾಯಗಳಾಗದೇ ಸುದೈವವಶಾತ್ ಅಪಾಯದಿಂದ ಪಾರಾಗಿದ್ದಾರೆ.







