ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಷನ್ ದ. ಕ. ಹಾಗೂ ಉಡುಪಿ ಜಿಲ್ಲೆ ಇದರ ಬೆಳ್ತಂಗಡಿ ವಲಯದ ಪದಾಧಿಕಾರಿಗಳು ಮತ್ತು ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ 53ನೇ ವರ್ಷದ ವರ್ಧಂತ್ಯತ್ಸವದ ಶುಭ ಸಂದರ್ಭ ಧರ್ಮಸ್ಥಳಕ್ಕೆ ಬೇಟಿ ನೀಡಿ ಧರ್ಮಾಧಿಕಾರಿ ಡಾ. ಹೆಗ್ಗಡೆಯವರನ್ನು ಗೌರವಪೂರ್ವಕವಾಗಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ಸುರೇಶ್ ಬಿ. ಕೌಡಂಗೆ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಗೌರವಾಧ್ಯಕ್ಷ ಎನ್. ಎ. ಗೋಪಾಲ್ ಅಳದಂಗಡಿ, ಪ್ರಧಾನ ಕಾರ್ಯದರ್ಶಿ ಗಂಗಾಧರ ಉಜಿರೆ, ಉಪಾಧ್ಯಕ್ಷ ಮಹಾವೀರ ಜೈನ್, ಎಸ್ಕೆಪಿ ವಿವಿಧೋದ್ಧೇಶ ಸಹಕಾರಿ ಸಂಘದ ನಿರ್ದೇಶಕ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ಕೋಶಾಧಿಕಾರಿ ಪ್ರಭಾಕರ ಕಕ್ಕಿಂಜೆ, ಮಾಜಿ ಅಧ್ಯಕ್ಷ ಉಮೇಶ್ ಉಜಿರೆ, ಸದಸ್ಯರಾದ ಸಂದೀಪ್ ದೇವ್ ಧರ್ಮಸ್ಥಳ, ರಾಮಕೃಷ್ಣ ರೈ ಉಜಿರೆ, ಸಂದೇಶ್ ನಿಡ್ಲೆ ಹಾಜರಿದ್ದರು.






