ಬೆಳ್ತಂಗಡಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ವತಿಯಿಂದ ಬೆಳ್ತಂಗಡಿ ಕಾಳಜಿ ರಿಲೀಫ್ ಫಂಡ್ಗೆ 1 ಲಕ್ಷ ರೂಪಾಯಿ ಧನಸಹಾಯದ ಚೆಕ್ಕನ್ನು ಸುಬ್ರಹ್ಮಣ್ಯ ಸ್ಥಾನಿಕ ಸಭಾ ಅಧ್ಯಕ್ಷರಾದ ದಿನೇಶ್ ಕುಮಾರ್ ಎಂ.ಎಸ್. ರಿಲೀಫ್ ಫಂಡ್ನ ಅಧ್ಯಕ್ಷರಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾರಿಗೆ ಬೆಳ್ತಂಗಡಿಯ ಪ್ರವಾಸಿ ಮಂದಿರದಲ್ಲಿ ಅಕ್ಟೋಬರ್ 29ರಂದು ಹಸ್ತಾಂತರಿಸಿದರು.ಸುಬ್ರಹ್ಮಣ್ಯ ಸ್ಥಾನಿಕ ಸಭಾ ಕೋಶಾಧಿಕಾರಿ ರೇಖಾ ಸುಧೀರ್ ರಾವ್, ಕಾಳಜಿ ರಿಲೀಫ್ ಫಂಡ್ ಕಾರ್ಯದರ್ಶಿ ಬಿ. ಕೆ. ಧನಂಜಯ ರಾವ್ ಈ ಸಂದರ್ಭದಲ್ಲಿ ಹಾಜರಿದ್ದರು.







