ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ವಿಜೇತ ಉತ್ಸಾಹಿ ಯುವಕ ಮಂಡಲದ ವತಿಯಿಂದ ಕಂಟೋನ್ಮೆಂಟ್ ವಲಯ ಎಂದು ಗುರುತಿಸಲಾಗಿರುವ ಲಾಯಿಲ ಪಡ್ಲಾಡಿ ಪ್ರದೇಶದ ಎಲ್ಲಾ ಮನೆಗಳಿಗೆ ತರಕಾರಿ ಕಿಟ್ ಗಳನ್ನು ಮೇ 24ರಂದು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಚಂದ್ರಕಾಂತ, ಕಾರ್ಯದರ್ಶಿ ಹರ್ಷಿತ್ ನಿನ್ನಿಕಲ್ಲು, ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಚಂದು ಎಲ್., ಯುವಕ ಮಂಡಲದ ಪದಾಧಿಕಾರಿಗಳಾದ ಸಂದೇಶ್ ಎಲ್, ಹರೀಶ್ ಎಲ್, ರವಿಚಂದ್ರ, ಸೂರ್ಯಕಾಂತ್, ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.






