ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತ ಬೆಳ್ತಂಗಡಿ ಇದರ ಸಂಯಕ್ತ ಆಶ್ರಯದಲ್ಲಿ ಜೂನ್ 6ರಂದು ಬೆಳ್ತಂಗಡಿಯ ಮಿನಿ ವಿಧಾನಸೌಧದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಜಾಗೃತಿಗೆ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.ಕೋರೊನಾ ಸಂಧಿಗ್ಧತೆಯ ಈ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಜನರ ಸೇವೆ ಮಾಡುತ್ತಿರುವ ವೈದ್ಯರು ಹಳ್ಳಿಗಳಿಗೆ ತೆರಳಿ ಜನರಲ್ಲಿ ಧೈರ್ಯತುಂಬಲಿದ್ದಾರೆ.







