ಮೂಡುಬಿದಿರೆ: ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಪಕ್ಷಿಕೆರೆಯ ನಿತಿನ್ ವಾಸ್ ಅವರು ಪರಿಸರ ಸ್ನೇಹಿ ಮಾಸ್ಕ್ ಹಾಗು ಮಂಗಳೂರು ಬೊಂಬೆ ತಯಾರಿಸಿ ವಿಶ್ವದಾದ್ಯಂತ ಮನ್ನಣೆ ಗಳಿಸಿದ್ದಾರೆ.ಈ ನಿಮಿತ್ತ ಯುವಮೋರ್ಚಾ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಅವರು ನಿತಿನ್ ವಾಸ್ ರವರನ್ನು ಗೌರವಿಸಿ ಅಭಿನಂದಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ್ ಕಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಡಲಾಧ್ಯಕ್ಷರಾದ ಸುನೀಲ್ ಆಳ್ವ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಸೂರಜ್ ಜೈನ್ ಮಾರ್ನಾಡ್, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ಅಭಿಲಾಷ್ ಶೆಟ್ಟಿ ಕಟೀಲ್, ಮಂಡಲ ಯುವ ಮೋರ್ಚಾದ ಅಧ್ಯಕ್ಷ ಅಶ್ವಥ್ ಪಣಪಿಲ, ಪ್ರಧಾನ ಕಾರ್ಯದರ್ಶಿ ಧನುಷ್ ಕುಲಾಲ್ ಪ್ರಮುಖರಾದ ಶೈಲೇಶ್, ದೇವಿಕಿರಣ್, ಅರುಣ್, ಸಚಿನ್ ಶೆಟ್ಟಿ ಉಪಸ್ಥಿತರಿದ್ದರು.






