ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಾಜೆ ಗ್ರಾಮದ ಕಡಂಬಳ್ಳಿಯ ಗಣಪತಿ ಭಟ್ ಅವರ ಮನೆ ನಿರ್ಮಾಣಕ್ಕೆ ರೂಪಾಯಿ 25 ಸಾವಿರ ಮೊತ್ತದ ಚೆಕ್ಕನ್ನು ನೀಡಲಾಯಿತು.ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಜಯಕರ ಶೆಟ್ಟಿ, ವಲಯ ಮೇಲ್ವಿಚಾರಕ ನವೀನ್, ಪ್ರತಿನಿಧಿ ದಿಶಾ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಮಚ್ಚಿಮಲೆ ಅನಂತ ಭಟ್, ರೋಟರಿ ಜಿಲ್ಲಾ ಪ್ರತಿನಿಧಿ ಗೋಪಾಲಕೃಷ್ಣ ಜೋಷಿ, ರೋಟರಿ ಸಮುದಾಯದಳ ಮುಂಡಾಜೆಯ ಅಧ್ಯಕ್ಷೆ ಅಶ್ವಿನಿ ಹೆಬ್ಬಾರ್, ಸಚಿನ್ ಭಿಡೆ, ಮಹಾದೇವ ಬೆಂಡೆ ಮತ್ತಿತರರು ಉಪಸ್ಥಿತರಿದ್ದರು.







