ಬೆಳ್ತಂಗಡಿ: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಪ್ರತಿ ವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಮಡಂತ್ಯಾರಿನ ಕುಕ್ಕಳ ಗ್ರಾಮದ ರಕ್ತೇಶ್ವರಿಪದವು ನಿವಾಸಿ ಜಯಾನಂದ ಗೌಡ ಅವರಿಗೆ ಚಿಕಿತ್ಸಾ ಸಹಾಯಾರ್ಥವಾಗಿ ಬೆಳ್ತಂಗಡಿ ಸ್ಪಂದನಾ ಸೇವಾ ಸಂಘದ ವತಿಯಿಂದ ರೂಪಾಯಿ 15,000/-ದ ಚೆಕ್ಕನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷರು ಹಾಗೂ ವಾಣಿ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರೂ ಆದ ಪದ್ಮ ಗೌಡ ಬೆಳಾಲು ಇವರ ಮೂಲಕ ಫಲಾನುಭವಿಗೆ ಹಸ್ತಾಂತರ ಮಾಡಲಾಯಿತು.ಈ ಸಂದರ್ಭದಲ್ಲಿ ವಾಣಿ ಸೌಹಾರ್ದ ಕೋ-ಆಪರೇಟೀವ್ ಸೊಸೈಟಿಯ ನಿರ್ದೇಶಕರುಗಳಾದ ಉಷಾದೇವಿ ಕಿನ್ಯಾಜೆ ಹಾಗೂ ಸುರೇಶ್ ಗೌಡ ಕೌಡಂಗೆ, ವಾಣಿ ಸೌಹಾರ್ದ ಕೋ-ಆಪರೇಟೀವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಧನಂಜಯ ಗೌಡ ಶಿಬಾಜೆ, ಸಿಬ್ಬಂದಿಗಳಾದ ಉಮೇಶ್ ಗೌಡ, ನಿತೇಶ್ ಹುಣ್ಸೆಕಟ್ಟೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಮೀನಾಕ್ಷಿ ಮಹಾಬಲ ಗೌಡ, ಹಾಗೂ ಸ್ಪಂದನಾ ಸೇವಾ ಸಂಘದ ಸದಸ್ಯರುಗಳಾದ ಸೀತಾರಾಮ್ ಬೆಳಾಲು ಮತ್ತು ನಿತಿನ್ ಕನ್ಯಾಡಿ ಉಪಸ್ಥಿತರಿದ್ದರು.







