ನಾಳ ದೇಗುಲಕ್ಕೆ ಕುಮಾರಸ್ವಾಮಿ ಭೇಟಿ

ನಾಳ ದೇಗುಲಕ್ಕೆ ಕುಮಾರಸ್ವಾಮಿ ಭೇಟಿ
Facebook
Twitter
LinkedIn
WhatsApp

ಬೆಳ್ತಂಗಡಿ: ಗೇರುಕಟ್ಟೆ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಜುಲೈ 11ರಂದು ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು.ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಪತ್ರಕರ್ತ ಭುವನೇಶ್ ಗೇರುಕಟ್ಟೆ ಶಾಸಕರನ್ನು ಸ್ವಾಗತಿಸಿದರು. ಪ್ರಧಾನ ಅರ್ಚಕ ರಾಘವೇಂದ್ರ ಅಸ್ರಣ್ಣ ಪ್ರಸಾದ ನೀಡಿ ಆಶೀರ್ವದಿಸಿದರು. ಸದಸ್ಯರಾದ ಜನಾರ್ದನ ಪೂಜಾರಿ,ಅಂಬಾ ಆಳ್ವ,ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳಾದ ರಾಜೇಶ್ ಪೆಂರ್ಬುಡ, ಸದಾಶಿವ ನಾಯ್ಕ್, ಲೋಕೇಶ್ ಜಿ., ಮೋಹನ ತಾರೆಮಾರು, ದೇವಳ ಕಚೇರಿ ಪ್ರಬಂಧಕ ಗಿರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Latest 5

Related Posts