ಬೆಳ್ತಂಗಡಿ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಮತ್ತು ಸಿ ಟ್ರಸ್ಟ್(ರಿ) ಮಡಂತ್ಯಾರು ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣೆ ಕಾರ್ಯಕ್ರಮ ಮಡಂತ್ಯಾರು ವಲಯದ ಕಛೇರಿಯಲ್ಲಿ ಜುಲೈ 17ರಂದು ಜರಗಿತು. ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಬಿ. ಜಯಂತ ಶೆಟ್ಟಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಯಶವಂತ್, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲ, ಉಮೇಶ್ ಸುವರ್ಣ ಅಲೆಕ್ಕಿ, ವಲಯ ಮೇಲ್ವಿಚಾರಕ ಮಧು ಕಿರಣ್, ಸೇವಾ ಪ್ರತಿನಿಧಿಗಳಾದ ಹರಿನಾಕ್ಷಿ, ಮತ್ತು ಮಿಥುನ್, ಹಾಗೂ ಒಕ್ಕೂಟದ ಅಧ್ಯಕ್ಷರು ಪಧಾದಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು






