ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಪದಾಧಿಕಾರಿಗಳನ್ನೊಳಗೊಂಡ ನಿಯೋಗವೊಂದು ಇತ್ತೀಚೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿಕೊಂಡ ನೂತನ ಪೊಲೀಸ್ ವೃತ್ತನಿರೀಕ್ಷಕಾರದ ಶಿವಕುಮಾರ್ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡು ಸಮುದಾಯದ ಪರವಾಗಿ ಪುಷ್ಪಗುಚ್ಛ ನೀಡಿ ಗೌರವಿಸಿ ಸೇವಾವಧಿಗೆ ಶುಭಹಾರೈಸಲಾಯಿತು.ಈ ಸಂದರ್ಭ ನಿಯೋಗದಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಂಘದ ಅಧ್ಯಕ್ಷ ಯಸ್. ಪ್ರಭಾಕರ ಶಾಂತಿಕೋಡಿ, ಉಪಾಧ್ಯಕ್ಷ ರಾಮು ಶಿಶಿಲ, ಮಾಜಿ ಕಾರ್ಯದರ್ಶಿ ಅನಂತ್ ಮುಂಡಾಜೆ, ಯುವ ವೇದಿಕೆ ಮಾಜಿ ಕಾರ್ಯದರ್ಶಿ ರಮೇಶ್ ಕೇಳ್ತಾಜೆ ಉಪಸ್ಥಿತರಿದ್ದರು.






