ಜೈನರ ಧಾರ್ಮಿಕ ಭಾವನೆಗೆ ಧಕ್ಕೆ-ದೂರು

ಜೈನರ ಧಾರ್ಮಿಕ ಭಾವನೆಗೆ ಧಕ್ಕೆ-ದೂರು
Facebook
Twitter
LinkedIn
WhatsApp

ಬೆಳ್ತಂಗಡಿ: ಜೈನ ಧರ್ಮದ ಆರಾಧ್ಯ ದೇವರಾದ ಗೊಮಟೇಶ್ವರ ಸ್ವಾಮಿಯ ಬಗ್ಗೆ ಅಶ್ಲೀಲ , ಅವಹೇಳನಕಾರಿಯಾಗಿ  ಸಂದರ್ಶನವೊಂದರಲ್ಲಿ ಆಯುಬ್ ಖನ್ ಹೇಳಿಕೆ ನೀಡಿದ್ದು ಜೈನ ಧರ್ಮದ ಧಾರ್ಮಿಕ ಭಾವನೆಗಳಿಗೆ ನೋವು ಉಂಟಾಗಿದೆ.            ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉಳಿದ ಸಮುದಾಯಗಳಂತೆ ಜೈನಧರ್ಮವು ಧಾರ್ಮಿಕ ಪರಂಪರೆ ಹಾಗೂ ಭಗವಾನ್ ಮಹಾವೀರರ ವಾಣಿಯಂತೆ ‘ಬದುಕು ಮತ್ತು ಬದುಕಲು ಬಿಡು’ ಎನ್ನುವ ತತ್ವ-ಸಿದ್ಧಾಂತ ದೊಂದಿಗೆ ಎಲ್ಲಾ ಧರ್ಮದವರೊಂದಿಗೆ ಸಾಮರಸ್ಯದಿಂದ ಬಾಳುತ್ತಿರುವ ಆಹಿಂಸಾಮಯ ಧರ್ಮವಾಗಿದೆ. ಜೈನ ಧರ್ಮದ ಭಗವಾನ್ ಬಾಹುಬಲಿಯ ಸಂದೇಶಗಳ ಆದ ಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ, ಮೈತ್ರಿಯಿಂದ ಪ್ರಗತಿ, ಧ್ಯಾನದಿಂದ ಸಿದ್ದಿ, ಎಂಬುದು ಜಗತ್ತಿಗೆ ಶಾಂತಿ ನೆಮ್ಮದಿಯನ್ನು ತಂದಿರುವಂತಹದ್ದು. ಫೆಬ್ರವರಿ 8ರಂದು ಅಯೂಬ್ ಖಾನ್  ದುರುದ್ದೇಶ‌ಪೂರಕವಾಗಿ ಹೇಳಿಕೆ ನೀಡುವ ಮೂಲಕ ಜೈನ ಸಮಾಜದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಮತ್ತು ಧರ್ಮ-ಧರ್ಮಗಳ ನಡುವೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಸಮಾಜದ ಸ್ವಾಸ್ಥ್ಯ ಕದಡುವ ಹೇಳಿಕೆ ನೀಡಿರುವ ಅಯೂಬ್ ಖಾನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಮತಿ ವಿಕಲ್ಪರಿಗೆ ಇದೊಂದು ಪಾಠವಾಗಬೇಕಿದೆ  ಈ ಬಗ್ಗೆ  ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಶ್ರೀ ಬಾಹುಬಲಿ ಸ್ವಾಮಿ ಸೇವಾ ಸಮಿತಿಯ ವತಿಯಿಂದ ದೂರು. ನೀಡಲಾಗಿದೆ. ಈ ಸಂದರ್ಭದಲ್ಲಿ ಮಹಾವೀರ ಅಜ್ರಿ , ಉದಯ ಜೈನ್, ಪದ್ಮಪ್ರಸಾದ್, ಮಲ್ಲಿನಾಥ ಜೈನ್, ಹರ್ಷಿತ್ ಜೈನ್, ರಾಜೇಂದ್ರ ಶೆಟ್ಟಿ, ಅಕ್ಷಯ್ ಜೈನ್, ಮಲ್ಲಿಕ್ ಜೈನ್, ನಾಗರಾಜ್ ಉಪಸ್ಥಿತರಿದ್ದರು

Latest 5

Related Posts