ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಪ್ರಧಾನ ಕಚೇರಿ ಬೆಳ್ತಂಗಡಿ ಇದರ 18ನೇ ಶಾಖೆ ಹಿರಿಯಡ್ಕದ ಶ್ರೀ ದುರ್ಗಾ ಕಾಂಪ್ಲೆಕ್ಸ್ ಇಲ್ಲಿ ಜನವರಿ 6ರಂದು ಶುಭಾರಂಭಗೊಂಡಿತು.ಕರ್ನಾಟಕ ಸರಕಾರದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಚೇರಿ ಉದ್ಘಾಟಿಸಿ ಮಾತನಾಡುತ್ತಾ; ಸಂಘದ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡುವಂತೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ ವಹಿಸಿದ್ದರು. ಭದ್ರತಾ ಕೋಶದ ಉದ್ಘಾಟನೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ನೆರವೀರಿಸಿದರು. ಬೆಳ್ತಂಗಡಿ ಮಾಜಿ ಶಾಸಕ ಸಂಘದ ನಿರ್ದೇಶಕ ಕೆ. ವಸಂತ ಬಂಗೇರ ಗಣಕಯಂತ್ರವನ್ನು ಉದ್ಘಾಟಿಸಿದರು. ನಿರಖು ಠೇವಣಿ ಸರ್ಟಿಫಿಕೇಟ್ ವಿತರಣೆಯನ್ನು ಅಶೋಕ್ ಕುಮಾರ್ ಶೆಟ್ಟಿ ನಿರ್ದೇಶಕರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ) ಹಾಗೂ ಅಧ್ಯಕ್ಷರು ರೈತರ ಸೇವಾ ಸಹಕಾರಿ ಸಂಘ, ಹಿರಿಯಡ್ಕ; ಉಳಿತಾಯ ಖಾತೆ ಪುಸ್ತಕ ವಿತರಣೆಯನ್ನು ಶ್ರೀ ಸುರೇಶ್ ನಾಯಕ್ ಅಧ್ಯಕ್ಷರು ಗ್ರಾಮ ಪಂಚಾಯತ್ ಬೊಮ್ಮಾರಬೆಟ್ಟು ಹಾಗೂ ಮಲ್ಪೆ ರಾಘವೇಂದ್ರ, ಅಧ್ಯಕ್ಷರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಿರಿಯಡ್ಕ ಇವರು ನೆರವೇರಿಸಿದರು.ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾಗಿರುವ ಸುರೇಶ್ ನಾಯಕ್, ವಿಜಯ ಬ್ಯಾಂಕ್ನ ನಿವೃತ ಮ್ಯಾನೇಜರ್ ಹಾಗೂ ಹಿರಿಯಡ್ಕ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷರಾದ ಬಿ.ಎಂ. ಶೇಖರ್, ಕಟ್ಟಡ ಮಾಲಕರಾಗಿರುವ ಕೃಷ್ಣ ನಾಯ್ಕ, ನಮ ಬಿರುವೆರ್ ಇದರ ಅಧ್ಯಕ್ಷ ರವಿ ಎಸ್. ಪೂಜಾರಿ, ಉದ್ಯಮಿಗಳು ಮಹಮ್ಮದ್ ಅಶ್ರಫ್ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಭಗೀರಥ ಜಿ. ಸ್ವಾಗತಿಸಿದರು. ಮೋನಪ್ಪ ಪೂಜಾರಿ ಕಂಡೆತ್ಯಾರು ಪ್ರಸ್ತಾಪಿಕವಾಗಿ ಮಾತನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು, ಸಂಘದ ನಿರ್ದೇಶಕರಾದ ಚಂದ್ರಶೇಖರ್ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ, ಜಗದೀಶ್ಚಂದ್ರ ಡಿ.ಕೆ., ಶೇಖರ ಬಂಗೇರ, ಚಂದ್ರಶೇಖರ್, ಕೆ.ಪಿ. ದಿವಾಕರ್, ಡಾ. ರಾಜರಾಮ್, ಕೆ.ಬಿ. ಜಯವಿಕ್ರಮ್, ಹಿರಿಯಡ್ಕ ಶಾಖೆಯ ಶಾಖಾವ್ಯವಸ್ಥಾಪಕ ನಿರಂಜನ್, ವಿವಿಧ ಶಾಖೆಗಳ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.






