ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ
Facebook
Twitter
LinkedIn
WhatsApp

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ಘಟಕದ ಸ್ವಯಂಸೇವಕ ನಾಯಕ ರಾಮಕೃಷ್ಣ ಶರ್ಮ ಎನ್. ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾಷ್ಟ್ರೀಯ ಸೇವಾ .ಯೋಜನೆ ಕೋಶದ ಸಹಯೋಗದೊಂದಿಗೆ ಆಗಸ್ಟ 6ರಿಂದ 12ರ ವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು 20 ಸ್ವಯಂಸೇವಕರು ಪ್ರತಿನಿಧಿಸಲಿದ್ದು, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ರಾಮಕೃಷ್ಣ ಶರ್ಮ ಪ್ರತಿನಿಧಿಸಲಿದ್ದಾರೆ.ದ್ವಿತೀಯ ಬಿ.ಕಾಂ. ವಿದ್ಯಾರ್ಥಿಯಾಗಿರುವ ಇವರು ಬೆಳ್ತಂಗಡಿಯ ಎನ್. ಮಹಾಲಿಂಗೇಶ್ವರ ಭಟ್ ಮತ್ತು ವಿದ್ಯಾ ದಂಪತಿಯ ಪುತ್ರ.

Latest 5

Related Posts