ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನಂತರತ್ನ ಸಭಾಭವನದಲ್ಲಿ ನಡ ಗ್ರಾಮದ 8 ಅಂಗನವಾಡಿ ಕೇಂದ್ರಗಳ 136 ಹಾಗೂ ಸ್ಥಳೀಯ ಶಾಲೆಯ 71 ಒಟ್ಟು 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಮತ್ತು ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, 7 ಜನರಿಗೆ ವೈದ್ಯಕೀಯ ಸಹಾಯಧನ ಮತ್ತು 4 ವಿಶೇಷ ಚೇತನರಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಆಗಸ್ಟ್ 16ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್00 ಗುತ್ತು ಮಕ್ಕಳಿಗೆ ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು. ಕಾರ್ಯಕ್ರಮದಲ್ಲಿ ಸಂದೀಪಾ ಸತೀಶ್ಚಂದ್ರ, ಧಾರಿಣಿ ಎಸ್. ಜೈನ್, ಸಂಗ್ರಾಮ್ ಸುರ್ಯಗುತ್ತು, ದೇವಸ್ಥಾನದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಅಜಿತ್ ಆರಿಗ, ಸಂಪತ್ ಕುಮಾರ್, ನಡ ಗ್ರಾಮ ಪಂಚಾಯತ್ ಸದಸ್ಯೆ ಶ ಸುಮಿತ್ರಾ, ಶಾಲಾ ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪ