ಸಿರಿಯನ್ ಕ್ಯಾಥೋಲಿಕ್ ಸೊಸೈಟಿ ಮಹಾಸಭೆ

ಸಿರಿಯನ್  ಕ್ಯಾಥೋಲಿಕ್ ಸೊಸೈಟಿ ಮಹಾಸಭೆ
Facebook
Twitter
LinkedIn
WhatsApp

ಬೆಳ್ತಂಗಡಿ: ಸಿರಿಯನ್ ವಿವಿಧೋದ್ದೇಶ ಸಹಕಾರ ಸಂಘದ 2024-25ನೇ ಸಾಲಿನ 16ನೇ ವಾರ್ಷಿಕ ಮಹಾಸಭೆ ಆಗಸ್ಟ್ 23ರಂದು ಲಾಯ್ಲ ಜ್ಯೋತಿ ಹಾಸ್ಪಿಟಲ್ ಬಳಿ ಇರುವ ಸಂಗಮ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಅನಿಲ್ ಎ.ಜೆ.ರವರ ಅಧ್ಯಕ್ಷತೆಯಲ್ಲಿ ಜರುಗಿತು. 2024-25 ನೇ ಸಾಲಿನಲ್ಲಿ ರೂಪಾಯಿ 164 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂಪಾಯಿ 72.70ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ 16% ಡಿವಿಡೆಂಡ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎ.ಜೆ. ರವರು ತಿಳಿಸಿದರು.ಸಂಘದ ಉಪಾಧ್ಯಕ್ಷ ಜಾರ್ಜ್ ಎಮ್.ವಿ. ರವರು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಜ್ ಪಿ.ಎ. 2024-25 ಸಾಲಿನ ವರದಿ ಹಾಗೂ ಲೆಕ್ಕ ಪತ್ರವನ್ನು ಮಂಡಿಸಿದರು. ನಿರ್ದೇಶಕರುಗಳಾದ ಸೆಬಾಸ್ಟಿಯನ್ ವಿ.ಟಿ., ಜೈಸನ್ ಪಟ್ಟೇರಿಲ್, ಅಂದಾನಿ ಕೆ.ಡಿ., ಬಾಬು ತೋಮಸ್, ಬಿಜು ಪಿ.ಪಿ., ಬಿಜು ಎಮ್.ಜೆ., ಸೆಬಾಸ್ಟಿಯನ್, ಸೋಪಿ ಜೋಸೆಫ್, ಫಿಲೋಮಿನಾ ವಿ. ಉಪಸ್ಥಿತರಿದ್ದರು.ಬೆಳ್ತಂಗಡಿ ಮತ್ತು ಕಡಬ ತಾಲೂಕಿನಲ್ಲಿರುವ ಸಂಘದ ಸದಸ್ಯರುಗಳ ಪೈಕಿ ಕಳೆದ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಯಲ್ಲಿ 95% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳನ್ನು ಸಂಘದ ವತಿಯಿಂದ ಅಭಿನಂದಿಸಲಾಯಿತು. ಅದೇ ರೀತಿ ಸಂಘದ ಸದಸ್ಯರುಗಳಾದ ಮಾಜಿ ಸೈನಿಕರನ್ನು ಗುರುತಿಸಿ ಸಮ್ಮಾನಿಸಲಾಯಿತು. ನಿರ್ದೇಶಕ ಸೆಬಾಸ್ಟಿಯನ್ ಬಂಗಾಡಿ ಯವರು ವಂದಿಸಿದರು. ಕಾರ್ಯಕ್ರಮಗಳನ್ನು ಯಶ್ವಸಿಯಾಗಿ ನಡೆಸಲು ಸಿಬ್ಬಂದಿ ವರ್ಗದವರು ಸಹಕರಿಸಿದರು. ಶಾಖಾ ವ್ಯವಸ್ಥಾಪಕರಾದ ಸುಜಾ ಜೇಮ್ಸ್ ಹಾಗೂ ರೇಷ್ಮಾ ಅಬ್ರಾಹಂರವರು ಕಾರ್ಯಕ್ರಮವನ್ನು ನಿರೂಪಿಸಿದರು.

Latest 5

Related Posts