ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನವನ್ನು ಏಪ್ರಿಲ್ 06ರಂದು ಬೆಳ್ತಂಗಡಿಯ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದಿನದ ಮಹತ್ವ ವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬಿ.ಎಸ್. ತಿಳಿಸಿದರು. ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಶುಭಹಾರೈಕೆ ಮಾಡಿದರು. ವಿಧಾನ ಪರಿಷತ್ ಶಾಸಕರಾಗಿರುವ ಪ್ರತಾಪ್ಸಿಂಹ ನಾಯಕ್ ಉಪಸ್ಥಿತರಿದ್ದರು, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
r






