Pಬೆಳ್ತಂಗಡಿಯ ಶಾಸಕರಾದಹರೀಶ್ ಪೂಂಜ ಅವರುತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರದಿಂದ ಮಹತ್ವದ ಅನುದಾನವನ್ನು ಒದಗಿಸಿದ್ದಾರೆ.ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂಪಾಯಿ 1ಕೋಟಿ,ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ರೂಪಾಯಿ 20ಲಕ್ಷ, ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ, ಉಜಿರೆಉ ಅಭಿವೃದ್ಧಿ ಕಾರ್ಯಕ್ಕೆ ರೂಪಾಯಿ 10 ಲಕ್ಷ,ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬ ರುಕುಮಾಯಿ ದೇವಸ್ಥಾನದ ಅಭಿವೃದ್ಧಿಗೆ ರೂಪಾಯಿ 5 ಲಕ್ಷ, ಶ್ರೀ ಅನಂತೇಶ್ವರ ದೇವಸ್ಥಾನ, ಬಳ್ಳಮಂಜದ ಅಭಿವೃದ್ಧಿಗೆ ರೂಪಾಯಿ 10 ಲಕ್ಷ, ಚಿಬಿದ್ರೆ ಗ್ರಾಮದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಕುಡುಮಡ್ಕದ ಅಭಿವೃದ್ಧಿಗೆ ರೂಪಾಯಿ 5 ಲಕ್ಷ ಹಾಗೂ ಮಚ್ಚಿನ ಗ್ರಾಮದ ಮಾಣೂರು ಶ್ರೀ ಧರ್ಮಶಾಸ್ತಾವು ದೇವಸ್ಥಾನದ ಅಭಿವೃದ್ಧಿಗೆ ರೂಪಾಯಿ 10 ಲಕ್ಷ ಅನುದಾನವನ್ನು ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಶಾಸಕ ಹರೀಶ್ ಪೂಂಜ ಮಂಜೂರುಗೊಳಿಸಿರುತ್ತಾರೆ.






