ಮೇ 8, ವಿಶ್ವ ರೆಡ್ ಕ್ರಾಸ್ ದಿನಾಚರಣೆ; ಬೆಳ್ತಂಗಡಿ ರೋಟರಿ ಕ್ಲಬ್ ಸದಸ್ಯರು ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. 88 ಬಾರಿ ರಕ್ತದಾನ ಮಾಡಿ ಸಾಕಷ್ಟು ಜೀವ ಉಳಿಸಿದ ಅತ್ತಾಜೆ ಕೇಶವ ಭಟ್ಟರನ್ನು ಸಮ್ಮಾನಿಸುವ ಮೂಲಕ ರಕ್ತದಾನದ ಮಹತ್ವದ ಸಂದೇಶ ಸಾರಿದರು. ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷ ಜಯರಾಮ್, ಮಾಜಿ ಅಧ್ಯಕ್ಷ ಯಶವಂತ ಪಟವರ್ಧನ್, ನಿಯೋಜಿತ ಅಧ್ಯಕ್ಷ ಧನಂಜಯ ರಾವ್ ಬಿ.ಕೆ., ಚುನಾಯಿತ ರೋಟರಿ ಜಿಲ್ಲಾ ಉಪರಾಜ್ಯಪಾಲ ಪ್ರತಾಪ ಸಿಂಹ ನಾಯಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







