ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ನ ಅಳಕ್ಕೆಯ ರಿಕ್ಷಾ ಚಾಲಕರ ಹಾಗೂ ನಾಗರಿಕರ ಬಹುಕಾಲದ ಬೇಡಿಕೆಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಯವಿಕ್ರಮರ ಕೋರಿಕೆಯ ಮೇರೆಗೆ ಸ್ಪಂದಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ, ಸೋಜಾ ಅವರು ತಮ್ಮ ಪ್ರದೇಶಾಭಿವೃದ್ದಿ ನಿಧಿಯಿಂದ ನೀಡಿದ ರೂಪಾಯಿ 2.5ಲಕ್ಷ ಅನುದಾನದಲ್ಲಿ ಅಳಕ್ಕೆಯಲ್ಲಿ ನಿರ್ಮಿಸಲಾದ ರಿಕ್ಷಾ ತಂಗುದಾಣವನ್ನು ಜುಲೈ 4ರಂದು ಬೆಳ್ತಂಗಡಿಯ ಮಾಜಿ ಶಾಸಕ ಕೆ ವಸಂತ ಬಂಗೇರಉದ್ಘಾಟನೆ ಮಾಡಿ ಲೋಕಾರ್ಪಣೆಗೊಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ. ಸೋಜಾ, ಹಾಲಿ ಸದಸ್ಯ ಹರೀಶ್ ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ತಾಲೂಕ್ ಪಂಚಾಯತ್ ಸದಸ್ಯೆ ಕೇಶವತಿ, ಗ್ರಾಮ ಪಂಚಾಯತ್ ಅಧ್ಯಕ್ಷ ಜಯವಿಕ್ರಮ್, ಪಂಚಾಯತ್ಅ ಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಆನಂದ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್, ಸದಾನಂದ ಶೆಟ್ಟಿ ಮಡಪ್ಪಾಡಿ, ಐಯೂಬ್ ಡಿ. ಕೆ, ನವೀನ್ ಕುಮಾರ್ ತಾಜುದ್ದೀನ್, ಆದo, ಆಟೋ ರಿಕ್ಷಾ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ಕಾರ್ಯಕ್ರಮದಲ್ಲಿ ಭಾವಹಿಸಿದ ಬಹುತೇಕ ಮಂದಿ ಮಾಸ್ಕ್ ಸರಿಯಾಗಿ ಧರಿಸದೇ, ವೈಯಕ್ತಿಕ ಅಂತ ರ ಕಾಪಾಡದೇ ಕೊರೋನಾ ಸೋಂಕು ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಧಿಕ್ಕರಿಸಿದ್ದು; ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಕೊರೋನಾ ಪ್ರಕರಣ ಪತ್ತೆಯಾದ ತಣ್ಣೀರುಪಂತ ಗ್ರಾಮ ಪಂಚಾಯತ್ನ ಕಾನೂನು ಗೌರವಿಸುವ-ಪಾಲಿಸುವ ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ.







