ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೆರಿಯ ಶಾಖೆಯಲ್ಲಿ ಶಾಖಾ ಪ್ರಬಂಧಕರಾಗಿ ಸೇವೆ ಸಲ್ಲಿಸಿ ಎಪ್ರಿಲ್ 30ರಂದು ವಯೋ ನಿವೃತ್ತಿ ಹೊಂದಿದ ಸಹಕಾರಿ ಎಂ. ಎಸ್. ಕರುಣಾಕರ ಗೌಡರ ಸುದೀರ್ಘ ಸೇವೆಯನ್ನು ಗುರುತಿಸಿ, ಸಂಘದ ಮುಂಡಾಜೆ ಕೇಂದ್ರ ಕಛೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ನೂಜಿ ಜನಾರ್ದನ ಗೌಡ, ಉಪಾಧ್ಯಕ್ಷ ಪ್ರಕಾಶ್ ನಾರಾಯಣ ರಾವ್ ಹಾಗೂ ಸಿಇಒ ನಾರಾಯಣ ಫಡ್ಕೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







