ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಇವರ ಸಹಯೋಗದಲ್ಲಿ ಇಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಕೊರೋನಾ ಸೋಂಕಿನ ಸಂದರ್ಭ ಕೊರೋನಾ ವಾರಿಯರ್ಸ್ಗೆ ಬಳಕೆ ಮಾಡಲು “ಆಪ್ತರಕ್ಷಕ’ ಎರಡು ವಾಹನವನ್ನು ಪಟ್ಟಣ ಪಂಚಾಯತಿನ ಮಖ್ಯಾಧಿಕಾರಿ ಸುಧಾಕರ್ ಅವರಿಗೆ ಬದುಕು ಕಟ್ಟೋಣ ಬನ್ನಿ ತಂಡದ ಮೋಹನ್ ಕುಮಾರ್ ಉಜಿರೆ, ರಾಜೇಶ್ ಪೈ ಉಜಿರೆ ಹಾಗೂ ಬೆಳ್ತಂಗಡಿ ರೋಟರಿ ಕ್ಲಬ್ ಅದ್ಯಕ್ಷ ಬಿ. ಕೆ. ಧನಂಜಯ ರಾವ್ ವಾಹನದ ಕೀಕೈ ನೀಡುವ ಮೂಲಕ ಹಸ್ತಾಂತರಿಸಿದರು.ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಜನಿ ಕುಡ್ವ, ಸ್ಥಾಯಿ ಸಮಿತಿ ಅಧ್ಯಕ್ಷೆ ತುಳಸಿ ಕರುಣಾಕರ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಪಟ್ಟಣ ಪಂಚಾಯತ್ ಇಂಜಿನಿಯರ್ ಮಹಾವೀರ ಅರಿಗ, ರೋಟರಿ ಕ್ಲಬ್ನ ಕಾರ್ಯದರ್ಶಿ ಶ್ರೀಧರ್ ಕೆ. ವಿ., ರೋಟರಿ ಕ್ಲಬ್ ಪೂರ್ವಧ್ಯಕ್ಷ ಯಶವಂತ ಪಟ್ಟವರ್ದನ್, ಉದ್ಯಮಿ ಜೈಸನ್ ಡಿ’ಸೋಜಾ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಶಶಿಧರ್ ಕಲ್ಮಂಜ, ಉದ್ಯಮಿ ರವಿ ಚಕ್ಕಿತ್ತಾಯ ಮತ್ತಿತರರು ಉಪಸ್ಥಿತರಿದ್ದರು.








