ಬೆಳ್ತಂಗಡಿ: ವೇಣೂರಿನಲ್ಲಿ ಮೇ 4ರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕ ನಡೆಯಿತು.ಮೂಡಬಿದ್ರೆ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ| ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೊದಲಾದವರು ಭಾಗವಹಿಸಿದ್ದರು.ಇನ್ನು 12 ವರ್ಷಗಳ ಬಳಿಕ 2036ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.






