ರಾಷ್ಟೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

ರಾಷ್ಟೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
Facebook
Twitter
LinkedIn
WhatsApp

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ರಾಷ್ಟೀಯ ಸೇವಾ ಯೋಜನೆ ಶ್ರೀ ಮಹಾವೀರ ಪದವಿಪೂರ್ವ ಕಾಲೇಜು ಮೂಡುಬಿದಿರೆಯ ಜಂಟಿ ಆಶ್ರಯದಲ್ಲಿ ರಾಷ್ಟೀಯ ಸೇವಾ ಯೋಜನೆ ಘಟಕದ 7 ದಿನಗಳ ವಾರ್ಷಿಕ ವಿಶೇಷ ಶಿಬಿರ ಪಡ್ಡಂದಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಶಿಬಿರವನ್ನು ಉದ್ಘಾಟಿಸಿದ ಪ್ರಗತಿಪರ ಕೃಷಿಕ ಬಾಲ್ಯ ಶಂಕರ್ ಭಟ್ ಮಾತನಾಡಿ; ಈ ಶಿಭಿರವು ವಿದ್ಯಾರ್ಥಿಗಳಿಗೆ ಜೀವನಕ್ಕೆ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡುತ್ತದೆ. ಜನಸಾಮಾನ್ಯರೊಂದಿಗೆ ಬೆರೆಯುವ, ಅವರ ಸಮಸ್ಯೆಯನ್ನು ಅರಿಯುವ ಅವಕಾಶ ನೀಡುತ್ತದೆ ಎಂದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಉದ್ಯಮಿ ಧರಣೇಂದ್ರ ಕುಮಾರ್ ಮಾತನಾಡಿ; ಶಿಭಿರವು ವಿದ್ಯಾರ್ಥಿಗಳಿಗೆ ಹಳ್ಳಿಯ ಜೀವನ, ವ್ಯಕ್ತಿತ್ವವಿಕಸನ, ಬಾವೈಕತೆ ಇತ್ಯಾದಿಗಳ ಬಗ್ಗೆ ಅನುಭವ ನೀಡುತ್ತದೆ ಎಂದರು.ಪಡ್ಡಂದಡ್ಕ ನೂರುಲ್ ಹುಧಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ. ಪೆರಿಂಜೆ ಶುಭ ಹಾರೈಸಿ ಮಾತನಾಡಿ; ಈ ಶಿಭಿರವನ್ನು ಯಶಸ್ವಿ ಮಾಡುವ ಜವಾಬ್ದಾರಿ ಈ ಊರಿನ ನಾಗರೀಕರದ್ದು. ಶಿಭಿರಾರ್ಥಿಗಳಿಗೆ ಶಿಭಿರದ ಬಗ್ಗೆ ಸುಂದರ ನೆನಪುಗಳು ಬರುವಂತೆ ಎಲ್ಲಾ ವಿಧದ ಸಹಕಾರ ನೀಡತ್ತೇವೆ ಎಂದರು.ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಅಧಿಕಾರಿ ಎಚ್.ಎನ್. ಜಗದೀಶ್ ಮಾತನಾಡಿ; ಭವಿಷ್ಯದಲ್ಲಿ ಎದುರಾಗುವ ಎಲ್ಲ ಸಂದರ್ಭ ಅನುಭವಿಸಲು ಈ ಶಿಭಿರ ಸಹಕಾರಿ ಮತ್ತು ಯಾವುದೇ ಆತಂಕ ಹಿಂಜರಿಕೆ ಇಲ್ಲದೆ ಭಾಗವಹಿಸಿ ಮತ್ತು ನಿಮ್ಮ ನಡೆ-ನುಡಿ ಪ್ರಾಮಾಣಿಕವಾಗಿರಲಿ ಎಂದು ಶಿಭಿರಾರ್ಥಿಗಳಿಗೆ ಕಿವಿ ಮಾತು ಹೇಳಿ ಶುಭ ಹಾರೈಸಿದರು.ಹೊಸಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಮಾತನಾಡಿ; ಇಂತಹ ಶಿಭಿರಗಳು ಎಲ್ಲಾ ಇಲ್ಲಗಳ ನಡುವೆ ಬರುವ ಸಮಸ್ಯೆಗಳನ್ನು ಎದುರಿಸಿ ಉತ್ತಮ ನಾಗರಿಕರಾಗಿ ಬೆಳೆಯಲು, ಶಿಸ್ತು ನಾಯಕತ್ವವನ್ನು ಬೆಳೆಯಿಸಿಕೊಳ್ಳಲು ಅವಕಾಶ ನೀಡುತ್ತದೆ ಎಂದರು.ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು ಮೂಡಬಿದಿರೆಯ ಪ್ರಾಂಶುಪಾಲ ರಮೇಶ್ ಭಟ್ ಮಾತನಾಡಿ: ಶುಭ 7 ದಿನಗಳ ಶಿಭಿರ ಉತ್ತಮ ಅನುಭವ ನೀಡುವಂತಾಗಲಿ. ಇಲ್ಲಿ ಸಿಗುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳುವಂತೆ ಸೂಚಿಸಿದರುಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಟ್ರಸ್ಟ್‌ನ ಕಾರ್ಯದರ್ಶಿ ಡಾ. ರಾಧಾಕೃಷ್ಣ ಮಾತನಾಡಿ; ಶಿಭಿರಾರ್ಥಿಗಳಿಗೆ ಜೀವನ ಪರಿಯಂತ ನೆನಪಿಡುವಂತಹ ಸುಂದರ ಅನುಭವಗಳನ್ನು ಮತ್ತು ಜೀವನದ ಮೌಲ್ಯಗಳನ್ನು ಅರಿತುಕೊಳ್ಳಲು ಈ ಶಿಭಿರ ಸಹಕಾರಿ. ಇಲ್ಲಿ ಪಡೆದ ಅನುಭವಗಳನ್ನು ಮುಂದಿನ ಜೀವನದಲ್ಲಿ ಅಳವಡಿಸುವಂತೆ ಶಿಬಿರಾರ್ಥಿಗಳಿಗೆ ಕರೆಕೊಟ್ಟರು.ವೇದಿಕೆಯಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಹರಿಪ್ರಸಾದ್ ಹೊಸಂಗಡಿ, ಪ್ರಕಾಶ್ ದೇವಾಡಿಗ, ಶಾಲಾ ಹಿರಿಯ ಶಿಕ್ಷಕಿ ವಿನೋಧ ಕುಮಾರಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ್, ರಾಷ್ಟ್ರೀಯಾ ಸೇವಾ ಯೋಜನೆ ಕಾರ್ಯದರ್ಶಿಗಳಾದ ಪೂಜಾ, ಶಿವಾನಂದ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಕಾರ್ಯಕ್ರಮಧಿಕಾರಿ ರಶ್ಮಿತಾ ಸ್ವಾಗತಿಸಿದರು. ಉಪನ್ಯಾಸಕಿ ಕವಿತಾ ಮತ್ತು ಸುಪ್ರಿತಾ ಕಾರ್ಯಕ್ರಮ ಸಂಯೋಜಿಸಿದರು.

Latest 5

Related Posts