ಬೆಳ್ತಂಗಡಿ : ಮಹಾಮಾರಿ ಕೊರಾನಾ ವೈರಸ್ನಿಂದ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನಗರ ಪಂಚಾಯತಿಯ 5ನೇ ವಾರ್ಡ್ ನಲ್ಲಿ ತೀರಾ ಸಂಕಷ್ಟಕ್ಕೆ ಒಳಗಾಗಿರುವ ಸುಮಾರು 21 ಅರ್ಹ ಬಡ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಂಗಳವಾರ ನಡೆಯಿತು.ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರ ಸಹಕಾರದೊಂದಿಗೆ 5ನೇ ವಾರ್ಡ್ ನ ನಗರ ಪಂಚಾಯಿತಿ ಸದಸ್ಯ ಜನಾರ್ದನ ಕುಂಬಾರ ವೈಯಕ್ತಿಕ ಅಂತರ ಕಾಯ್ದುಕೊಂಡು ಕಿಟ್ ವಿತರಿಸಿದರು.








