ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆಗಸ್ಟ್ 24ರಂದು ಬೆಳ್ತಂಗಡಿಯ ಸುವರ್ಣ ಆರ್ಕೇಡ್ನಲ್ಲಿ ನಡೆಯಿತು.ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ಮಹಸಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ ಜ್ಯೋತಿರಾಜ್ ಸಂಘದ ಗತವರ್ಷದ ವರದಿಯನ್ನು ಸಭೆಗೆ ಮಂಡಿಸಿ 2025-26 ನೇ ಸಾಲಿನ ಬಜೆಟ್ ಮಂಡಿಸಿದರು. ಕ್ಲಪ್ತ ಸಮಯದಲ್ಲಿ ದಂಡನೆ ಬಡ್ಡಿ ಇಲ್ಲದೆ ಸಾಲ ಮರುಪಾವತಿ ಮಾಡಿದ ಗ್ರಾಹಕರನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಕಳೆದ ಶೈಕ್ಷಣಿಕ ವರ್ಷ ನಡೆದ […]
ಶಿಸ್ತು ಹಾಗೂ ಬದ್ಧತೆ ಅಳವಡಿಸಿಕೊಳ್ಳದವ ಸಂಘದ ಸ್ವಯಂ ಸೇವಕನೇ ಅಲ್ಲ-ಹರೀಶ್ ಪೂಂಜ

Lಬೆಳ್ತಂಗಡಿ: ಸಂಘದ ಶಿಸ್ತು ಹಾಗೂ ಬದ್ಧತೆ ಅಳವಡಿಸಿಕೊಳ್ಳದ ಯಾವುದೇ ವ್ಯಕ್ತಿ ಸಂಘದ ಸ್ವಯಂಸೇವಕನೇ ಅಲ್ಲ. ಅಂತಹ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಮತ್ತು ಸಂಘದ ಪ್ರಮುಖರನ್ನು ಸಾರ್ವಜನಿಕವಾಗಿ ನಿಂದಿಸುತ್ತಿದ್ದಾರೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಟೀಕಿಸಿದರು.ಅವರು ಆಗಸ್ಟ್ 17ರಂದು ಗುರುವಾಯನಕೆರೆಯ ನವಶಕ್ತಿ ಸಭಾಂಗಣದಲ್ಲಿ ಕರೆಯಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ತೀರಾ ಅವಹೇಳನಕಾರಿಯಾಗಿ ಮಾತನಾಡಿದ ಹಿಂದು ಸಂಘಟನೆಯ ಮುಖವಾಡದ […]
ಸಮವಸ್ತ್ರ ಮತ್ತು ಪ್ರೋತ್ಸಾಹಧನ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನಂತರತ್ನ ಸಭಾಭವನದಲ್ಲಿ ನಡ ಗ್ರಾಮದ 8 ಅಂಗನವಾಡಿ ಕೇಂದ್ರಗಳ 136 ಹಾಗೂ ಸ್ಥಳೀಯ ಶಾಲೆಯ 71 ಒಟ್ಟು 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಮತ್ತು ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, 7 ಜನರಿಗೆ ವೈದ್ಯಕೀಯ ಸಹಾಯಧನ ಮತ್ತು 4 ವಿಶೇಷ ಚೇತನರಿಗೆ ಸಹಾಯಧನ ವಿತರಣಾ ಕಾರ್ಯಕ್ರಮ ಆಗಸ್ಟ್ 16ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಅನುವಂಶಿಕ […]
ಅಧ್ಯಾಪಕರು ತರಬೇತಿಗಳನ್ನು ಪಡೆದು ತಮ್ಮ ಜ್ಞಾನ ಭಂಡಾರವನ್ನು ವೃದ್ಧಿಸಬೇಕು’

‘ಬೆಳ್ತಂಗಡಿ: ನಾವು ಪ್ರತಿಯೊಬ್ಬರೂ ಕಲಿಕೆಯನ್ನು ನಮ್ಮ ಬದುಕಿನ ಗಳಿಕೆಯೆಂದು ಅರ್ಥೈಸಿಕೊಳ್ಳಬೇಕು. ಪ್ರತಿಯೊಬ್ಬ ಶಿಕ್ಷಕರು ಮುಂದುವರಿದ ತರಬೇತಿಯನ್ನು ಪಡೆದು ತಮ್ಮ ಜ್ಞಾನವನ್ನು ಮತ್ತಷ್ಟು ವೃದ್ಧಿಸಿಕೊಳ್ಳಬೇಕು. ಆಗ ಅದರ ಪ್ರಯೋಜನ ನಮ್ಮ ಮುಂದಿನ ಭವಿಷ್ಯದ ಪೀಳಿಗೆಗೆ ನೀಡಲು ಸಾಧ್ಯವಾಗುತ್ತದೆ. ಅಂತಹ ಕಾಯಕದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಿ. ಅದೇ ರೀತಿ ಮಡಂತ್ಯಾರು ಸ್ಥಳೀಯ ಸಂಸ್ಥೆಯು ತಮ್ಮ ಸ್ವಂತ ಜಾಗವನ್ನು ವ್ಯವಸ್ಥೆ ಮಾಡುವುದರೊಂದಿಗೆ ಕಟ್ಟಡವನ್ನು ಕೂಡ ಕಟ್ಟುವ ಬಗ್ಗೆ ಯೋಜನೆಗಳನ್ನು ಹಾಕಿಕೊಳ್ಳಬೇಕು. ಈ ಯೋಜನೆಗೆ ಸರ್ವರ ಸಹಕಾರವು ಖಂಡಿತ ದೊರೆಯಲಿದೆ. ಜಿಲ್ಲಾ ಸಂಸ್ಥೆಯು ಸದಾ […]
ಎಸ್ಐಟಿ ತನಿಖೆಯ ನೆಪದಲ್ಲಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ತಕ್ಷಣ ಕಡಿವಾಣ ಹಾಕಬೇಕು- ಬಿ.ವೈ. ವಿಜಯೇಂದ್ರ

ಬೆಳ್ತಂಗಡಿ: ಸುಮಾರು ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಕಳೆದ ಕೆಲವು ದಿನಗಳಿಂದ ಯೂಟ್ಯೂಬ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಎಸ್ಐಟಿ ತನಿಖೆಯ ನೆಪದಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ತಡೆಯಲು ರಾಜ್ಯ ಸರಕಾರ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಂಡು ಇಂತಹ ಕುಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.ಅವರು ಜುಲೈ 17ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, […]
ಧರ್ಮಸ್ಥಳದ ಬಗ್ಯೆ ಅಪಪ್ರಚಾರ ತಡೆಗಾಗಿ ಭಕ್ತರಿಂದ ದೇವಸ್ಥಾನದಲ್ಲಿ ಉರುಳು ಸೇವೆ

: ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇತರ ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವದಂತಿ ಹಾಗೂ ಅಪಪ್ರಚಾರ ತಡೆಯಲು ಮತ್ತು ಎಲ್ಲಾ ಪ್ರಕರಣಗಳು ಶೀಘ್ರ ಇತ್ಯರ್ಥವಾಗಲಿ ಎಂದು ಪ್ರಾರ್ಥಿಸಿ ಬೆಂಗಳೂರಿನಿಂದ ಬಂದ ಸಾತ್ವಿಕರು; ಕನ್ನಡಿಗರ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಕನ್ನಡ ಪ್ರಕಾಶ್ ಅವರ ನೇತೃತ್ವದಲ್ಲಿ ಜುಲೈ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವಸ್ಥಾನದಲ್ಲಿ ಉರುಳು ಸೇವೆ ಸಲ್ಲಿಸಿ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಎಂಟು ಶತಮಾನಗಳ ಭವ್ಯ […]
ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ’

‘ಬೆಳ್ತಂಗಡಿ: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು ತನ್ಮಯತೆಯೊಂದಿಗೆ ಶ್ರದ್ಧಾ-ಭಕ್ತಿಯಿಂದ ಪುರಾಣ ವಾಚನ-ಪ್ರವಚನ ಶ್ರವಣದಿಂದ ಪ್ರತಿಯೊಬ್ಬರ ಮನದಲ್ಲೂ, ಮನೆಯಲ್ಲೂ ಸುಖ-ಶಾಂತಿ-ನೆಮ್ಮದಿ ನೆಲೆಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಡಾ. ಶಾಂತರಾಮ ಪ್ರಭು ನಿಟ್ಟೂರು ಹೇಳಿದರು.ಅವರು ಜುಲೈ 16ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.ಮಹಾಭಾರತ ಕಥೆ ಕೇಳಿ ಕುಷ್ಠ ರೋಗ ನಿವಾರಣೆಯಾಗಿದೆ […]
ವೈದ್ಯರು ಸಮಾಜದ ಹೃದಯವಿದ್ದಂತೆ – ಡಾ. ಗೋಪಾಲಕೃಷ್ಣ

ಬೆಳ್ತಂಗಡಿ: ನಮಗೆಲ್ಲ ತಿಳಿದಿರುವ ನಾಣ್ಣುಡಿ ‘ಆರೋಗ್ಯವೇ ಭಾಗ್ಯ’ ‘ಆದರೆ ಅನಿರೀಕ್ಷಿತವಾಗಿ ನಮ್ಮ ಆರೋಗ್ಯದಲ್ಲಿ ಏರುಪೇರಾದಾಗ ನಾವು ಮೊದಲು ಸಂಪರ್ಕಿಸುವುದು ವೈದ್ಯರನ್ನು. ಸದಾ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಎಲ್ಲ ವೈದ್ಯರನ್ನು ಸ್ಮರಿಸಿಕೊಳ್ಳಲು ಪ್ರತಿ ವರ್ಷ ಜುಲೈ 1ನೇ ತಾರೀಕನ್ನು ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ. ರಾಯ್ ರವರ ನೆನಪಿಗಾಗಿ ವೈದ್ಯರ ದಿನವನ್ನಾಗಿ ಆಚರಿಸಿ ಅವರಿಗೆ ನಮ್ಮ ಕೃತಜ್ಞತೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ.ಆ ಕರ್ತವ್ಯವನ್ನು ಕಳೆದ ಹಲವಾರು ವರ್ಷಗಳಿಂದ ಉಜಿರೆಯ ಬೆನಕ ಹೆಲ್ತ್ […]
ಉಪ್ಪಿನಂಗಡಿ-ಕಲ್ಲೇರಿ -ಬಳ್ಳಮಂಜ- ಮಡಂತ್ಯಾರ್- ಮಂಗಳೂರು ಮಾರ್ಗವಾಗಿ ಸರಕಾರಿ ಬಸ್ ಪ್ರಾರಂಭಿಸುವಂತೆ ಮನವಿ

ಬೆಳ್ತಂಗಡಿ: ಉಪ್ಪಿನಂಗಡಿ-ಕಲ್ಲೇರಿ-ಬಳ್ಳಮಂಜ- ಮಡಂತ್ಯಾರ್- ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರಕಾರಿ ಬಸ್ ಪ್ರಾರಂಭಿಸುವಂತೆ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿಯವರು ಜೂನ್ 30ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್, ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪೂಜಾರಿ ಮಚ್ಚಿನ, […]
ಡಾ. ದಿವಾ ಕೊಕ್ಕಡ ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಆಯ್ಕೆ

ಬೆಳ್ತಂಗಡಿ:ತುಳುನಾಡಿನ ಸಾಂಸ್ಕೃತಿಕ ಅಧ್ಯಯನ ಮತ್ತು ಭಾಷಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಡಾ. ದಿವಾಕರ ಕೆ. (ದಿವಾ ಕೊಕ್ಕಡ) ಅವರನ್ನು ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.ಈ ನೇಮಕಾತಿ ತುಳುನಾಡಿನ ಪರಂಪರೆ, ಸಂಸ್ಕೃತಿ ಮತ್ತು ಭಾಷೆಯ ಸಂರಕ್ಷಣೆಗೆ ನೂರಾರು ವರ್ಷಗಳಿಂದ ಶ್ರಮಿಸುತ್ತಿರುವ ಮಹಾಸಭೆಯ ಶತಮಾನೋತ್ಸವ ಪುನಶ್ಚೇತನ ಅಭಿಯಾನಕ್ಕೆ ಶಕ್ತಿಯುತ ಸಹಕಾರ ನೀಡಲಿದೆ ಎಂದು ಸಂಘಟಕರ ಅಭಿಪ್ರಾಯಪಟ್ಟಿದ್ದಾರೆ.ಡಾ. ದಿವ ಕೊಕ್ಕಡ ಅವರು ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಕನ್ನಡ ಸಹಪ್ರಾಧ್ಯಾಪಕರಾಗಿ […]