ಸರ್ವಿಸ್ ಟೆಂಪೋ ಚಾಲಕ- ಮಾಲಕರಿಗೆ ಆಹಾರದ ಕಿಟ್ ವಿತರಣೆ
ಮಾಸ್ಕ್ ಧರಿಸಿ ವೈಯಕ್ತಿಕ ಅಂತರದ ಬಗ್ಗೆ ಎಚ್ಚರಿಕೆ ವಹಿಸಿದ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನಿಂದ ಊರುಗಳಿಗೆ ಹೋಗುವ ಪ್ರಯಾಣಿಕರನ್ನು ಕರೆದೊಯ್ಯುವ ಟೂರಿಸ್ಟ್ ಟೆಂಪೋ ಚಾಲಕ-ಮಾಲಕರು ಕೊರೊನಾ ಲಾಕ್ ಡೌನ್ ನಿಂದಾಗಿ ಬಾಡಿಗೆ ಮಾಡಲಾಗದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಟೂರಿಸ್ಟ್ ವಾಹನ ಚಾಲಕ ಮಾಲಕ ಸಂಘದ ಸದಸ್ಯರಿಗೆ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ಆಹಾರದ ಕಿಟ್ ಗಳನ್ನು ವಿತರಿಸಿದರು. ಎಲ್ಲರೂ ಮಾಸ್ಕ್ ಧರಿಸಿ, ವೈಯಕ್ತಿಕ ಅಂತರದ ಬಗ್ಗೆ ಎಚ್ಚರವಹಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಬೆಳ್ತಂಗಡಿ ಸಂತೆಕಟ್ಟೆಯ ಬಳಿಯಿರುವ ಪ್ರಿಯದರ್ಶಿನಿ […]
ತಾಲೂಕು ಮುಸ್ಲಿಂ ಜಮಾಅತ್ನಿಂದ 250 ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ
ಮಾಸ್ಕ್ ಧಾರಣೆಯಲ್ಲಿ ಪರ್ಫೆಕ್ಟ್-ವೈಯಕ್ತಿಕ ಅಂತರ ಪಾಲನೆಯಲ್ಲಿ ಎಡವಟ್ಟು ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ (ಕೆ.ಎಮ್.ಜೆ.ಸಿ) ಇದರ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ತಾಲೂಕಿನ ಬ್ಲಾಕ್ ಸಮಿತಿ ಗಳ ಮೂಲಕ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಒಟ್ಟು 250 ಆಯ್ದ ಕುಟುಂಬಗಳಿಗೆ ಆಹಾರ ವಸ್ತುಗಳ ಕಿಟ್ ಗಳನ್ನು ಮೇ.11 ರಂದು ವಿತರಿಸ ಲಾಯಿತು. ಸಂಘಟನೆಯ ಎಲ್ಲ ಪ್ರಮುಖರೂ ಸರಿಯಾಗಿ ಮಾಸ್ಕ್ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೂ; ವೈಯಕ್ತಿಕ ಅಂತರ ಪಾಲಿಸದೇ ಎಡವಟ್ಟು ಮಾಡಿಕೊಂಡದ್ದರಿಂದ ಕೊರೋನಾ ಸೋಂಕು ಹರಡುವಿಕೆಯ ವಿರುದ್ಧ ಜಾಗೃತಿ ಮೂಡಿಸುವಲ್ಲಿ […]
ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವಿಶ್ವಾಸ
ಗ್ರಾಮ ಪಂಚಾಯತಿನ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ವಿಫಲರಾಗಿ ಪ್ರತಿಪಕ್ಷ ಕಾಂಗ್ರೇಸ್ ಮಾತ್ರವಲ್ಲ; ಸ್ವಪಕ್ಷೀಯರಾದ ಬಿಜೆಪಿ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಿದ್ದ ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ವಿ. ಶೆಟ್ಟರ ಮೇಲೆ ಎಲ್ಲ ಸದಸ್ಯರೂ ಭ್ರಷ್ಟಾಚಾರದ ಆರೋಪವನ್ನೂ ಈ ಹಿಂದೆ ಹೊರಿಸಿ ತನಿಖೆಗೆ ಆಗ್ರಹಿಸಿದ್ದರು. ಇದೀಗ ಮೇ 11ರಂದು ಗ್ರಾಮ ಪಂಚಾಯತಿನ ಎಲ್ಲ 23ಮಂದಿ ಸದಸ್ಯರು ಒಗ್ಗಟ್ಟಾಗಿ ಪಕ್ಷಭೇದ ಮರೆತು ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿಯವರ ವಿರುದ್ಧ ಅವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಪುತ್ತೂರಿನ ಸಹಾಯಕ ಕಮಿಷನರರಿಗೆ ಲಿಖಿತವಾಗಿ […]
ಆಂಬುಲೆನ್ಸ್ ಚಾಲಕರು ಮತ್ತು ಸಿಬ್ಬಂದಿಗಳಿಗೆ ಆಹಾರದ ಕಿಟ್ ವಿತರಣೆ
ಮಾಸ್ಕ್ ಧರಿಸಿ ವೈಯಕ್ತಿಕ ಅಂತರದ ಬಗ್ಗೆ ಎಚ್ಚರಿಕೆ ವಹಿಸಿದ ಕಾರ್ಯಕ್ರಮ ರಸ್ತೆ ಅಪಘಾತ ಮತ್ತು ತುರ್ತು ಸಂಧರ್ಭದಲ್ಲಿ ರೋಗಿಯ ಜೀವ ಉಳಿಸಬೇಕೆಂಬ ಉದ್ದೇಶದಿಂದಸೇವಾ ಮನೋಭಾವದಿಂದ ಮಾಡುವ ಕರ್ತವ್ಯ ನಿರ್ವಹಿಸುವ ಆಂಬುಲೆನ್ಸ್ ಚಾಲಕರು ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದ ವಿಧಾನ ಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್ ರವರು ಕೊರೋನಾ ಲಾಕ್ ಡೌನಿನ ಈ ಸಂಧರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಂಬುಲೆನ್ಸ್ ಚಾಲಕರು ಮತ್ತು ಸಿಬ್ಬಂದಿಗಳು ತನ್ನ ಜೀವದ ಹಂಗು ತೊರೆದು ದಿನದ 24 ಗಂಟೆಯೂ ಸೇವೆ ಸಲ್ಲಿಸುತ್ತಿದ್ದು; ಇಂತಹ […]
ಬೀದಿ ಬದಿ ವ್ಯಾಪಾರಿಗಳು ಬೀದಿಪಾಲು
ರಕ್ಷಣೆಗೆ ಧಾವಿಸಿದ ಕಾಂಗ್ರೇಸಿಗರಿಂದ ಧರಣಿ ಮೇ 10ರ ರಾತ್ರಿ ಬೆಳ್ತಂಗಡಿಯ ಪಟ್ಟಣ ಪಂಚಾಯತು ಅಧಿಕಾರಿಗಳು ತಮ್ಮ ಸಿಬ್ಬಂದಿಗಳನ್ನು ಬಳಸಿ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಹೆದ್ದಾರಿ ಬದಿಯಲ್ಲಿರುವ ಬೀದಿಬದಿಯ ಹಣ್ಣು-ತರಕಾರಿ ವ್ಯಾಪಾರಿಗಳ ತಾತ್ಕಾಲಿಕ ಶೆಡ್ ಗಳನ್ನು ಕೆಡವಿ, ಬೀದಿಬದಿಯ ವ್ಯಾಪಾರಿಗಳನ್ನು ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿರುವ ಬೆಳ್ತಂಗಡಿ ತಾಲೂಕು ಕಾಂಗ್ರೇಸ್ ನಾಯಕರು ಪಕ್ಷದ ಕಾರ್ಯಕರ್ತರು ಹಾಗೂ ಬೆಳ್ತಂಗಡಿಯ ಬೀದಿಬದಿ ವ್ಯಾಪಾರಸ್ಥರೊಂದಿಗೆ ಸೇರಿ ಮೇ 11ರಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಎದುರು ಧರಣಿ ನಡೆಸಿದರು.ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, […]
ಮಡಂತ್ಯಾರು ಕಾಲೇಜಿನ ಒಳ ಕ್ರೀಡಾಂಗಣ ಈಗ ಕ್ವಾರಂಟೈನ್ ಸೆಂಟರ್
ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕಳ ಮತ್ತು ಪಾರೆಂಕಿ ಗ್ರಾಮಗಳಿಗೆ ಹೊರ ರಾಜ್ಯಗಳಿಂದ ಬರುವ ಊರ ಬಂಧುಗಳನ್ನು 14ದಿನಗಳ ಕಾಲ ಕ್ವಾರಂಟೈನಿಗೆ ಒಳಪಡಿಸಲು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳ ಕ್ರೀಡಾಂಗಣವನ್ನು ಸಜ್ಜುಗೊಳಿಸಲಾಗಿದೆ. ಈ ಒಳ ಕ್ರೀಡಾಂಗಣದಲ್ಲಿ ಎರಡು ಹಾಲ್, ಸುಸಜ್ಜಿತ ಆರು ಕೊಠಡಿ, 22 ಶೌಚಾಲಯವಿರುವ ಸ್ನಾನಗೃಹದ ವ್ಯವಸ್ಥೆ ಕಲ್ಪಿಸಲಾಗಿದೆ. ಕುಡಿಯುವ ನೀರಿಗೆ ಫಿಲ್ಟರ್ ವ್ಯವಸ್ಥೆ ಇದ್ದು, ಇಡೀ ಒಳ ಕ್ರೀಡಾಂಗಣವನ್ನು ಸಿ.ಸಿ. ಕ್ಯಾಮರಾದ ಕಣ್ಗಾವಲಿನಲ್ಲಿ ಇರಿಸಲಾಗಿದೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಆಡಳಿತ ಮಂಡಳಿಯ […]
ಪರವೂರಿನಿಂದ ಬಂದವರಿಗೆ ಕ್ವಾರಂಟೈನ್ ಅನಿವಾರ್ಯ
ಸ್ಥಳೀಯರ ಭೀತಿ ನಿವಾರಿಸಬೇಕಾದ್ದು ಆಡಳಿತದ ಜವಾಬ್ದಾರಿ ಕೊರೋನಾ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಪರವೂರಿನಿಂದ ಬಂದವರನ್ನು ಕ್ವಾರಂಟೈನಿಗೆ ಒಳಪಡಿಸಿ, ಅವರನ್ನು ನಿಗಾದಲ್ಲಿರಿಸಬೇಕಾದ್ದು ಅತೀ ಅಗತ್ಯ. ಇದೀಗ ಬೆಳ್ತಂಗಡಿ ತಾಲೂಕಿಗೂ ಹೊರ ರಾಜ್ಯಗಳಿಂದ ಬರುವ ಆಯಾ ಊರುಗಳ ಜನರನ್ನು ಅವರವರ ಊರುಗಳಲ್ಲೇ ಕ್ವಾರಂಟೈನಿಗೆ ಒಳಪಡಿಸಲು ತಾಲೂಕು ಆಡಳಿತ ಕ್ರಮ ಕೈಗೊಂಡಿದೆ. ನಮ್ಮನಿಮ್ಮ ಊರುಗಳಲ್ಲಿ ವಾಸ್ತವ್ಯವಿರುವ ಎಲ್ಲರನ್ನೂ ಕೊರೋನಾ ಸೋಂಕಿನಿಂದ ರಕ್ಷಿಸಲು ಮುಂಜಾಗ್ರತಾ ಕ್ರಮವಾಗಿ ಪರವೂರಿನಿಂದ ಬಂದವರನ್ನು 14ದಿನಗಳ ಕಾಲ ಕ್ವಾರಂಟೈನಿನಲ್ಲಿರಿಸಿ, ಅವರ ಆರೋಗ್ಯದ ಮೇಲೆ ನಿಗಾ ಇರಿಸುವುದು ಅತೀ […]
ವಾರ ಭವಿಷ್ಯ- 11-05-2020 ರಿಂದ 17-05-2020 ರವರೆಗೆ:

ಎಸ್.ಗೋಪಾಲಕೃಷ್ಣ. ಶಗ್ರಿತ್ತಾಯ. ಜ್ಯೋತಿಷಿ, ಶಾಂತಿಗೋಡು. 9902209240.
ಪ್ರಭಾವಿಗಳ ಕೃಪಾಶ್ರಯದಲ್ಲಿ ಅಕ್ರಮ ಮರಳುಗಾರಿಕೆ
ಕಾನೂನು ಕ್ರಮ ಜರಗಿಸದಿದ್ದರೆ ಹೋರಾಟದ ಎಚ್ಚರಿಕೆ. ಮುಂಡಾಜೆ ಪಂಚಾಯತ್ ವ್ಯಾಪ್ತಿಯ ಮೃತ್ಯುಂಜಯ ನದಿ ಹಳ್ಳದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಗಣಿ ಇಲಾಖೆಗೆ ಈ ಬಗ್ಗೆ ಮಾಹಿತಿ ಇದ್ದರೂ ಅಕ್ರಮಿಗಳ ವಿರುದ್ಧ ಕಾನೂನು ಕ್ರಮ ಜರಗಿಸದೇ ಅವರ ರಕ್ಷಣೆಗೆ ನಿಂತಿದೆ. 15 ದಿನಗಳೊಳಗೆ ಈ ಅಕ್ರಮ ಮರಳುಗಾರಿಕೆ ತಡೆಯದೇ ಇದ್ದಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ವಸಂತ ಬಂಗೇರ ಹೇಳಿದರು.ಅವರು ಮೇ 8ರಂದು ಬೆಳ್ತಂಗಡಿಯ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರಿಗೆ […]
ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಅಕ್ಷರಸ್ಥರ ಅನಾಗರಿಕ ವರ್ತನೆ
ಮಾಸ್ಕ್ ಬಗ್ಗೆ ಪರಿಜ್ಞಾನವಿಲ್ಲದೇ-ವೈಯಕ್ತಿಕ ಅಂತರದ ಪರಿವೇ ಇಲ್ಲದೇ ಕಾನೂನಿಗೇ ಸವಾಲಾದರು ಮೇ 9ರ ರಾತ್ರಿ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜಿಲ್ಲೆಯಲ್ಲಿ ಹೇರಲಾಗಿರುವ 144ಸೆಕ್ಷನ್ನಿಗೇ ಸವಾಲು ಹಾಕುವಂತೆ ಜಮಾಯಿಸಿದ ಅಕ್ಷರಸ್ಥ ಅನಾಗರಿಕರ ಸಮೂಹ. ಕೊರೋನಾ ಸೋಂಕು ಹರಡದಂತೆ ಸರಕಾರ ಸೂಚಿಸಿದ ಮುಂಜಾಗ್ರತಾ ಕ್ರಮಗಳಿಗೆ ಸವಾಲಾಗುವಂತಿದ್ದ ಇವರ ನಡವಳಿಕೆ ಸಭ್ಯ ನಾಗರಿಕರಲ್ಲಿ ಭಯ ಹಾಗೂ ಆತಂಕ ಮೂಡಿಸಿತ್ತು. ಬಹುತೇಕರು ಮಾಸ್ಕ್ ಧರಿಸಿದ್ದರಾದರೂ ಮಾಸ್ಕ್ ಮಾತ್ರ ಮುಖ ಮುಚ್ಚಿಕೊಳ್ಳದೇ ಕುತ್ತಿಗೆಯಲ್ಲಿ ಮಾಲಾಕಾರವಾಗಿತ್ತು. ಇನ್ನು ವೈಯಕ್ತಿಕ ಅಂತರದ ಪರಿವೇ ಇಲ್ಲದೇ; ಪರಸ್ಪರ ಅಪ್ಪಿಕೊಳ್ಳುವ, […]