ಕೊರೋನಾದೊಂದಿಗೆ ಬದುಕಲು ಚಿಗುರಿದ ಕನಸು

ಜೀವನ ಪದ್ಧತಿ ಬದಲಿಸಿದರೆ ಪ್ರತಿಯೊಬ್ಬರು ಕೊರೋನಾ ಮಾರಿಯಿಂದ ಪಾರಾಗಬಹುದು ಬರಹ: ಅರವಿಂದ ಚೊಕ್ಕಾಡಿ ಲಾಕ್ಡೌನ್ ಪ್ರಾರಂಭದ ದಿನಗಳಲ್ಲಿ ಎಲ್ಲರೂ ಸೇರಿ ಜನರಿಗೆ ಬೈದದ್ದೇ ಬೈದದ್ದು.ನಾನು ಬೈಯ್ಯಲಿಲ್ಲ. ಯಾಕೆಂದರೆ ಒಂದು ಎಚ್ಚರ ಹುಟ್ಟಿಸಲು ಲಾಕ್ಡೌನ್ ಸಹಾಯಕವೆ ಹೊರತು ಅದೇ ವೈರಸ್ ಹೋಗುವ ತನಕ ಅಲ್ಲ ಎಂದು ಗೊತ್ತಿತ್ತು. ಆಗ ಬೈತಾ ಇದ್ದರೆ ಇವತ್ತು ಮಾತಾಡುವ ನೈತಿಕ ಅರ್ಹತೆ ಇರುವುದಿಲ್ಲ.ಸರ್ವೈವಲ್ ಆಫ್ ದ ಫಿಟ್ಟೆಸ್ಟ್ ತತ್ವವನ್ನು ಕಲ್ಯಾಣ ರಾಷ್ಟ್ರಗಳು ಬದಲಿಸುವ ಅಭಿನಂದನಾರ್ಹ ಪ್ರಯತ್ನ ಮಾಡಿವೆ. ಆದರೂ ಪರಿಸ್ಥಿತಿ ಕಠಿಣವಾದಾಗ ಸರ್ವೈವಲ್ […]
ಆಹಾರ ಕಿಟ್ ನೀಡಿದವರಿಗೆ ಕಪಾಲಮೋಕ್ಷ ಫಲಾನುಭವಿಗಳೆಲ್ಲ ವೈನ್ ಸ್ಟೋರ್ ಮುಂದೆ
ಕೊರೋನಾ ಸೋಂಕಿನ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು 40ದಿನಗಳ ಕಾಲ ದೇಶದಲ್ಲಿ ಲಾಕ್ ಡೌನಿನಂತಹ ಕಠಿಣ ನಿಲುವು ತಳೆದಾಗ; ಸಮಾಜಮುಖೀ ಸಂಘಟನೆಗಳು, ಜನಪ್ರತಿನಿಧಿಗಳು, ರಾಜಕೀಯ ಧುರೀಣರು ಬಡವರ ಹೊಟ್ಟೆಪಾಡಿನ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಸಾಕಷ್ಟು ಕಡೆಗಳಲ್ಲಿ ಬಡ ಕುಟುಂಬಿಕರಿಗೆ ಉಚಿತವಾಗಿ ಆಹಾರಧಾನ್ಯದ ಕಿಟ್ ಗಳನ್ನೂ ವಿತರಿಸಿದ್ದರು. ಬಿಪಿಎಲ್ ಪಡಿತರ ಚೀಟಿ ಹೊಂದಿದ ಈ ಬಡವರಿಗೆ ರಾಜ್ಯ ಸರಕಾರವೂ ಅನ್ನಭಾಗ್ಯ ಯೋಜನೆಯ ಅಕ್ಕಿ ಸಹಿತ ಇತರ ದವಸಧಾನ್ಯಗಳನ್ನು ಉಚಿತವಾಗಿ ನೀಡಿತ್ತು.ಆದರೆ ಇಂದು ಮೇ 4ರಂದು […]
ವಾರ ಭವಿಷ್ಯ- 04-05-2020 ರಿಂದ 10-05-2020 ರವರೆಗೆ:

ಎಸ್.ಗೋಪಾಲಕೃಷ್ಣ. ಶಗ್ರಿತ್ತಾಯ. ಜ್ಯೋತಿಷಿ, ಶಾಂತಿಗೋಡು. 9902209240.
ಮದ್ಯಕ್ಕಾಗಿ ಕಣ್ಣಿಗೆ ಎಣ್ಣೆ ಬಿಟ್ಟು ಮಾಸ್ಕ್ ಧರಿಸು-ವೈಯಕ್ತಿಕ ಅಂತರ ಕಾಪಾಡಿ ಕಾಯುವ ಮಂದಿ ಗುರುವಾಯನಕೆರೆಯ ಸ್ವಸ್ತಿಕ್ ವೈನ್ಸ್ ನಲ್ಲಿ ರಾತ್ರಿಯೇ ಸರದಿಯಲ್ಲಿ ನಿಂತ ಮದ್ಯಪ್ರಿಯರು

ಇನ್ನೇನು ನಾಳೆ ಬೆಳಗ್ಗೆ ಗಂಟೆ 9-00ಕ್ಕೆ ಸುಮಾರು 40ದಿನಗಳ ಬಳಿಕ ರಾಜ್ಯದಲ್ಲಿ ಮದ್ಯದಂಗಡಿಗಳು ಬಾಗಿಲು ತೆರೆಯಲಿವೆ. ಜಹುತೇಕ ಎಲ್ಲ ವೈನ್ ಶಾಪುಗಳಲ್ಲಿ ಸರಕಾರ ಸೂಚಿಸಿದ ಮಾರ್ಗಸೂಚಿಯನ್ನು ಪಾಲಿಸಿ, ಮದ್ಯ ಮಾರಾಟಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.ರಾಜ್ಯದ ಕೆಲವೆಡೆ ವೈನ್ ಸ್ಟೋರ್ ಗಳ ಮುಂದೆ ಈಡುಗಾಯಿ ಒಡೆದು, ಬಾಗಿಲಿಗೆ ಆರತಿ ಎತ್ತಿ ಮದ್ಯಪ್ರಿಯರು ಸಂಭ್ರಮಿಸಿದ ಬಗ್ಗೆ ವರದಿಗಳಾಗಿವೆ. ಆದರೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಸ್ವಸ್ತಿಕ್ ವೈನ್ಸ್ ನಲ್ಲಿ ಮದ್ಯಪ್ರಿಯರು ವಿಭಿನ್ನ ರೀತಿಯಿಂದ ಸುದ್ದಿ ಮಾಡಿದ್ದಾರೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿನ […]
ಲಾಯಿಲ 350 ಕುಟುಂಬಗಳಿಗೆ ತರಕಾರಿ ವಿತರಣೆ ಮಾಸ್ಕ್ ಧಾರಣೆ ಹಾಗೂ ವೈಯಕ್ತಿಕ ಅಂತರ ಕಾಪಾಡಿದ ಸಂಘಟಕರು ಹಾಗೂ ಫಲಾನುಭವಿಗಳು

ಬೆಳ್ತಂಗಡಿ:ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರದ ಕಿಟ್ ದೊರೆತರೂ, ದಿನನಿತ್ಯದ ಬಳಕೆಗೆ ತರಕಾರಿ ಸಮಸ್ಯೆ ಎದುರಿಸುತ್ತಿದ್ದು ಇದನ್ನು ಮನಗಂಡ ಲಾಯಿಲದ ದಿl ಶೀನ ಶೆಟ್ಟಿ ಇವರ ಮಕ್ಕಳು ತಮ್ಮ ತಂದೆಯ ಸ್ಮರಣಾರ್ಥ ಲಾಯಿಲ ಗ್ರಾಮದ 4ನೇ ವಾರ್ಡಿನ ಸುಮಾರು 350 ಕುಟುಂಬಗಳಿಗೆ ತರಕಾರಿ ಕಿಟ್ ಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಉದ್ಯಮಿ ಪುಷ್ಪರಾಜ್ ಶೆಟ್ಟಿ, ಲೋಕೋಪಯೋಗಿ ಇಲಾಖಾ ಗುತ್ತಿಗೆದಾರವಿಶ್ವನಾಥ ಲಾಯಿಲ, ಅರವಿಂದ ಲಾಯಿಲ, ಉದಯ ಕುಮಾರ್ ಪುತ್ರಬೈಲು ಹಾಗೂ ದಿ.ಶೀನ ಶೆಟ್ಟಿಯವರ ಪುತ್ರರಾದ ಗಣೇಶ […]
ಬೆಳ್ತಂಗಡಿ ರೋಟರಿ ಕ್ಲಬ್ಬಿನಿಂದ ಪ್ರೆಸ್ ಕ್ಲಬ್ಬಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ಕೊಡುಗೆ ಮಾಸ್ಕ್ ಧಾರಣೆ ಹಾಗೂ ವೈಯಕ್ತಿಕ ಅಂತರಕ್ಕೆ ಆದ್ಯತೆ ನೀಡಿದ ಕಾರ್ಯಕ್ರಮ

ಇಂಟರ್ ನ್ಯಾಶನಲ್ ಫ್ರೀಡಂ ಆಫ್ ಪ್ರೆಸ್ ಡೇ (ಅಂತರಾಷ್ಟ್ರೀಯ ಪತ್ರಿಕಾ ಸ್ವಾತಂತ್ರ್ಯ ದಿನ)ಯಾದ ಮೇ 3ರಂದು ಬೆಳ್ತಂಗಡಿಯ ಪ್ರೆಸ್ ಕ್ಲಬ್ಬಿನ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ಬಿನವರು ಬೆಳ್ತಂಗಡಿ ಪ್ರಸ್ ಕ್ಲಬ್ಬಿಗೆ ಕೊಡುಗೆಯಾಗಿ ಸ್ಯಾನಿಟೈಸರ್ ಸ್ಟ್ಯಾಂಡನ್ನು ಹಾಗೂ ಪತ್ರಕರ್ತರಿಗೆ ವೈಯಕ್ತಿಕ ಬಳಕೆಗೆ ಸ್ಯಾನಿಟೈಸರ್ ಬಾಟಲಿಗಳನ್ನು ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ಬಿನ ನಿಯೋಜಿತ ಅಧ್ಯಕ್ಷ ಬಿ. ಕೆ. ಧನಂಜಯ ರಾವ್, ಕೊರೋನಾ ಸೋಂಕಿನ ಹರಡುವಿಕೆಯ ಭೀತಿಯಿರುವ ಇಂದಿನ ದಿನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರು […]
ಸಹಾಯ ಮನೋಭಾವದಿಂದ ಸಮಾಜದ ಅಭಿವೃದ್ಧಿ ತಾಲೂಕು ಮರಾಠಿ ಸಂಘದಿಂದ ಮಾಸ್ಕ್ ಧರಿಸಿ-ವೈಯಕ್ತಿಕ ಅಂತರ ಕಾಪಾಡಿ ನಡೆದ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸಂತೋಷ್

ಬೆಳ್ತಂಗಡಿ: ಸಂಘ ಆರಂಭವಾದ ದಿನದಿಂದ ಸಮುದಾಯದ ಹಿಂದುಳಿದ ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುವ ಮೂಲಕ, ಸಶಕ್ತರನ್ನಾಗಿ ಮಾಡುವ ಕಾರ್ಯ ನಡೆದಿದೆ. ಕೊರೋನಾದಿಂದ ಮರಾಟಿ ನಾಯ್ಕ ಸಮುದಾಯದ ಜನತೆ ಸಂಕಷ್ಟದಲ್ಲಿದ್ದು, ಸರಕಾರ ಹಾಗೂ ಸಮುದಾಯದ ಶಕ್ತರು ಸಹಾಯ ಮಾಡಬೇಕಿದೆ ಎಂದು ತಾಲೂಕು ಯುವ ಮರಾಟಿ ಸೇವಾ ಸಂಘದ ಅಧ್ಯಕ್ಷ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲಾ ತಿಳಿಸಿದರು.ಇವರು ಲಾಯಿಲಾದ ಸ್ವ-ಗೃಹದಲ್ಲಿ ಹಮ್ಮಿಕೊಂಡಿದ್ದ ಆಯ್ದ ಮರಾಟಿ ಸಮುದಾಯದ ಜನತೆಗೆ ಆಹಾರ ಸಾಮಗ್ರಿಗಳ ಕಿಟ್ ಅನ್ನು ಗ್ರಾಮಸಮಿತಿಗಳಿಗೆ ಹಸ್ತಾಂತರಿಸುವ ಸಂದರ್ಭ ಮಾತನಾಡಿದರು.ತಾಲೂಕಿನಲ್ಲಿ […]
ಆಶಾ ಕಾರ್ಯಕರ್ತೆಯರ ನೆರವಿಗೆ ನಾಗರಿಕರು ಅಳದಂಗಡಿಯಲ್ಲಿ ಮಾನವೀಯತೆಯ ಮೌನ ಕಾರ್ಯ

ಬೆಳ್ತಂಗಡಿ: ಇಂದಿನ ಸ್ಥಿತಿಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದು. ಈಗಿನ ಬಿರುಬಿಸಿಲಲ್ಲಿ ಅದೂ ಗ್ರಾಮೀಣ ಪ್ರದೇಶದಲ್ಲಿ ಅವರು ಮನೆ ಮನೆಗೆ ತೆರಳಿ ಆರೋಗ್ಯ ಮಾಹಿತಿ ಸಂಗ್ರಹಿಸುವುದು ಸಾಹಸವೇ ಸರಿ.ಇವರ ಸಂಕಷ್ಟನ್ನು ಅರಿತ ಸಹೃದಯಿ ನಾಗರಿಕರು ಕಾರ್ಯಕರ್ತೆಯರಿಗೆ ಮನೆ ಮನೆಗೆ ತೆರಳಲು ರಿಕ್ಷಾಗಳ ವ್ಯವಸ್ಥೆ ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಅಳದಂಗಡಿ ಸುತ್ತಲಿನ 11 ಗ್ರಾಮಗಳಿಗೆ ಸಂಬಂಧ ಪಟ್ಟಂತೆ ಜನಸ್ನೇಹಿ-ಪೋಲಿಸ್ ಎಂಬ ಗುಂಪನ್ನು ರಚಿಸಿಕೊಂಡು ಅಳದಂಗಡಿ ಸಮುದಾಯ ಕೇಂದ್ರಕ್ಕೆ ಸಂಬಂಧಪಟ್ಟ 15 ಆಶಾ ಕಾರ್ಯಕರ್ತೆಯರಿಗೆ ಮನೆಯಿಂದ ಹಳ್ಳಿಗಳಿಗೆ ತೆರಳಲು ಆಟೋ […]
ಕೊರೋನಾ ಸೋಂಕಿನ ವಿರುದ್ಧ ಮುಂಜಾಗ್ರತೆ ಸೇವಾಕಾರ್ಯದಲ್ಲೂ ಮಾಸ್ಕ್ ಧರಿಸಿ ವೈಯಕ್ತಿಕ ಅಂತರ ಕಾಯ್ದ ಲಯನ್ಸ್ ಅಧ್ಯಕ್ಷ ಹಾಗೂ ಕಾರ್ಯದರ್ಶಿ

ಮೇ 2 ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ವಸಂತ ಶೆಟ್ಟರಿಗೆ ವಿವಾಹ ದಿನದ ಸಂಭ್ರಮ. ಈ ಸಂಭ್ರಮವನ್ನು ಲಯನ್ಸ್ ಕ್ಲಬ್ಬಿನ ಸೇವಾಪಥದಲ್ಲಿಯೇ ಆಚರಿಸಿಕೊಂಡ ವಸಂತ ಶೆಟ್ಟಿ, ಬೆಳಿಗ್ಗೆ ಕ್ಲಬ್ಬಿನ ಕಾರ್ಯದರ್ಶಿ ಲಾಯ್ಲ ಸುರೇಶ್ ಶೆಟ್ಟರೊಂದಿಗೆ 12ಅರ್ಹ ಫಲಾನುಭವಿಗಳಿಗೆ ಆಹಾರದ ಕಿಟ್ ನೀಡುವ ಮೂಲಕ ಹಸಿದವರ ಹೊಟ್ಟೆಗೆ ಹಿಟ್ಟು ನೀಡಿ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಸೇವಾಪಥದ ಮುಂದುವರಿದ ಭಾಗವಾಗಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಮತ್ತೆ ಕ್ಲಬ್ಬಿನ ಕಾರ್ಯದರ್ಶಿ ಲಾಯ್ಲ ಸುರೇಶ್ ಶೆಟ್ಟರೊಂದಿಗೆ ಭೇಟಿ ನೀಡಿದ ಅಧ್ಯಕ್ಷ ವಸಂತ ಶೆಟ್ಟಿ, […]
ಕೊಕ್ರಾಡಿ ಸ್ನೇಹಿತರಿಂದ ವಿನೂತನ ಕಾರ್ಯಕ್ರಮ ಕಾರ್ಯಕ್ರಮದುದ್ದಕ್ಕೂ ಮಾಸ್ಕ್ ಧರಿಸಿ ವೈಯಕ್ತಿಕ ಅಂತರ ಕಾಪಾಡಿದ ಸ್ನೇಹಿತರು

ಕೋವಿಡ್-19 ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರಕಾರದ ಆದೇಶದ ಪ್ರಕಾರ ಲಾಕ್ ಡೌನ್ ಕಾನೂನು ಇರುವುದರಿಂದ ಜನಸಾಮಾನ್ಯರಿಗೆ ಕೂಲಿ ಕೆಲಸವಿಲ್ಲದೆ ತಮ್ಮ ಹಸಿವು ನೀಗಿಸುವಲ್ಲಿ ತೊಡಕುಂಟಾದ ಕಾರಣ ಅಂತಹ ಕುಟುಂಬಗಳಿಗೆ ನೆರವಾಗಲು; ಬೆಳ್ತಂಗಡಿ ತಾಲೂಕು ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿ.ಕೆ., ಸಂತೋಷ್ ಹೆಗ್ಡೆ, ದೀಪಕ್ ಶೆಟ್ಟಿ, ಹರೀಶ್ ಕುಮಾರ್ ಹಾಗೂ ಶಿವಪ್ರಕಾಶ್ ರವರು ಸ್ನೇಹಿತರ ತಂಡ ರಚಿಸಿ, ಮೊದಲಿಗೆ ತಾವೊಂದಷ್ಟು ಹಣ ಹಾಕಿ, ನಂತರ ಕೊಕ್ರಾಡಿ ಗ್ರಾಮದ ಹಾಗೂ ಪರ ಊರಿನ ಸಹೃದಯಿ ದಾನಿಗಳಿಂದ ಧನ […]