ಹೆಗ್ಗಡೆಯವರಿಂದ ವಿಶ್ವಮಾನವ ಸಂದೇಶ-ಭಟ್ಟಾರಕಶ್ರೀಗಳು

ಬೆಳ್ತಂಗಡಿ: ರಾಷ್ಟ್ರಕವಿ ಕುವೆಂಪು ಸಾರಿದ ವಿಶ್ವಮಾನವ ಸಂದೇಶವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಷರಶಃ ಸೇವಾ ರೂಪದಲ್ಲಿ ಮಾಡಿ ತೋರಿಸಿದ್ದಾರೆ. ಜೈನಧರ್ಮಕ್ಕೂ ಹಿಂದೂ ಧರ್ಮಕ್ಕೂ ಅವಿನಾಭಾವ ಸಂಬಂಧವಿದ್ದು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಸಹಿತ ಎಲ್ಲಾ ರಂಗಗಳಲ್ಲಿಯೂ ಹೆಗ್ಗಡೆಯವರು ಹೊಗಳಿಕೆಗೆ ಹಿಗ್ಗದೆ, ಟೀಕೆಗಳಿಗೆ ಅಂಜದೆ, ಸ್ಥಿತಪ್ರಜ್ಞೆಯಿಂದ ಎಲ್ಲಾ ಮಠ-ಮಂದಿರಗಳಿಗೂ ಮಾದರಿಯಾಗಿ ಅನವರತ ಸೇವೆ ಮಾಡಿ ಧರ್ಮಸ್ಥಳದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಪಸರಿಸಿದ್ದಾರೆ ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೇಳಿದರು.ಅವರು ಅಕ್ಟೋಬರ್ 24ರಂದು ಧರ್ಮಸ್ಥಳದ […]
ಕಾಪು ಹೊಸ ಮಾರಿಗುಡಿ ಲೇಖನ ಯಜ್ಞ ಸಮಿತಿ ಸಭೆ

ಬೆಳ್ತಂಗಡಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ನವದುರ್ಗಾ ಲೇಖನ ಯಜ್ಞ ಸಮಿತಿ ವತಿಯಿಂದ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನಲ್ಲಿ ಅಕ್ಟೋಬರ್ 19ರಂದು ಸಮಾಲೋಚನಾ ಸಭೆ ನಡೆಯಿತು.ಸಭೆಯಲ್ಲಿ ಅಭಿವೃದ್ಧಿ ಸಮಿತಿ ಸಂಚಾಲಕ ಚಂದ್ರಹಾಸ್ ಶೆಟ್ಟಿ ಸಾನಿಧ್ಯದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪುರುಷೋತ್ತಮ್ ಶೆಟ್ಟಿ, ಸಂತೋಷ್ ಹೆಗ್ಡೆ, ಕೃಷ್ಣ ಶೆಟ್ಟಿ, ಪ್ರದೀಪ್ ಆಳ್ವ ಉಪಸ್ಥಿತರಿದ್ದು ಲೇಖನ ಯಜ್ಞದ ಮಾಹಿತಿ ನೀಡಿದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ಪರವಾಗಿ ಕಿರಣ್ […]
ಡಿಕೆಆರ್ಡಿಎಸ್ ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಡಿಕೆಆರ್ಡಿಎಸ್ ಬೆಳ್ತಂಗಡಿಯ ಆಶ್ರಯದಲ್ಲಿ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಅಕ್ಟೋಬರ್ 19 ರಂದು ಹೆಚ್ಐವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿಯಸಾಂತೋಮ್ ಟವರ್ ನಲ್ಲಿ ನಡೆಯಿತು.ಬಂಗಾಡಿ ಮರಿಯಾಂಬಿಕಾ ಚರ್ಚ್ನ ಧರ್ಮಗುರು ವಂದನೀಯ ಸೆಬಾಸ್ಟಿಯನ್ ಚೆಲಕ್ಕಪಳ್ಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ; ಯಾವುದೇ ಸರಕಾರದ ಅನುದಾನವಿಲ್ಲದೆ ಈ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಸಲಹೆ ನೀಡಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿದರು.ಕಾಂಚಾಲ್ […]
ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಸೇವಾಭಾರತಿಯ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಮತ್ತು ಕನ್ಯಾಡಿಯ ಶ್ರೀ ದುರ್ಗಾ ಮಾತೃ ಮಂಡಳಿಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ನಡೆಸಿದ ಒಂದು ತಿಂಗಳ ಅವಧಿಯ 28ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅಕ್ಟೋಬರ್ 17 ರಂದು ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ನಡೆಯಿತು.ಕೊಕ್ಕಡ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ. ಕೃಷ್ಣ ಭಟ್ ಮಾತನಾಡಿ; ಕೊಕ್ಕಡದ ಗ್ರಾಮೀಣ ಜನರಿಗೆ ಸ್ವಉದ್ಯೋಗ ಮಾಡುವ ಅವಕಾಶವನ್ನು […]
ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಅಕ್ಟೋಬರ್ 17ರಂದು ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಾನವರಲ್ಲಿರಬೇಕಾದ ಆದರ್ಶ ಗುಣಗಳು, ಅನುಸರಿಸಬೇಕಾಗಿರುವ ನೀತಿ, ಭ್ರಾತೃತ್ವತೆ, ತ್ಯಾಗ, ರಾಜನೀತಿ, ಧರ್ಮ ಪಾಲನೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ರಾಮಾಯಣ ಎಂಬ ಮಹಾಕಾವ್ಯದ ಮೂಲಕ ಮನುಕುಲಕ್ಕೆ ಪರಿಚಯಿಸಿ ಮಾರ್ಗದರ್ಶನ ನೀಡಿರುವ ಮಹರ್ಷಿಯವರು ಶ್ರೇಷ್ಠರೆನಿಸಿಕೊಂಡು ಸರ್ವರಿಂದಲೂ ಇಂದು ಪೂಜಿಸಲ್ಪಡುತಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಈ ಸಂದರ್ಭದಲ್ಲಿ ನುಡಿದರು.ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಮಹರ್ಷಿ […]
ಸ್ಥಳೀಯ ಸಂಸ್ಥೆಗಳ ಚುನಾವಣೆ ಕೈಚೆಲ್ಲಬಾರದು-ಡಾ. ಮಂಜುನಾಥ ಭಂಡಾರಿ

ಬೆಳ್ತಂಗಡಿ: ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳು ಶಾಲೆಗಳಲ್ಲಿನ ಮಾಸಿಕ ಪರೀಕ್ಷೆ, ತ್ರೈಮಾಸಿಕ ಪರೀಕ್ಷೆ ಹಾಗೂ ಅರ್ಧವಾರ್ಷಿಕ ಪರೀಕ್ಷೆಗಳಂತೆ. ಈ ಚುನಾವಣೆಗಳ ಸಂದರ್ಭಗಳಲ್ಲಿ ಪಕ್ಷದ ಪ್ರಮುಖರೆನಿಸಿಕೊಂಡವರು ಅಸಡ್ಡೆ ಅಥವಾ ನಿರ್ಲ್ಯಕ್ಷ್ಯ ತೋರಿದರೆ ಅದರ ಪರಿಣಾಮ ಮುಂದಿನ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಅನುಭವಿಸಬೇಕಾಗುತ್ತದೆ. ತಳಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ನಾವು ಹೆಚ್ಚು ಶ್ರಮವಹಿಸಿ ಕೆಲಸಮಾಡಿ, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ […]
ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಬೆಳ್ತಂಗಡಿ: ಉಜಿರೆಯ ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಅಕ್ಟೋಬರ್ 3ರಿಂದ 11ರವರೆಗೆ ನವರಾತ್ರಿ ಉತ್ಸವ ನಡೆಯಿತು. ಪ್ರತಿದಿನ ರಾತ್ರಿ 8 ಗಂಟೆಯಿಂದ ಮಹಾಪೂಜೆ ಬಳಿಕ ಪ್ರಸಾದ ವಿತರಣೆ, ಭಕ್ತಾಧಿಗಳಿಗೆ ಫಲಹಾರ ವಿತರಿಸಲಾಯಿತು.ನವರಾತ್ರಿಯ ಕೊನೆಯ ದಿನ ಮೊಕ್ತೇಸರರಾದ ವಾಸುದೇವ ಸಂಪಿಗೆತ್ತಾಯ ಮತ್ತು ವಾಣಿ ಸಂಪಿಗೆತ್ತಾಯ ಇವರಿಂದ ವಿಶೇಷ ಪೂಜೆ, ಕನ್ನಿಕ-ಸುಹಾಸಿನಿ ಪೂಜೆಯ ಬಳಿಕ ಮುತ್ತೈದೆಯರಿಗೆ ರವಿಕೆಕಣ ವಿತರಿಸಲಾಯಿತು. ಅರ್ಚಕರಾದ ಕೃಷ್ಣ ಹೊಳ್ಳ, ಆಡಳಿತ ಮೊಕ್ತೇಸರಾದ ವಾಸುದೇವ ಸಂಪಗೆತ್ತಾಯ, ಅಪ್ಪು ನಾಯರ್, ರವೀಂದ್ರ ಕಾರಂತ್, ರಾಘವೇಂದ್ರ ಹೊಳ್ಳ, ಆದರ್ಶ ಕಾರಂತ್, […]
‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

ಬೆಳ್ತಂಗಡಿ: ಮಾಡುವ ಕೆಲಸದಲ್ಲಿ ತೃಪ್ತಿ, ಆ ಕೆಲಸದ ಕುರಿತು ಆಳವಾದ ಅರಿವು ಹಾಗೂ ಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ ಇರುವುದು ಅಗತ್ಯ ಎಂದು ಹಿರಿಯ ಸಾಹಿತಿ ಹಾಗೂ ನಿವೃತ್ತ ಇಂಜಿನಿಯರ್ ಕುಮಾರಸ್ವಾಮಿ ಟಿ. ಹೇಳಿದರು.ಅವರು ಸೆಪ್ಟೆಂಬರ್ 30ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಸರಣಿ ‘ಎಸ್ ಡಿ ಎಂ ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮದಲ್ಲಿ ಅವರು ಪ್ರತಿಭಾನ್ವಿತ ವಿದ್ಯಾರ್ಥಿ ನಿತಿನ್ ಎಸ್.ಜೆ. (ದ್ವಿತೀಯ ಬಿ.ಎ.) ಅವರಿಗೆ […]
ಶ್ರಮದಾನದ ಮೂಲಕ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಕಸಕಡ್ಡಿ-ಕೊಂಬೆಗಳ ತೆರವು

ಬೆಳ್ತಂಗಡಿ: ನಡ ಗ್ರಾಮದ ಬಸ್ರಾಯ ಕಿಂಡಿ ಅಣೆಕಟ್ಟಿನಲ್ಲಿ ನಲ್ಲಿ ಸಿಲುಕಿಕೊಂಡಂತಹ ಮರದ ಕೊಂಬೆ ಹಾಗೂ ಕಸಕಡ್ಡಿಗಳನ್ನು ಸ್ಥಳೀಯರ ಸಹಕಾರದಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.ನಡ ಗ್ರಾಮದ ಅಜಯನಗರ ಹಾಗೂ ಅಣ್ಣಪ್ಪ ಕೋಡಿಯ ನಿವಾಸಿಗರಾದ ಜೈಸನ್ ಡಿ’ಸೋಜ, ವಿಕ್ಟರ್ ಡಿ’ಸೋಜಾ, ವಿಜಯ್ ಪೌಲ್, ಶ್ಯಾಮ್ ಭಟ್, ಲಿಂಗಪ್ಪ, ಬಿನೋಯ್ ಹಾಗೂ ಬೆಳ್ತಂಗಡಿ ಸಿ.ಎ. ಬ್ಯಾಂಕ್ ನಿರ್ದೇಶಕ ಶ್ರೀನಾಥ್ ಕೆ.ಎಂ. ಮತ್ತಿತರರು ಶ್ರಮದಾನದಲ್ಲಿ ಭಾಗವಹಿಸಿದ್ದರು. ಡ್ಯಾಮಿಗೆ ಆಗಲಿರುವ ತೊಂದರೆಯನ್ನು ಸರಿಪಡಿಸಲಾಯಿತು.
ನೇಜಿ ನಾಟಿ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆಯ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚಾರಣೆಯ ಹಿನ್ನೆಲೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ ಇದರ ನೇತೃತ್ವದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವ್ಯವಸ್ಥಾಪನ ಸಮಿತಿ ಇವುಗಳ ಸಹಯೋಗದಲ್ಲಿ ಸುಮಾರು 500ಕ್ಕೂ ಮಿಕ್ಕಿ […]