ನೃತ್ಯಾಮೃತ ದೃಷ್ಟಿ-ಸೃಷ್ಟಿ

ಬೆಳ್ತಂಗಡಿ: ಪ್ರಕೃತಿ, ಪ್ರಾಣಿ ಸಹಿತ ಎಲ್ಲ ಚರಾಚರ ವಸ್ತುಗಳಲ್ಲಿ ದೇವರನ್ನು ಕಾಣುವುದು ಭಾರತೀಯ ಸಂಸ್ಕೃತಿ. ದೇವರಿಗೆ ಸಮಾನವಾಗಿ ಕಲೆಯನ್ನು ದೈವತ್ವಕ್ಕೇರಿಸಿ ಆರಾಧಿಸಿಕೊಂಡು ಬರುತ್ತಿರುವುದು ಸ್ಮರಣೀಯ. ಧಾರ್ಮಿಕ ಕ್ಷೇತ್ರಗಳಲ್ಲಿ ಕಲೆಗೆ ಪ್ರೋತ್ಸಾಹ ನಡೆದುಕೊಂಡು ಬಂದಿದೆ. ನೃತ್ಯ, ಸಂಗೀತ, ಯಕ್ಷಗಾನ ಕಲೆಯ ರುಚಿ ಆಸ್ವಾದಿಸಲು ಅವಕಾಶ ದೊರೆಯುತ್ತಿದ್ದು, ಏನೇ ಅಡೆತಡೆಯಿದ್ದರೂ ಅದನ್ನು ಮೀರಿ ಹಿರಿಯರು ಬೆಳೆಸಿದ ಕಲಾಪರಂಪರೆಯನ್ನು ಉಳಿಸುವ ಕಾರ್ಯ ಮಂಗಳೂರಿನ ನಾಟ್ಯಾರಾಧನಾ ಕಲಾ ಕೇಂದ್ರ ಮಾಡುತ್ತಿರುವುದು ಶ್ಲಾಘನೀಯ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ […]
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

: ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಬೆಂಗಳೂರು ಇಂದಿರಾನಗರ ರೋಟರಿ ಕ್ಲಬ್ ಮತ್ತು ರೋಟರಿ ಸೇವಾ ಟ್ರಸ್ಟ್ನ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 258 ವಿದ್ಯಾರ್ಥಿಗಳಿಗೆ ರೂಪಾಯಿ 10.32 ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಸೆಪ್ಟೆಂಬರ್ 14ರಂದು ಬೆಳ್ತಂಗಡಿ ರೋಟರಿ ಸಭಾಭವನದಲ್ಲಿ ವಿತರಿಸಲಾಯಿತು. ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಶೇ 85ಕ್ಕಿಂತ ಅಧಿಕ ಅಂಕ ಪಡೆದ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ […]
‘ಕೌಶಲ್ಯಗಳ ನವೀಕರಣ ಸ್ಪರ್ಧಾತ್ಮಕತೆಗೆ ಪೂರಕ’

ಬೆಳ್ತಂಗಡಿ: ಕೌಶಲ್ಯಗಳನ್ನು ನವೀಕರಿಸಿಕೊಂಡು ಜ್ಞಾನಾಧಾರಿತ ಸಂಶೋಧನಾ ಪ್ರಜ್ಞೆ ಮತ್ತು ಅನ್ವಯಿಕ ಸಾಮರ್ಥ್ಯದೊಂದಿಗೆ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರುಗೊಂಡಾಗ ಮಾತ್ರ ಅಚ್ಚಳಿಯದ ಪ್ರಭಾವ ಮೂಡಿಸಿ ಯಶಸ್ಸು ಗಳಿಸಲು ಸಾಧ್ಯ ಎಂದು ಬೆಂಗಳೂರಿನ ಸಿಗ್ಮಾ ಅಲ್ಡಿçಜ್ ಕಂಪನಿಯ ತಾಂತ್ರಿಕ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕ, ಮುಖ್ಯಸ್ಥ ಡಾ. ರವೀಂದ್ರ ವಿಕ್ರಮ್ ಸಿಂಗ್ ಅಭಿಪ್ರಾಯಪಟ್ಟರು.ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಿಗೆ ಪ್ರವೇಶಾತಿ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಉದ್ದೇಶದಿಂದ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೆಪ್ಟೆಂಬರ್ […]
ಮಹಿಳಾ ದೌರ್ಜನ್ಯಗಳ ಕಠಿಣ ಕ್ರಮಕ್ಕೆ ಆಗ್ರಹ

ಬೆಳ್ತಂಗಡಿ: ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲಿನ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಿನಬೇಕು…. ಮುಂತಾದ ಬೇಡಿಕೆಗಳಿಗೆ ಆಗ್ರಹಿಸಿ ಬೆಳ್ತಂಗಡಿಯ ಸ್ನೇಹ ಕಿರಣ್ ಮಹಿಳಾ ಒಕ್ಕೂಟದ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೆಪ್ಟೆಂಬರ್ 12ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ […]
ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದಂಗವಾಗಿ ಸೆಪ್ಟೆಂಬರ್ 11ರಂದು ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಸಂಭ್ರಮಾಚರಣೆ ನಡೆಸಲಾಯಿತು. ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಓಣಂ ಸಂಭ್ರಮಾಚರಣೆಯನ್ನು ಉದ್ಘಾಟಿಸಿ ಮಾತನಾಡಿ; ಓಣಂ ಕೇರಳದ ಪ್ರಮುಖ ಧಾರ್ಮಿಕ ಹಬ್ಬವಾದರೂ ದೇಶದೆಲ್ಲೆಡೆ ಕೇರಳೀಯರು ನೆಲೆಸಿರುವ ಪ್ರದೇಶಗಳಲ್ಲಿ ಹಬ್ಬವನ್ನು ವಿಶೇಷ ಸಂತಸ ಸಡಗರದಿಂದ ಆಚರಿಸುತ್ತಾರೆ. ಬಲಿಚಕ್ರವರ್ತಿಯ ಆಶೀರ್ವಾದ ಪಡೆದು ಉತ್ತಮ ಅರೋಗ್ಯ ಸಂಪದಗಳಿಗಾಗಿ ಪ್ರಾರ್ಥಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮಾಚರಿಸುತ್ತಾರೆ. ಎಲ್ಲರಿಗೂ ಓಣಂ […]
ಸದಸ್ಯರ ಅವಶ್ಯಕತೆಗಳಿಗೆ ತುರ್ತು ಸ್ಪಂದನೆ – ವೇಣೂರು ಸೊಸೈಟಿಯ ಮಹಾಸಭೆಯಲ್ಲಿ ಅಧ್ಯಕ್ಷ ಸುಂದರ ಹೆಗ್ಡೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ 8ಗ್ರಾಮಗಳ ವಿಶಾಲ ಕಾರ್ಯವ್ಯಾಪ್ತಿ ಹೊಂದಿರುವ ನಮ್ಮ ಸಹಕಾರಿ ಸಂಘವು ಸದಸ್ಯರ ಹಾಗೂ ಕೃಷಿಕರ ಅವಶ್ಯಕತೆಗಳಿಗೆ ತುರ್ತು ಸ್ಪಂದನೆ ನೀಡುವ ಮೂಲಕ ಅಗತ್ಯ ಸಾಲದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಿಗಿಂತ ತ್ವರಿತವಾಗಿ ಗ್ರಾಹಕರಿಗೆ ಸೇವೆಯನ್ನು ನೀಡುತ್ತಿರುವ ನಮ್ಮ ಸಂಘ ಗ್ರಾಮದ ಜನತೆ ಆರ್ಥಿಕವಾಗಿ ಸಬಲರಾಗಲು ಕೊಡುಗೆ ನೀಡುತ್ತಿದೆ ಎಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ. ಹೇಳಿದರು.ಅವರು ವೇಣೂರು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆದ ವೇಣೂರು ಪ್ರಾಥಮಿಕ […]
ಗಣನೀಯ ಪ್ರಗತಿ ಸಾಧಿಸಿದ ನಮ್ಮ ಸಂಘ – ನಾರಾವಿ ಸೊಸೈಟಿಯ ಮಹಾಸಭೆಯಲ್ಲಿ ಅಧ್ಯಕ್ಷ ಸುಧಾಕರ ಭಂಡಾರಿ.

ಬೆಳ್ತಂಗಡಿ: ವರದಿ ಸಾಲಿನಲ್ಲಿ ರೂಪಾಯಿ 229.68ಕೋಟಿ ವ್ಯವಹಾರ ನಡೆಸಿದ ನಮ್ಮ ಸಂಘವು 1.3ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಪ್ರಸಕ್ತ ವರ್ಷ ಸದಸ್ಯರಿಗೆ 12% ಡಿವಿಡೆಂಡ್ ನೀಡಲು ಆಡಳಿತ ಮಂಡಳಿ ಸರ್ವಾನುಮತದಿಂದ ತೀರ್ಮಾನಿಸಿದೆ ಎಂದು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ತಿಳಿಸಿದರು.ಅವರು ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ ನಡೆದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಂಘವು ಒಟ್ಟು ರೂಪಾಯಿ […]
ಬದನಾಜೆ ಶಾಲೆಯಲ್ಲಿ ಗಮಕ ಕಾರ್ಯಕ್ರಮ

ಬೆಳ್ತಂಗಡಿ: ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 9ರಂದು ಉಜಿರೆಯ ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ಗಮಕ ಕಾರ್ಯಕ್ರಮ ನಡೆಯಿತು. ಗಮಕ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಗಮಕ ಕಲಾವಿದ ಚಿಂತಕ, ಸಾಹಿತಿ ಪ್ರೊ. ಗಣಪತಿ ಭಟ್ ಕುಳಮರ್ವ ಮತ್ತು ವ್ಯಾಖ್ಯಾನವನ್ನು ಉಂಡೆಮನೆ ವಿಶ್ವೇಶ್ವರ ಭಟ್ಟರು ಅತ್ಯಂತ ಮನೋಜ್ಞವಾಗಿ ನಡೆಸಿಕೊಟ್ಟರು.ಶಾಲಾ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಸರಳ ಭಾಷೆಯಲ್ಲಿ ಕುಮಾರವ್ಯಾಸಭಾರತದ ‘ಕೌರವೇಂದ್ರನ ಕೊಂದೆ ನೀನು’ ಎಂಬ […]
ಧರ್ಮದ ಆಚರಣೆಯಿಂದ ವರ್ತನೆಯಲ್ಲಿ ಪರಿವರ್ತನೆ-ತ್ರಿಶಾಲಾ

ಬೆಳ್ತಂಗಡಿ: ಧರ್ಮದ ಮರ್ಮವನ್ನರಿತು ಮಾಡುವ ಆಚರಣೆಯಿಂದ ನಮ್ಮಲ್ಲಿರುವ ದೋಷಗಳ ನಿವಾರಣೆಯಾಗಿ ವರ್ತನೆಯಲ್ಲಿ ಪರಿವರ್ತನೆಯಾಗುತ್ತದೆ ಎಂದು ನಿವೃತ್ತ ಉಪನ್ಯಾಸಕಿ ಪ್ರೊ. ತ್ರಿಶಲಾ ಉದಯಕುಮಾರ್ ಮಲ್ಲ ಹೇಳಿದರು.ಅವರು ಸೆಪ್ಟೆಂಬರ್ 9ರಂದು ಉಜಿರೆಯ ಸಿದ್ಧವನ ಗುರುಕುಲದಲ್ಲಿ ನಡೆದ ದಶಲಕ್ಷಣ ಪರ್ವ ಆಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ದಶಲಕ್ಷಣ ಪರ್ವವು ಆಧ್ಯಾತ್ಮಿಕ ಪರ್ವವಾಗಿದ್ದು, ದಶಧರ್ಮಗಳ ಅನುಷ್ಠಾನದಿಂದ ಮಾನವೀಯ ಮೌಲ್ಯಗಳು ಉದ್ದೀಪನಗೊಂಡು; ಸುಖ-ಶಾಂತಿ, ನೆಮ್ಮದಿಯ ಸಾರ್ಥಕ ಜೀವನ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಸಮಯದ ಸದುಪಯೋಗ ಮಾಡಬೇಕೆಂದು ಅವರು ಸಲಹೆ ನೀಡಿದರು.ಮುತ್ತೂರು […]
ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಆಗಸ್ಟ್ 21ರಂದು ಯು.ಎ.ಇ. ಯ ಓಹ್ಸೈ ಫೌಂಡೇಶನ್ನ ಅಧ್ಯಕ್ಷರಾದ ಡಾ. ಹರಿದಾಸ್ ನಾಯರ್ರವರು ವಿದ್ಯಾರ್ಥಿ ಹಾಗೂ ಅಧ್ಯಾಪಕ ವೃಂದದೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಒತ್ತಡ ನಿರ್ವಹಣಾ ಕೌಶಲ್ಯ ಹಾಗೂ ನಿರ್ವಹಣಾ ತಂತ್ರಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಡಾ. ಹರಿದಾಸ್ ನಾಯರ್ ಅವರು; ಮಾನಸಿಕ ಒತ್ತಡ ನಿವಾರಿಸುವಲ್ಲಿ ಯೋಗ, ಧ್ಯಾನ ಹಾಗೂ ಲಘು ದೈಹಿಕ ವ್ಯಾಯಾಮ ಚಟುವಟಿಕೆಗಳು ಪ್ರಮುಖ ಪಾತ್ರವಹಿಸುತ್ತದೆ. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು, ಒಳ್ಳೆಯ ಸ್ನೇಹಿತರೊಂದಿಗೆ ಸಂಪರ್ಕ […]