ಪ್ರಕೃತಿದತ್ತ ಕೊಡುಗೆಯನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು -ಹೇಮಾವತಿ ವಿ. ಹೆಗ್ಗಡೆ.

ಬೆಳ್ತಂಗಡಿ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶುದ್ಧಗಂಗಾ ಪ್ರೇರಕರಿಗೆ ಮಾರ್ಗದರ್ಶನ ನೀಡುತ್ತಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಚರ್ತುದಾನಗಳಲ್ಲಿ ಔಷಧ ದಾನವೂ ಒಂದು. ಶುದ್ಧನೀರು ಮನುಷ್ಯನಿಗೆ ಆರೋಗ್ಯಯುತವಾಗಿರಲು ಪ್ರಕೃತಿಯು ನೀಡಿದ ಕೊಡುಗೆಯಾಗಿದ್ದು, ನೀರು ಆರೋಗ್ಯದ ಮೇಲೆ ನೇರ ಪರಿಣಾಮವನ್ನು ಬೀರುತ್ತದೆ. […]

ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಸರಕಸರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರೀಶ್ ತನ್ನ ಹುಟ್ಟುಹಬ್ಬವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.ನಡ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಪ್ರಸ್ತುತ ಅನಾರೋಗ್ಯದಿಂದ ಬಳಲುತ್ತಿರುವ ಮನೆಯ ಆಧಾರಸ್ತಂಭವಾಗಿದ್ದ ಶೀನಪ್ಪ ಗೌಡ ಮತ್ತು ಅವರ ಬುದ್ಧಿಮಾಂದ್ಯ ಮಗಳ ಜೊತೆಗೆ ಜೀವನ ಸಾಗಿಸುತ್ತಿರುವ ಕುಟುಂಬದೊಂದಿಗೆ ಹರೀಶ್ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತನ್ನ ಹುಟ್ಟುಹಬ್ಬದ ಪ್ರಯುಕ್ತ ಈ ಕುಟುಂಬಕ್ಕೆ ಅಕ್ಕಿ , ದವಸಧಾನ್ಯಗಳನ್ನು ನೀಡಿ ಸಹಕರಿಸಿದರು.ಈ ಸಂದರ್ಭದಲ್ಲಿ ಗೆಳೆಯರಾದ ದೀಕ್ಷಿತ್, ರಕ್ಷಿತ್, […]

ತ್ಯಾಜ್ಯನೀರು ಸಂಸ್ಕರಣಾ ವಿಸ್ತರಿತ ಘಟಕ ನಿರ್ಮಾಣಕ್ಕೆ ಭೂಮಿಪೂಜೆ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್‌ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಇತ್ತೀಚಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಪ್ರತಿದಿನ ಹತ್ತುಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದ, ತಾಲೂಕಿನ ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಇದಾಗಿದೆ. ಘಟಕದಲ್ಲಿ ಸಂಸ್ಕರಿಸಿದ ನೀರನ್ನು ಸ್ಥಳೀಯ ಕೃಷಿ ಭೂಮಿಗೆ ಬಳಸುವ ಮೂಲಕ ಕೃಷಿಗೆ ಬೆಂಬಲ ನೀಡುವ ಯೋಚನೆ ಎಕ್ಸೆಲ್ ವಿದ್ಯಾಸಂಸ್ಥೆಯ […]

ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಹುಮುಖ ಪ್ರತಿಭೆ ಸುಕನ್ಯಾ ಕಾಮತ್

ಬೆಳ್ತಂಗಡಿ: ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಬಹುಮುಖ ಪ್ರತಿಭೆ ಸುಕನ್ಯಾ ಕಾಮತ್ (ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಮತ್ತು ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಚಾರ್ಟರ್ಡ್ ಎಕೌಂಟೆಂಟ್ ಕೆ. ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ […]

ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಮಣ್ಣಿನ ಹರಕೆಯ ಪುಣ್ಯಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ| ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ದಿನಾಂಕ ಜೂನ್ 15ರಂದು ಕ್ಷೇತ್ರದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿಯ 1 ರಿಂದ 8 ನೇ ತರಗತಿವರೆಗಿನ ಒಟ್ಟು 70 ಮಕ್ಕಳು ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುರ್ಯದ 1 ರಿಂದ 5 ನೇ ತರಗತಿವರೆಗಿನ 32 ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ವಿತರಿಸಿದರು. […]

ಪಟ್ಟಣ ಪಂಚಾಯತ್ ಆಡಳಿತದಿಂದ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ!

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಮಾರಿಗುಡಿ ಎದುರುಗಡೆ ಅನಧಿಕೃತವಾಗಿ ತಲೆ ಎತ್ತಿದ ವ್ಯಾಪಾರಿ ಡೇರೆಯನ್ನು ತೆರವುಗೊಳಿಸಿದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಆಡಳಿತ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಸಂತೆ ಮಾರ್ಕೆಟ್‌ನ ಪ್ರವೇಶದ್ವಾರದಲ್ಲಿ ತಲೆ ಎತ್ತಿರುವ ಅನಧಿಕೃತ ವ್ಯಾಪಾರಿ ಡೇರೆಯನ್ನು ತೆರವುಗೊಳಿಸದೇ; ‘ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ’ ಧೋರಣೆಯನ್ನು ಅನುಸರಿಸುತ್ತಿರುವುದು ನಾಗರಿಕ ವಲಯದಲ್ಲಿ ಚರ್ಚೆಗೆ ಆಹಾರವಾಗಿದೆ.ಪ್ರತೀದಿನ ವಾಹನ ದಟ್ಟಣೆಯಿಂದ ಎಲ್ಲರೂ ಪರದಾಡುತ್ತಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಸಾಗುವ […]

ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ ‘ಜೈಬಾಲಾಜಿ’ ಹಾಯಿದೋಣಿ

ಬೆಳ್ತಂಗಡಿ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ ‘ಜೈಬಾಲಾಜಿ’ ಹಾಯಿದೋಣಿಯನ್ನು ಜೂನ್ 10ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುಷಾ ವಸ್ತು ಸಂಗ್ರಹಾಲಯಕ್ಕೆ ಸಲ್ಲಿಸಲಾಯಿತು.ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ನೀಡಿದರು.ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10 1/2 ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದರಲ್ಲಿ 22ಅಡಿ ಎತ್ತರದ ಕಾಟಿಮರ ಮತ್ತು ಹಾಯಿ ಇದೆ. 20 ವರ್ಷಗಳ […]

ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಾಲಾಡಿಯಲ್ಲಿ ಮೇ 6ರಂದು 1-8ನೇ ತರಗತಿಯ ಎಲ್ಲಾ ಮಕ್ಕಳಿಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಂತ್ಯಾರು ಘಟಕದ ಅಧ್ಯಕ್ಷ ಹಾಜಿ ಲತೀಫ್ ಸಾಹೇಬ್ ಇವರ ಕೊಡುಗೆಯಾದ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹಕೀಂ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಪುಷ್ಪಾಲತಾ, ಸದಸ್ಯರುಗಳಾದ ಸವಿತಾ, ಅಬುಸಾ, ಶೋಭಾ, ಮುಖ್ಯ ಶಿಕ್ಷಕಿ ಲತಾ ಕೆ. ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕ ವೃಂದದವರು ಸಹಕರಿಸಿದರು.ಶಾಲಾ ವಿದ್ಯಾರ್ಥಿಗಳು […]

ಪಿಲಿಗೂಡು ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡರ್ ಹಸ್ತಾಂತರ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡಿನಿಂದ ಜೂನ್ 5ರ ರಾತ್ರಿ ಮಿಕ್ಸಿ, ಗ್ಯಾಸ್ ಸಿಲಿಂಡರ್ ಸೇರಿದಂತೆ ಇನ್ನಿತರ ವಸ್ತುಗಳು ಕಳವಾಗಿದ್ದು; ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಾಧ್ಯವಾಗದೆ ಸಮಸ್ಯೆಯಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ತಕ್ಷಣ ಶಾಲೆಗೆ ಮಿಕ್ಸಿ ಹಾಗೂ ಗ್ಯಾಸ್ ಸಿಲಿಂಡರ್ ನೀಡಲು ಮುಂದಾಗಿದ್ದರು‌.ಅದರಂತೆ ಜೂ 7 ರಂದು‌ ಬೆಳಗ್ಗೆ 11 […]

ಪರಿಸರ ದಿನಾಚರಣೆ

ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 6ರಂದು ಆಚರಿಸಲಾಯಿತು. ದಕ್ಷಿಣ ಕನ್ನಡ ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ ನಾಟಿ ವೈದ್ಯ ಐ. ಕುಶಾಲಪ್ಪ ಗೌಡ ಗಿಡಮೂಲಿಕೆಗಳ ಔಷಧೀಯ ಗುಣಗಳ ಕುರಿತು ಮಾಹಿತಿ ನೀಡಿ, ಮನೆಗೆ ಬೇಕಾದ ತರಕಾರಿಯನ್ನು ಮನೆಯ ಸುತ್ತ ಕಡಿಮೆ ಸ್ಥಳದಲ್ಲಿ ಬೆಳೆಸುವ ಸರಳ ವಿಧಾನ ವಿವರಿಸಿದರು. ಟ್ರಸ್ಟ್ ಉಪಾಧ್ಯಕ್ಷೆ, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷೆ ವಿದ್ಯಾ ನಾಯಕ್ ವಿಶ್ವ ಪರಿಸರ ದಿನಾಚರಣೆಯ […]