ಸಂಸ್ಕೃತಿ ಉಳಿಯಲು ಕನ್ನಡ ಭಾಷೆ ಬೆಳೆಯಬೇಕು- ಶ್ರದ್ಧಾ ಅಮಿತ್

ಬೆಳ್ತಂಗಡಿ: ಪ್ರಾಥಮಿಕ ಶಿಕ್ಷಣ ವಿದ್ಯಾರ್ಥಿಯ ಬದುಕಿನ ಪಂಚಾಂಗ. ವಿದ್ಯಾರ್ಥಿಗಳು ಸಜ್ಜನರಾಗಿ ವ್ಯಕ್ತಿತ್ವ ರೂಪಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳನ್ನು ರೂಪಿಸುವ ಶಿಲ್ಪಿಗಳಂತೆ ಸುಂದರ ಕೈತೋಟದ ಗಿಡಗಳನ್ನು ಬೆಳೆಸುವವರು; ಪೋಷಕಾಂಶ ನೀಡಿ ಅವರ ಸಾಮರ್ಥ್ಯ ಗುರುತಿಸುವವರು. ಶಿಕ್ಷಕರ ನಿಸ್ವಾರ್ಥ ಸೇವೆಗೆ ಬೆಲೆ ಕಟ್ಟುವಹಾಗಿಲ್ಲ. ಪ್ರತಿ ಮಕ್ಕಳು ಒಂದಲ್ಲ ಒಂದು ಕಲೆಯಲ್ಲಿ ಬೆಳೆಯುತ್ತಾರೆ. ನಮ್ಮ ಸಂಸ್ಕೃತಿ ಉಳಿಯಲು ಕನ್ನಡ ಭಾಷೆ ಹಾಗೂ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಮಕ್ಕಳಿಗೆ ಭಾಷೆ, ಸಂಸ್ಕೃತಿ, ನೆಲ ಜಲ, ಪರಿಸರದ ಬಗ್ಗೆ ತಿಳಿಸುವ ಕನ್ನಡ […]
ಬೀಡಿ ಕಾರ್ಮಿಕರ ಹೋರಾಟಕ್ಕೆ ಜಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಭಾರತ ಬೀಡಿ ಕಂಪೆನಿ ಉಳಿಸಲು ನಡೆಸಿದ ಹೋರಾಟ ಯಶಸ್ವಿಯಾಗಿ ಇತ್ಯರ್ಥವಾಯಿತು ಎಂದು ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಅದ್ಯಕ್ಷ ಬಿ.ಎಂ. ಭಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತ ಬೀಡಿ ಕಂಪೆನಿಯನ್ನು ಕಾನೂನು ಬಾಹಿರವಾಗಿ ಸರಕಾರದ ಅನುಮತಿ ಪಡೆಯದೇ ಮುಚ್ಚಲು ನಿರ್ಧರಸಿದ ಬೀಡಿ ಮಾಲಕರ ನಡೆಯನ್ನು ಖಂಡಿಸಿ ‘ಭಾರತ ಬೀಡಿ ಉಳಿಸಿ, ಕಾರ್ಮಿಕರ ಬದುಕು ರಕ್ಷಿಸಿ’ ಎಂಬ ಘೋಷವಾಕ್ಯದೊಂದಿಗೆ ಮೇ 16ರಿಂದ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ (ಸಿಐಟಿಯು), ಬೆಳ್ತಂಗಡಿ ತಾಲೂಕು […]
‘ಸೃಜನಶೀಲ ಸಂಶೋಧನೆಗಳಿಂದ ಸಮಾಜಕ್ಕೆ ವಿಶೇಷ ಕೊಡುಗೆ’

ಬೆಳ್ತಂಗಡಿ: ಕಠಿಣ ಪರಿಶ್ರಮ ಹಾಗೂ ಪ್ರಯತ್ನದಿಂದ ವಿಶೇಷ ಸಾಧನೆಗಳನ್ನು ಮಾಡಿ ತಾಂತ್ರಿಕ ಆವಿಷ್ಕಾರಗಳನ್ನು ಪ್ರದರ್ಶನಕ್ಕೆ ಅಣಿಗೊಳಿಸಿದ್ದೀರಿ. ಸೃಜನಶೀಲ ಸಂಶೋಧನೆಗಳಿಂದ ಸಮಾಜ ಹಾಗೂ ಮುಂದಿನ ಪೀಳಿಗೆಗೆ ವಿಶೇಷ ಕೊಡುಗೆ ನೀಡಿದ್ದೀರಿ. ಅಧ್ಯಯನಕ್ಕೆ ವಿಪುಲ ಅವಕಾಶಗಳಿದ್ದು ಅದನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವುದು ಮುಖ್ಯ. ಸಮೂಹದ ಸಾಧನೆಯಲ್ಲಿ ಗುರಿ ತಲುಪಿ ಗ್ರಾಹಕರಿಗೆ ಉಪಯುಕ್ತ ವಸ್ತುಗಳನ್ನು ಒದಗಿಸಿದಲ್ಲಿ ನಿಮ್ಮ ಸಾಧನೆ ಹಾಗು ಪರಿಶ್ರಮ ಸಾರ್ಥಕ್ಯ ಪಡೆಯುತ್ತದೆ ಎಂದು ಸಿಂಗಾಪುರದಲ್ಲಿ 16 ವರ್ಷಗಳ ಕಾಲ ತಾಂತ್ರಿಕ ವಿಭಾಗದಲ್ಲಿ ವಿಶೇಷ ಪರಿಣತಿ ಪಡೆದ ತೀರ್ಪುಗಾರ ಆದರ್ಶ ಕಾರಂತ್ […]
ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಸುಂದರ, ಪ್ರಶಾಂತ ಪ್ರಕೃತಿಯನ್ನು ನಾವೆಲ್ಲರೂ ಪ್ರೀತಿಸಿ, ಸ್ವಚ್ಛತೆಯನ್ನು ಕಾಪಾಡಿದರೆ ಪ್ರಕೃತಿ ಸದಾ ನಮ್ಮನ್ನು ಉತ್ತಮ ಆರೋಗ್ಯಭಾಗ್ಯದೊಂದಿಗೆ ರಕ್ಷಣೆ ಮಾಡುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.ಅವರು ಮೇ 22ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮತ್ತು ಧರ್ಮಸ್ಥಳದ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಸೇವಾಕರ್ತರ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿ ಮಾತನಾಡುತ್ತಿದ್ದರು.ಶುದ್ಧವಾದ ಗಾಳಿ, ನೀರು ಮತ್ತು ಪ್ರಶಾಂತ ಪ್ರಾಕೃತಿಕ ಪರಿಸರದಿಂದ ನಾವು ಉತ್ತಮ […]
ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನ ‘ಅಕ್ಷರೋತ್ಸವ-2024’ ಕೇಳುವ ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಕಟ್ಟಿಟ್ಟ ಬುತ್ತಿ: ಡಾ. ನರಹಳ್ಳಿ.

ಬೆಳ್ತಂಗಡಿ: ಕರಾವಳಿ ಭಾಗ ಎಂದರೆ ಧಾರ್ಮಿಕ ಮತ್ತು ಸಂಸ್ಕಾರಯುತ ಶಿಕ್ಷಣದ ನೆಲೆ. ಇಲ್ಲಿಯ ಸೌಂದರ್ಯ ನೋಡಿದರೆ ಬದುಕಿನ ಸ್ವರ್ಗ ಇದ್ದಂತೆ. ನಾವು ಆಗಿನ ಕಾಲದ ಶಿಕ್ಷಣ ಪಡೆದ ರೀತಿ, ನಮ್ಮ ಬದುಕಿನ ರೀತಿ ನೋಡಿದರೆ ಇಂದಿನ ವಿದ್ಯಾರ್ಥಿಗಳು ಹಿರಿಯರು ಮಾಡಿದ ಪುಣ್ಯದ ಫಲವನ್ನು ಅನುಭವಿಸುತ್ತಿದ್ದಾರೆ ಎನ್ನಬಹುದು. ಕರಾವಳಿ ಭಾಗದ ಶಿಕ್ಷಣ ಕ್ರಾಂತಿಯಾಗಿ ಮೂಡಿಬರುತ್ತಿರುವ ಎಕ್ಸೆಲ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುವ ಭಾಗ್ಯ ವಿದ್ಯಾರ್ಥಿಗಳಿಗೆ ಸಿಕ್ಕಿರುವುದು ದೊಡ್ಡ ಅವಕಾಶ. ಸಂಸ್ಕಾರಯುತ ಕಲಿಕೆಯನ್ನು ತಾಳ್ಮೆಯಿಂದ ಸ್ವೀಕರಿಸುವ ಮನೋಬಾವ ಬೆಳೆಸಿಕೊಂಡು ಜೀವನದಲ್ಲಿ ಯಶಸ್ವಿಯಾಗಿ […]
ಧರ್ಮಸ್ಥಳ ಬಸದಿಯಲ್ಲಿ ವಾರ್ಷಿಕೋತ್ಸವ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೇ 20ರಂದು ತೋರಣಮುಹೂರ್ತ, ವಿಮಾನಶುದ್ಧಿ, ಆರಾಧನಾಪೂರ್ವಕ ಕ್ಷೇತ್ರಪಾಲ ಪ್ರತಿಷ್ಠೆ, ನವಕಲಶ ಅಭಿಷೇಕ ಮತ್ತು ನಾಂದಿಮಂಗಲ ಪೂಜಾವಿಧಾನ ಮತ್ತಿತರ ಧಾರ್ಮಿಕ ವಿಧಿ-ವಿಧಾನಗಳು ನಡೆದವು.ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು ಮತ್ತು ಊರಿನ ಶ್ರಾವಕರು- ಶ್ರಾವಕಿಯರು ಉಪಸ್ಥಿತರಿದ್ದರು.
ರುಡ್ಸೆಟ್ ಸಂಸ್ಥೆಯ ವಾರ್ಷಿಕ ವರದಿ ಬಿಡುಗಡೆ

ಬೆಳ್ತಂಗಡಿ: ಉಜಿರೆ ರುಡ್ಸೆಟ್ ಸಂಸ್ಥೆಯ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ರುಡ್ಸೆಟ್ ಸಂಸ್ಥೆಗಳ ಅಧ್ಯಕ್ಷರೂ ಆದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ, ಉಜಿರೆ ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಎಂ. ಸುರೇಶ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 2023-24ರ ಸಂಸ್ಥೆಯ ಎಲ್ಲಾ ಚಟುವಟಿಕೆಗಳನ್ನು ಗಮನಿಸಿ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ವರ್ಷದ ಗುರಿಯನ್ನು ತಲುಪಲು ಕೆಲವು ಮಾರ್ಗದರ್ಶನವನ್ನು ನೀಡಿದರು. ಸಂಸ್ಥೆಯು […]
ವಿದ್ಯುತ್ ಟವರ್ ಮೇಲೆ ಉರುಳಿ ಬಿದ್ದ ಮರ

ಬೆಳ್ತಂಗಡಿ: 33 ಕೆವಿಎ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದ ಪರಿಣಾಮ ಓರ್ವ ಗಾಯಗೊಂಡ ಘಟನೆ ಮೇ 20ರ ಬೆಳಗ್ಗೆ ವರದಿಯಾಗಿದೆ.ನಡ ಗ್ರಾಮ ಪಂಚಾಯಿತ್ನ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ಹೋಗುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಮರದ ಒಂದು ಭಾಗ ರಮೇಶ್ರ ತಲೆಗೆ ಬಡಿದಿದೆ. ಸುದೈವವಶಾತ್ ಅವರು […]
ಧರ್ಮಸ್ಥಳದ ಕಾರು ಸಂಗ್ರಹಾಲಯಕ್ಕೆ ಕಾರು ಕೊಡುಗೆ

ಬೆಳ್ತಂಗಡಿ: ಮೂಡಬಿದ್ರಿ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು 2003ರಲ್ಲಿ ಖರೀದಿಸಿದ ಟೊಯೋಟಾ ಕ್ವಾಲೀಸ್ ವಾಹನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರ ಕಾರು ಸಂಗ್ರಹಾಲಯಕ್ಕೆ ಅಗತ್ಯ ದಾಖಲೆಗೆ ಸಹಿ ಮಾಡಿ ವರ್ಗಾಯಿಸಿದರು. 108 ಶಾಂತಿಸಾಗರ ಆಚಾರ್ಯರ ಪಾದಾರೋಹಣ ಶತಾಬ್ದಿ ಮಹೋತ್ಸವ ಶ್ರೀ ಮಠದ ವತಿಯಿಂದ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭ ನೆರವೇರಿಸಿದ ನೆನಪಿನಲ್ಲಿ ಡಿ. ವೀರೇಂದ್ರ ಹೆಗ್ಗಡೆ ದಂಪತಿಗಳನ್ನು ಸ್ವಾಮೀಜಿ ಗೌರವಿಸಿ, ಹರಸಿ ಅಭಿನಂದನಾ ಪತ್ರ ಹಾಗೂ ಶ್ರೀಫಲ […]
ಎಸ್ಡಿಎಂ ಮಹಿಳಾ ಐಟಿಐಗೆ ಅರ್ಜಿ ಅಹ್ವಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆಸಲ್ಪಡುವ ಹಾಗೂ ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ನವದೆಹಲಿಯಿಂದ ಮಾನ್ಯತೆ ಪಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐಗೆ 2024-25 ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಹಾಗೂ ಫ್ಯಾಷನ್ ಡಿಸೈನ್ ಮತ್ತು ಟೆಕ್ನಾಲಜಿ ಒಂದು ವರ್ಷ ಅವಧಿಯ ಎರಡು ವೃತ್ತಿ ತರಬೇತಿಗಳಿದ್ದು ವರ್ಷದ ಕೊನೆಯಲ್ಲಿ ನಡೆಯುವ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ […]