ರೈತರ ಕೃಷಿ ಭೂಮಿಯ ಹಕ್ಕು ರೈತರದ್ದೇ-ಬಿ.ಎಂ. ಭಟ್

ಬೆಳ್ತಂಗಡಿ: ರೈತರು ವಾಸ್ತವ್ಯವಿದ್ದು, ಕೃಷಿ ಮಾಡಿದ ಭೂಮಿ ಕಂದಾಯ ಭೂಮಿಯಾಗಲಿ, ಅರಣ್ಯ ಭೂಮಿಯಾಗಲಿ ಅದು ರೈತನ ಭೂಮಿ ಎಂದು ಪರಿಗಣಿಸಿ ಹಕ್ಕುಪತ್ರ ನೀಡಬೇಕೇ ವಿನಃ ಅದನ್ನು ಆ ಎರಡು ಇಲಾಖೆಗಳು ಅಳತೆ ಮಾಡಿ ತಮ್ಮದೆಂದು ಸಾಬೀತು ಮಾಡುವುದು ಮೂರ್ಖತನದ ತೀರ್ಮಾನ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ. ಭಟ್ ಟೀಕಿಸಿದರುಅವರು ಮಾರ್ಚ್ 30ರಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ತಾಲೂಕು ಕಚೇರಿ ಆವರಣದ ಒಳಗೆ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತಾಡುತ್ತಿದ್ದರು. ಅರಣ್ಯವಾಸಿ ರೈತರಿಗೆ ಹಕ್ಕುಪತ್ರ […]

ಶ್ರೀ ರಾಮ ಕ್ಷೇತ್ರದಲ್ಲಿ ಮಹಾಬ್ರಹ್ಮ ರಥೋತ್ಸವ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ರಾಮ ನವಮಿಯ ಮಾರ್ಚ್ 27ರಂದು ಬೆಳಿಗ್ಗೆ ಶ್ರೀ ರಾಮತಾರಕ ಮಂತ್ರ ಯಜ್ಞ ಮಂಗಳಂ, ವಾಗ್ದೇವಿ ಯಜ್ಞ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ ನಡೆದು; […]

ಶ್ರೀ ರಾಮ ಕ್ಷೇತ್ರದ ಜಾತ್ರಾ ಮಹೋತ್ಸವ ಹನುಮಾನ್ ರಥೋತ್ಸವ, ಕಟ್ಟೆ ಪೂಜೆ, ಕೆರೆ ದೀಪೋತ್ಸವ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಮಾರ್ಚ್ 26 ರಂದು ಬೆಳಿಗ್ಗೆ ದತ್ತ ಯಾಗ, ಮಧ್ಯಾಹ್ನ ಆಂಜನೇಯ ದೇವರಿಗೆ ಮತ್ತು ದತ್ತಾತ್ರೇಯ ಗುರುಗಳಿಗೆ ವಿಶೇಷ ಮಹಾ ಪೂಜೆ ನಡೆಯಿತು. ರಾತ್ರಿ […]

ತಾಲೂಕಿಗೆ ಎರಡು ಮುಖ್ಯಮಂತ್ರಿಗಳ ಚಿನ್ನದ ಪದಕ

ಬೆಳ್ತಂಗಡಿ: 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ಹೆಡ್ ಕಾನ್ಟೇಬಲ್ ವಿಜಯ ರೈ ಆಯ್ಕೆಯಾಗಿದ್ದಾರೆ.ವಿಜಯ ರೈ ಹಲವಾರು ಅಪರಾಧ ಪ್ರಕರಣಗಳನ್ನೂ ಭೇದಿಸುವಲ್ಲಿ ಹಿರಿಯ ಅಧಿಕಾರಿಗಳಿಗೆ ಸಹಾಯಕಾರಿಯಾಗಿ ಕರ್ತವ್ಯ ಮಾಡಿ ಅಪರಾಧಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾಲ್ಸೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ, ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಉಪನ್ಯಾಸಕಿಯಾಗಿರುವ ಪತ್ನಿ ಅನುಷಾ ಹಾಗೂ ಪುತ್ರ ಅಯ್ಯುಕ್ತ ಜೊತೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ […]

ಪ.ಜಾತಿಗೆ ಕಾಲೋನಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ ಮಂಜೂರು

ಬೆಳ್ತಂಗಡಿ: 2025-26 ನೇ ಸಾಲಿನ ಕಾಲೋನಿ ಅಭಿವೃದ್ಧಿ/ಪ್ರಗತಿ ಕಾಲೋನಿ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿಗೆ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯ ಅಭಿವೃದ್ಧಿಪಡಿಸಲು ಈ ಕೆಳಗಿನ ಕಾಮಗಾರಿಗಳಿಗೆ ರೂಪಾಯಿ 200 ಲಕ್ಷಗಳ ಅನುದಾನವನ್ನು ಮಂಜೂರು ಗೊಳಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖಾಂತರ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ ಮತ್ತು ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್‌ರವರು ಸರಕಾರಕ್ಕೆ ಮನವಿಯನ್ನು […]

ಲೋಕನಾಡು ಶ್ರೀ ಲೋಕನಾಥೇಶ್ವರ ದೇಗುಲದಲ್ಲಿ ವಾರ್ಷಿಕ ಜಾತ್ರೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು‌ ನಿಡಿಗಲ್‌ನ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 04ರವರೆಗೆ ವಾರ್ಷಿಕ ಸಿರಿ ಜಾತ್ರೆ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ  ಕೆ.ಎಂ. ನಾಗೇಶ್ ಕುಮಾರ್ ಗೌಡ ಮಾಹಿತಿ ನೀಡಿದರು.ಬೆಳ್ತಂಗಡಿಯಲ್ಲಿ ನಡೆದ ಪತ್ರಿಕಾಗೊಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಾರ್ಚ್ 31ನೇ ಮಂಗಳವಾರ ಬೆಳಿಗ್ಗೆ 06 ಗಂಟೆಯಿಂದ ದೇವತಾ ಕಾರ್ಯಗಳು, ರಾತ್ರಿ ದೈವಗಳ ನೇಮೋತ್ಸವ, ಏಪ್ರಿಲ್ 01ನೇ ಬುಧವಾರ […]

ಅಮೇರಿಕಾ-ಇರಾನ್ ಯುದ್ಧ ಖಂಡಿಸಿ ಪ್ರತಿಭಟನೆ

ಬೆಳ್ತಂಗಡಿ: ನಮ್ಮ ದೇಶದ ವಿದೇಶಾಂಗ ನೀತಿಯ ನಿಯಮವಾದ ಆಲಿಪ್ತ ನೀತಿಯ ವಿರುದ್ದ ನಡೆಯುವುದು ಕೇಂದ್ರ ಸರಕಾರ ಸಂವಿಧಾನಕ್ಕೆ ಬಗೆಯುವ ಅಪಚಾರ ಆಗಿದೆ ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕೆ. ಯಾಧವ ಶೆಟ್ಟಿ ಅವರು ಹೇಳಿದರು.ಅವರು ಮಾರ್ಚ್ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಸಿಐಟಿಯು , ಎಐಕೆಎಸ್, ಡಿವೈಎಪ್‌‌ಐ, ಜೆಎಂಎಸ್, ಡಿಎಚ್‌ಎಸ್ ಆದಿವಾಸಿ ಮೊದಲಾದ ಸಂಘಟನೆಗಳು ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುವ ಯುದ್ದ ಖಂಡಿಸಿ ನಡೆಸಿದ ಪ್ರತಿಭಟನೆಯನ್ನುದ್ದೇಶಿ ಮಾತಾಡುತ್ತಿದ್ದರು. ಇಡೀ […]

ಯೋಧರು ನಿವೃತ್ತರಾದರೂ ದೇಶದ ಆಸ್ತಿ- ಡಾ| ಗೋಪಾಲಕೃಷ್ಣ ಕೆ.

ಬೆಳ್ತಂಗಡಿ: ಇತ್ತೀಚಿಗೆ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಉಜಿರೆಯ ನಿವೃತ್ತ ಯೋಧರಾದ ಡಾ. ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ನಿವೃತ್ತ ಸಾಧಕ ಯೋಧ’ ಪ್ರಶಸ್ತಿಯನ್ನು ಸೇನಾ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿಯವರು ಪ್ರದಾನ ಮಾಡಿದರು. ಈ ಪ್ರಶಸ್ತಿ ಪಡೆದ ದಕ್ಷಿಣ ಭಾರತದ ಮೊದಲಿಗರು ಡಾ. ಗೋಪಾಲಕೃಷ್ಣ ಕಾಂಚೋಡು. ಆ ಪ್ರಯುಕ್ತ ಅವರನ್ನು ಉಜಿರೆಯ ಬೆನಕ ಹೆಲ್ತ್ ಸೆಂಟರ್ ವತಿಯಿಂದ ದಿನಾಂಕ ಮಾರ್ಚ್ 23ರಂದು ಆಸ್ಪತ್ರೆಯ ಆವರಣದಲ್ಲಿ ವೈದ್ರಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ ದಂಪತಿಗಳು ಶಾಲು ಹೊದಿಸಿ, ಫಲಪುಷ್ಪ ಮತ್ತು ನೆನಪಿನ […]

ಚಾರ್ಮಾಡಿ ಘಾಟ್ ನಲ್ಲಿ ಟಿಟಿ ವಾಹನ ಪಲ್ಟಿ

ಬೆಳ್ತಂಗಡಿ: ಬ್ರೇಕ್ ಫೈಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾಗಿ ಒಂಬತ್ತು ಮಂದಿ ಗಂಭೀರ ಗಾಯಗೊಂಡು, ಓರ್ವ ವೃದ್ಧ ಸಾವನ್ನಪ್ಪಿದ್ದ ಘಟನೆ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಮಾರ್ಚ್ 21ರಂದು ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ ಸೇರಿದಂತೆ ಮೂವರು ಮಕ್ಕಳು ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು.ಟಿಟಿ ವಾಹನಲ್ಲಿ ಒಂದೇ ಕುಟುಂಬದ 13 ಮಂದಿಯಲ್ಲಿ 9 ಮಂದಿಗೆ ಗಂಭೀರ ಗಾಯವಾಗಿದ್ದು. ಮಲೇನಹಳ್ಳಿ […]

ಮಹಿಳಾ ವೃಂದದಲ್ಲಿ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಜೀವನದ ಬಂಡಿ ಸಾಗುವಾಗ ಮಹಿಳೆ ಬಂಡಿಯ ಭಾರವನ್ನು ಹೊರುವ ಚಕ್ರವಾಗಿ ಕಾರ್ಯ ನಿರ್ವಹಿಸುತ್ತಾಳೆ. ಆದ್ದರಿಂದ ತನ್ನ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಅಳದಂಗಡಿಯ ವೈದ್ಯೆ ಡಾ| ಸುಷ್ಮಾ ಡೋಂಗ್ರೆ ಅವರು ಹೇಳಿದರು.ಅವರು ಮಾರ್ಚ್ 15ರಂದು ಬೆಳ್ತಂಗಡಿಯ ಮಹಿಳಾ ವೃಂದದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಏನಾದರೂ ಆರೋಗ್ಯದಲ್ಲಿ ಸಮಸ್ಯೆ ಆದರೆ ಗೂಗಲ್ ನೋಡಿ ನಮಗೇನೋ ಆಗಿದೆ ಎಂದು ಗಾಬರಿ ಆಗಬೇಡಿ. ವೈದ್ಯರನ್ನು ಭೇಟಿಯಾಗಿ. 10-12 ವರ್ಷದ […]