ಮೂಡುಬಿದಿರೆ ಪುರಸಭೆಆಗಸ್ಟ್ 13ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನ

ಮೂಡುಬಿದಿರೆ: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ಆಗಸ್ಟ್ 13ರಿಂದ 15ರವರೆಗೆ ಆಚರಿಸುವಂತೆ ರಾಜ್ಯದ ಕನ್ನಡ ಸಂಸ್ಕೃತಿ ಇಲಾಖೆ ಉಲ್ಲೇಖಿಸಿರುವಂತೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲರೂ ತಮ್ಮ ಮನೆಮನೆಯಲ್ಲೂ ತಮ್ಮ ಸ್ವಂತ ಖರ್ಚಿನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶ ಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಿಗೊಳಿಸಲು ‘ಹರ್ ಘರ್ ತಿರಂಗಾ’ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್ ಪುರಸಭೆಯ ವಿಶೇಷ ಸಭೆಯಲ್ಲಿ ತಿಳಿಸಿದರು.ಈ ಅಭಿಯಾನದ ಅಂಗವಾಗಿ ಆಗಸ್ಟ್ […]

ತಣ್ಣೀರುಪಂತ ಸೊಸೈಟಿಗೆ ಡಿ.ಸಿ.ಸಿ. ಬ್ಯಾಂಕ್ ಪ್ರಶಸ್ತಿ

ಬೆಳ್ತಂಗಡಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2021-22ನೇ ಸಾಲಿನಲ್ಲಿ 100% ಸಾಲ ವಸೂಲಾತಿ ಮಾಡಿದ ಸಾಧನೆಯನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಂಘಕ್ಕೆ ಸಾಧನ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಿದೆ. ಆಗಸ್ಟ್ 5ರಂದು ಮಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್. ಎನ್. ರಾಜೇಂದ್ರಕುಮಾರ್ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಅವರಿಗೆ ಪ್ರಶಸ್ತಿ ನೀಡಿ […]

🔥NSUI ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ

ಮೂಡುಬಿದಿರೆ: ಎನ್‌ಎಸ್‌ಯುಐ ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ 2021-22ನೇ ಸಾಲಿನಲ್ಲಿ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ 100 ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ಕಾರ್ಯಕ್ರಮವನ್ನು ಆಗಸ್ಟ್ 7ರಂದು ಪೂರ್ವಾಹ್ನ ಜೈನಕಾಶಿ-ವಿದ್ಯಾಕಾಶಿ ಮೂಡುಬಿದಿರೆಯ ಸಮಾಜಮಂದಿರ ಸಭಾಭವನದ ಸ್ವರ್ಣಮಂದಿರದಲ್ಲಿ ಜರಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಜೈನಕಾಶಿ ಮೂಡುಬಿದಿರೆ ಇಂದು ಸರ್ವಶ್ರೇಷ್ಠ ಗುಣಮಟ್ಟದ ವಿದ್ಯಾಕೇಂದ್ರಗಳ […]

ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ

ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಇದರ ವತಿಯಿಂದ ಬಂಟ ಸಮಾಜ ಬಾಂಧವರ ಸಭೆ, ಪ್ರತಿಭಾ ಪುರಸ್ಕಾರ, ಸಮ್ಮಾನ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವು ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೋಟೆಲ್ ಪಂಚರತ್ನ ಇಂಟರ್‌ನ್ಯಾಷನಲ್ ಸಭಾಭವನದಲ್ಲಿ ಆಗಸ್ಟ್ 6ರಂದು ಸಂಜೆ ನೆರವೇರಿತು.ಬಂಟರ ಮಾತೃಸಂಘ ಮಂಗಳೂರು ಇದರ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮತ್ತು ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಜೊತೆಗೂಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬಂಟ ಸಮಾಜದ ದಾಖಲೆ 400ಕ್ಕೂ ಹೆಚ್ಚು ಬಡಕುಟುಂಬದ […]

ಫೆಸ್ಟ್ರೋನಿಕ್ಸ್-2022′ ಮಾಹಿತಿ ತಂತ್ರಜ್ಞಾನ ಮತ್ತು ಸಾಂಸ್ಕ್ರತಿಕ ಸ್ಪರ್ಧಾಕೂಟ

‘ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಅಂತಿಮ ವರ್ಷದ ಗಣಕ ಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಂದ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಗಣಕ ಯಂತ್ರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ಫ಼ೆಸ್ಟ್ರೋನಿಕ್ಸ್-2022’ ಮಾಹಿತಿ ತಂತ್ರಜ್ಞಾನ ಮತ್ತು ಸಾಂಸ್ಕ್ರತಿಕ ಸ್ಪರ್ಧಾಕೂಟವನ್ನು ಜುಲೈ 26 ಮತ್ತು 27ರಂದು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂದನೀಯ ಗುರು ಬಾಸಿಲ್ ವಾಸ್‌ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಸುಮಾರು 130 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.ಜುಲೈ 27ರಂದು ಸಮಾರೋಪ ಸಮಾರಂಭ […]

ಬೆಳ್ತಂಗಡಿ ಪ.ಪಂ ಅಭಿವೃದ್ಧಿ ಚರ್ಚೆಗೆ ಶಾಸಕರ ನೇತೃತ್ವದ ಸಭೆ’ಜೂನಿಯರ್ ಕಾಲೇಜು ಬಳಿಯ ಅನೈತಿಕ ಚಟುವಟಿಕೆಗೆ ಕಡಿವಾಣ ಹಾಕಿ’

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸರಕಾರಿ ಜೂನಿಯರ್ ಕಾಲೇಜು ಬಳಿ ರಾತ್ರಿ ಹೊತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಈ ಬಗ್ಗೆ ರಾತ್ರಿ ಹೊತ್ತು ಗಸ್ತು ಹೆಚ್ಚಿಸಬೇಕು ಎಂದು ಶಾಸಕ ಹರೀಶ್ ಪೂಂಜಾ ಪೋಲೀಸ್ ಇಲಾಖೆಗೆ ಸೂಚಿಸಿದರು.ಅವರು ಜುಲೈ 26ರಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಗರ ಅಭಿವೃದ್ಧಿಯ ದೃಷ್ಠಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಗರ ಅಭಿವೃದ್ಧಿ ಕುರಿತು ಸಮಾಲೋಚನೆ ನಡೆಸುತ್ತಿದ್ದರು. ಪಟ್ಟಣದಲ್ಲಿ ಮೂಡ ಸಮಸ್ಯೆಯಿಂದ ಬಾಕಿ ವಿಲೇವಾರಿ ಅರ್ಜಿಯ […]

ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣಸಭಾದ ರಜತ ಮಹೋತ್ಸವ

ಬೆಳ್ತಂಗಡಿ: ಲಾಯ್ಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಇದರ ರಜತವರ್ಷದ ವಾರ್ಷಿಕೋತ್ಸವ, ಮಹಾಸಭೆ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವು ಜುಲೈ 17ರಂದು ಲಾಯ್ಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುಮಾರು 150 ಸದಸ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಮಕ್ಕಳಿಂದ 60ವರ್ಷದ ವಯಸ್ಕರವರೆಗೆ ಎಲ್ಲರಿಗೂ ವಿವಿಧ ರೀತಿಯ ಒಳಾಂಗಣ ಕ್ರೀಡೆಗಳು ಕ್ರೀಡಾ ಸಂಚಾಲಕ ದಿನೇಶ್ ಕುಮಾರ್ ರವರ ಮುಂದಾಳುತ್ವದಲ್ಲಿ ನಡೆಯಿತು. ಸಭಾದ ಉಪಾಧ್ಯಕ್ಷ ವಸಂತ್ […]

ಬೆಳ್ತಂಗಡಿ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಘದ ಅಧ್ಯಕ್ಷರಾದ ಲಕ್ಷೀನಾರಾಯಣ ಕೆ. ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ದಿವಾಕರ ಆಚಾರ್ಯ ಗೇರುಕಟ್ಟೆಯವರು ಮಾತನಾಡುತ್ತಾ, ಮುಖ್ಯ ಶಿಕ್ಷಕರು ಇಲಾಖೆ, ಸಮುದಾಯ ಮತ್ತು ಪೋಷಕರ ನಡುವಿನ ಸೇತುವಿನಂತೆ ಜವಾಬ್ದಾರಿ ನಿರ್ವಹಿಸುವವರು. ಸಮಾಜದ ಪರಿವರ್ತನೆಯಲ್ಲಿ ಇವರ ಪಾತ್ರ ಪ್ರಧಾನವಾಗಿದೆ. ಪ್ರಸ್ತುತ ಶಿಕ್ಷಕರ ಪ್ರತಿಭೆ ಮತ್ತು ಹವ್ಯಾಸಗಳು ಮಕ್ಕಳ ಪ್ರತಿಭಾ ವಿಕಸನಕ್ಕೆ […]

ರಬ್ಬರು ಸೊಸೈಟಿ ವತಿಯಿಂದ ಡಾ. ಹೆಗ್ಗಡೆಯವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಕೇಂದ್ರ ಸರಕಾರದಿಂದ ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಉಜಿರೆಯ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ. ಭಿಡೆ, ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನಿರ್ದೇಶಕರಾದ ಸೋಮನಾಥ ಬಂಗೇರ ವರ್ಪಾಳೆ, ರಾಮ ನಾಯ್ಕ, ಅಬ್ರಹಾಂ ಅರಸಿನಮಕ್ಕಿ, ಬಾಲಕೃಷ್ಣ ಗೌಡ ಕೇರಿಮಾರು, ಜಯಶ್ರೀ ಡಿ. ಎಂ. ಗೌಡ ಹಾಗೂ […]