ಹಣ್ಣಿನ ಗಿಡನೆಟ್ಟು ವನಮಹೋತ್ಸವ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನಲ್ಲಿ ಶೌರ್ಯ ಶ್ರೀಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸಹಯೋಗದೊಂದಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕರು ಅತ್ಯಂತ ಉಪಯುಕ್ತವಾದ ಫಲ ಕೊಡುವ ಹಣ್ಣು ಹಂಪಲುಗಳ ಗಿಡಗಳನ್ನು ಕಾಲೇಜಿನ ಮೈದಾನದ ಸುತ್ತಲೂ ನೆಡುದರ ಮೂಲಕ ವನಮಹೋತ್ಸವ ಆಚರಿಸಿ, ಗಿಡ ಮರಗಳನ್ನು ನೆಟ್ಟು, ಪೋಷಿಸುವುದರ ಮಹತ್ವದ ಕುರಿತು ಇತರರಿಗೆ ಮಾದರಿಯಾದರು.ಈ ಸಂಧರ್ಭದಲ್ಲಿ ಸೇಕ್ರೆಡ್ ಹಾರ್ಟ್ ಸಂಸ್ಥೆಗಳ ಮಾನ್ಯ ಸಂಚಾಲಕರಾದ ವಂದನೀಯ ಬೇಸಿಲ್ ವಾಸ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ […]
ಜೀತಪದ್ಧತಿ ವಿರೋಧಿಸಿ ಜು. 1ರಿಂದ ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಮುಷ್ಕರ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಎಲ್ಲ 314 ನಗರ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಜೀತ ಮಾಡುತ್ತಿರುವ ತ್ಯಾಜ್ಯ ಸಹಾಯಕರು, ಯೂಜಿಡಿ ನೌಕರರು, ಕಸ ಸಾಗಾಟ ವಾಹನ ಚಾಲಕರು, ವಾಟರ್ಮೆನ್, ಡಾಟಾ ಎಂಟ್ರಿ ಅಪರೇಟರ್ಸ್ರನ್ನು ಹೊರಗುತ್ತಿಗೆ ಮತ್ತು ಗುತ್ತಿಗೆ ಪದ್ಧತಿ ಬದಲಾಗಿ ನೇರ ವೇತನಕ್ಕೆ ಒಳಪಡಿಸಿ, ಇತರ ಸರಕಾರಿ ನೌಕರರಂತೆ ಜೀತ ಮಾಡುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೂ ಸರಕಾರದ ಸಕಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಲು ಹಾಗೂ ಪೌರ ಕಾರ್ಮಿಕರ ನೇಮಕಾತಿಗೆ ಒತ್ತಾಯಿಸಿ […]
ಯುವಕರಿಗೆ ಕೆಂಪೇಗೌಡರು ಆದರ್ಶವಾಗಬೇಕು-ಪೂಂಜ

ಬೆಳ್ತಂಗಡಿ: ನಾಡಿನ ಯುವಸಮೂಹಕ್ಕೆ ಬೆಂಗಳೂರು ಶಿಲ್ಪಿ ನಾಡಪ್ರಭು ಕೆಂಪೇಗೌಡರು ಆದರ್ಶವಾಗಬೇಕು. ಉತ್ತಮ ವ್ಯಕ್ತಿತ್ವ ನಿರ್ಮಿಸಿಕೊಂಡು ಬದುಕಲ್ಲಿ ಸಾಧನೆಗೈಯಲು ಕೆಂಪೇಗೌಡರ ಬದುಕು ಪ್ರೇರಣೆಯಾಗಬೇಕು. ದೂರದೃಷ್ಟಿ ಇದ್ದ ಕೆಂಪೇಗೌಡರು ಅಂದು ಬೆಂಗಳೂರು ನಗರವನ್ನು ಪ್ರಾಕೃತಿಕ ಸಮತೋಲನದಿಂದ ಅಭಿವೃದ್ಧಿಪಡಿಸಲು ನಗರದಲ್ಲಿ ಕೆರೆಗಳ ನಿರ್ಮಾಣ, ಉದ್ಯಾನವನಗಳ ನಿರ್ಮಾಣ, ರಸ್ತೆ ಬದಿಯ ಸಾಲುಮರಗಳ ಕಲ್ಪನೆಯೊಂದಿಗೆ ನಗರವನ್ನು ಕಟ್ಟಿ ಬೆಳೆಸಿದವರು ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಜೂನ್ 27ರಂದು ಬೆಳ್ತಂಗಡಿಯ ಶ್ರೀ ಮಂಜುನಾಥಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ […]
‘ಅಧ್ಯಯನಶೀಲತೆ ನಿತ್ಯನಿರಂತರವಾಗಿರಲಿ’ ಉಜಿರೆ ರುಡ್ ಸೆಟ್ ನಲ್ಲಿ ಕೌಶಲ್ಯ ತರಬೇತಿ ಸಮಾರೋಪದಲ್ಲಿ ಡಾ. ಹೆಗ್ಗಡೆ

ಬೆಳ್ತಂಗಡಿ: ಉನ್ನತ ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಾರೆ. ಜ್ಞಾನ ಕೊಟ್ಟಸ್ಟು ನಮ್ಮ ಜ್ಞಾನ ಇಮ್ಮಡಿಯಾಗುತ್ತದೆ. ನಾವು ಸಮಯಕ್ಕೆ ಸರಿಯಾಗಿ ನೂತನ ಕೌಶಲ್ಯಕ್ಕೆ ನಮ್ಮನ್ನು ನಾವು ಅಪ್ ಗ್ರೇಡ್ ಮಾಡಿಕೊಳ್ಳಬೇಕು. ನಮ್ಮ ಅಧ್ಯಯನಶೀಲತೆ ನಿತ್ಯನಿರಂತರವಾಗಿರಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಉಜಿರೆ ರುಡ್ಸೆಟ್ ಸಂಸ್ಥೆ ಹಾಗೂ ಗುಲಾಬಿ ಕೃಷ್ಣ ಭಂಡಾರಿ ಚಾರಿಟೇಬಲ್ ಟ್ರಸ್ಟ್ನ ಜಂಟಿ ಆಶ್ರಯದಲ್ಲಿ ಉಜಿರೆಯ ರುಡ್ಸೆಟ್ನಲ್ಲಿ 3 ದಿನ ನಡೆದ ರಾಜ್ಯಮಟ್ಟದ ಬ್ಯೂಟೀಶಿಯನ್ಗಳ ಉನ್ನತ ಕೌಶಲ್ಯದ ತರಬೇತಿ ಬಳಿಕ […]
ಡಾ| ಟಿ. ಎನ್. ತುಳಪುಳೆ ದತ್ತಿನಿಧಿ ಉಪನ್ಯಾಸ ಮತ್ತು ಸಮ್ಮಾನ

ಬೆಳ್ತಂಗಡಿ: ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪುಸ್ತಕ ಪ್ರೀತಿ, ಓದುವ ಗ್ರಹಣಶಕ್ತಿ ಅಪೂರ್ವವಾದುದು. ಅಂತೆಯೇ ಡಾ. ಬಿ. ಯಶೋವರ್ಮ ಅವರ ಬದುಕು ಕೂಡ ತೆರೆದ ಪುಸ್ತಕದಂತೆ. ಅವರಿಗೆ ಸಾಹಿತ್ಯ ಹಾಗೂ ಸಾಹಿತಿಗಳ ಮೇಲೆ ಅಪಾರ ಪ್ರೀತಿ ಹಾಗು ಗೌರವ. ಕಲಾವಿದರ ಬಗ್ಗೆ ವಿಶೇಷ ಅಭಿಮಾನ. ಸಸ್ಯಗಳ ಮೇಲಿನ ಪ್ರೀತಿ, ಆಡಳಿತದ ದೂರದರ್ಶಿತ್ವ, ಗೋಷ್ಠಿ-ಸಮ್ಮೇಳನಗಳನ್ನು ಆಸ್ವಾದಿಸಿ ವಿಮರ್ಶಿಸುವ ಅವರ ಜೀವನ ಹಾಗು ಬದುಕು ವಿದ್ಯಾರ್ಥಿಗಳಿಗೆ ಅನುಕರಣೀಯ ಮಾದರಿಯಾಗಿದೆ ಎಂದು ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರೀ ನುಡಿದರು. […]
ಸೌತಡ್ಕದಲ್ಲಿ ವಿಶ್ವ 8ನೇ ಯೋಗ ದಿನಾಚರಣೆ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕೊಕ್ಕಡ ಅಮೃತ ಗ್ರಾಮ ಪಂಚಾಯತ್ಗಳ ಸಂಯುಕ್ತ ಆಶ್ರಯದಲ್ಲಿ ಸೌತಡ್ಕ ಶ್ರೀ ಗಣೇಶ ಕಲಾ ಮಂದಿರದಲ್ಲಿ ಜೂ 21ರಂದು 8ನೇ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಯೋಗ ಪ್ರಾತ್ಯಕ್ಷಿಕೆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಸೌತಡ್ಕದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ […]
ಪ್ರೊ. ಎನ್.ಜಿ. ಪಟವರ್ಧನ್ರ ಕೃತಿಗಳ ಅನಾವರಣ

ಬೆಳ್ತಂಗಡಿ: ಇಂದು ಪುಸ್ತಕ ಓದುವ ಮತ್ತು ಬರೆಯುವ ಹವ್ಯಾಸ ಕಡಿಮೆಯಾಗಿದೆ. ಪ್ರತಿಯೊಂದು ಕಡೆ ಸಾಹಿತ್ಯಾರಾಧಕರು ಹಾಗೂ ಸಾಹಿತ್ಯಾಭಿಮಾನಿಗಳು ಇರುತ್ತಾರೆ. ಸಾಹಿತ್ಯವನ್ನು ಆಸಕ್ತಿಯಿಂದ ಓದಿ,ಅಭಿರುಚಿ ಬೆಳೆಸಿಕೊಳ್ಳಬೇಕು. ಪಟವರ್ಧನ್ ಅವರ ಬರಹಗಳ ಕೃತಿಗಳು ಲೇಖನಗಳ ಹರಿವು, ಅಳ ಮತ್ತು ಮಾನವ ಪ್ರಜ್ಞೆಯ ಸ್ತರವನ್ನು ತಟ್ಟುತ್ತದೆ . ಸುಲಲಿತವಾಗಿ ಓದಿಸಿಕೊಂಡು ಹೋಗುವ ಸಂಗ್ರಹಯೋಗ್ಯ ಕೃತಿ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಚಾರ್ಯ ಡಾ. ಪಿ. ಎನ್ .ಉದಯಚಂದ್ರ ಹೇಳಿದರು. […]
ಮಡಂತ್ಯಾರಿನಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್.ಸಿ.ಸಿ, ಯೂತ್ ರೆಡ್ ಕ್ರಾಸ್ ಹಾಗೂ ದೈಹಿಕ ಶಿಕ್ಷಣ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ 2ನೇ ಬಿ.ಕಾಂ. ವಿದ್ಯಾರ್ಥಿನಿ ಸ್ನೇಹ ಬಂಗೇರರ ನೇತೃತ್ವದಲ್ಲಿ ಯೋಗಾಸನ ತರಬೇತಿ ನೀಡು ವುದರ ಮೂಲಕ ಜೂನ್ 8ರಂದು ಯೋಗ ದಿನಾಚರಣೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಕಾಲೆಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಮ್., ರಾಷ್ಟ್ರೀಯ ಸೇವಾ ಯೋಜನಾ ಘಟಕದ […]
ಮಡಂತ್ಯಾರಿನಲ್ಲಿ ವಿಶ್ವ ಯೋಗ ದಿನಾಚರಣೆ

ಫೊಟೊಬೆಳ್ತಂಗಡಿ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸೇಕ್ರೆಡ್ ಹಾರ್ಟ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್.ಸಿ.ಸಿ, ಯೂತ್ ರೆಡ್ ಕ್ರಾಸ್ ಹಾಗೂ ದೈಹಿಕ ಶಿಕ್ಷಣ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ 2ನೇ ಬಿ.ಕಾಂ. ವಿದ್ಯಾರ್ಥಿನಿ ಸ್ನೇಹ ಬಂಗೇರರ ನೇತೃತ್ವದಲ್ಲಿ ಯೋಗಾಸನ ತರಬೇತಿ ನೀಡು ವುದರ ಮೂಲಕ ಜೂನ್ 8ರಂದು ಯೋಗ ದಿನಾಚರಣೆ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಕಾಲೆಜಿನ ಪ್ರಾಂಶುಪಾಲರಾದ ಡಾ. ಜೋಸೆಫ್ ಎನ್. ಎಮ್., ರಾಷ್ಟ್ರೀಯ ಸೇವಾ ಯೋಜನಾ ಘಟಕದ […]
ರಾಷ್ಟ್ರಮಟ್ಟದ ಸಾಕ್ಷ್ಯಚಿತ್ರೋತ್ಸವದಲ್ಲಿ ಎಸ್. ಡಿ.ಎಮ್ ಗೆ ಪ್ರಥಮ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಾಕ್ಷ್ಯಚಿತ್ರ ಮತ್ತು ಕಿರುಚಿತ್ರೋತ್ಸವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ ಸಾಕ್ಷ್ಯಚಿತ್ರ ಪ್ರಥಮ ಸ್ಥಾನದ ಗರಿ ಪಡೆದುಕೊಂಡಿದೆ.ಕಾಸರಗೋಡು ಸೀರೆ ಕೈಮಗ್ಗದ ಕುರಿತ ಸಾಕ್ಷ್ಯಚಿತ್ರ ಇದಾಗಿದ್ದು; ಕೈಮಗ್ಗದ ವಾಸ್ತವತೆ, ನೇಕಾರರ ದಿನಚರಿಯ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ. ರಾಮ್ ಮೋಹನ್ ಭಟ್ ಎಚ್. ಅವರ ಸಾಹಿತ್ಯ ಹಾಗೂ ನಿರ್ದೇಶನವಿದ್ದು ‘ಗತವೈಭವ’ ಶೀರ್ಷಿಕೆಯಡಿ ಈ ಸಾಕ್ಷ್ಯಚಿತ್ರ ಮೂಡಿಬಂದಿದೆ. ಈ ಸಾಕ್ಷ್ಯಚಿತ್ರಕ್ಕೆ ಸಂಪತ್ […]