ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್‌ನ ಅಧ್ಯಕ್ಷರಾಗಿ ಲ್ಯಾನ್ಸಿ ಎ. ಪಿರೇರಾ

ಬೆಳ್ತಂಗಡಿ: ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್‌ನ 2021-22ನೇ ಸಾಲಿನ ಅಧ್ಯಕ್ಷರಾಗಿ ಬೆಳ್ತಂಗಡಿಯ ಉದ್ಯಮಿ, ಹಿಮಾಲಯ ಫೈನಾನ್ಸ್‌ನ ಮಾಲಕ ಹಾಗೂ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿಯ ಅಧ್ಯಕ್ಷರೂ ಆಗಿರುವ ಲ್ಯಾನ್ಸಿ ಎ. ಪಿರೇರಾ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಜುಲೈ 18ರಂದು ಬೆಳ್ತಂಗಡಿಯಲ್ಲಿ ಮಂಜುಶ್ರೀ ಸೀನಿಯರ್ ಛೇಂಬರ್‌ನ ಅಧ್ಯಕ್ಷ ವಿಶ್ವನಾಥ್ ಶೆಟ್ಟರ ಅಧ್ಯಕ್ಷತೆಯಲ್ಲಿ ಸ್ಥಾಪಕಾಧ್ಯಕ್ಷ ಪ್ರಮೋದ್ ಆರ್. ನಾಯಕ್‌ರ ಉಪಸ್ಥಿತಿಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಛೇಂಬರ್‌ನ ಕಾರ್ಯದರ್ಶಿಯಾಗಿ ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ […]

ಮಾತಾಜಿಯವರ ಚಾತುರ್ಮಾಸ ವ್ರತಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದಲ್ಲಿರುವ ಭಗವಾನ್ ಶ್ರೀ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಪೂಜ್ಯ ಆರ್ಯಿಕಾ ಚಿಂತನಮತಿ ಮಾತಾಜಿ ಮತ್ತು ಪೂಜ್ಯ ಕ್ಷುಲ್ಲಿಕಾ ಸುಶ್ರೇಯಾ ಮಾತಾಜಿ ಅವರ ಚಾತುರ್ಮಾಸ ವ್ರತಾಚರಣೆ ನಡೆಯಲಿದೆ.ಈಗಾಗಲೆ ಉಭಯ ಮಾತಾಜಿಯವರು ನಾರಾವಿ ಪುರಪ್ರವೇಶ ಮಾಡಿದ್ದಾರೆ.ಚಾತುರ್ಮಾಸ ಪ್ರಯುಕ್ತ ಜುಲೈ 23ರಂದು ಬಸದಿಯಲ್ಲಿ ಮಂಗಳ ಕಲಶ ಸ್ಥಾಪನಾ ಸಮಾರಂಭ ನಡೆಯಲಿದ್ದು, ಇದರ ಪೂರ್ವಭಾವಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದು ಸಂಘಟಕರು ತಿಳಿಸಿದ್ದಾರೆ.

ಕೊಲ್ಲಿ ದೇಗುಲದಲ್ಲಿ ತೀರ್ಥಮಂಟಪಕ್ಕೆ ಶಿಲಾಪೂಜೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಪ್ರಗತಿಯಲ್ಲಿದ್ದು, ತೀರ್ಥ ಮಂಟಪ ಹಾಗೂ ಸುತ್ತು ಪೌಳಿಯ ಶಿಲಾಪೂಜೆ ಕಾರ್ಯಕ್ರಮ ಜುಲೈ 17ರಂದು ಜರಗಿತು.ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಊರಿನ ದೇವಸ್ಥಾನದ ಅಭಿವೃದ್ಧಿ ಪ್ರತಿಯೊಬ್ಬನ ಜವಾಬ್ದಾರಿಯಾಗಿದ್ದು, ಪರಸ್ಪರ ಸಹಕಾರದ ಜೊತೆ ಮುಂದುವರಿದರೆ ಕೆಲಸಗಳು ನಿರ್ವಿಘ್ನವಾಗಿ ಸಾಗಿ ನಿಯೋಜಿತ ಅವಧಿಯೊಳಗೆ ಪೂರ್ಣಗೊಳ್ಳುತ್ತವೆ ಎಂದು ಹೇಳಿದರು.ಧರ್ಮಸ್ಥಳ ಜಮಾ ಉಗ್ರಾಣದ ಮುತ್ಸದ್ದಿ ಬಿ. ಭುಜಬಲಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]

ಮಳೆ-ನೆರೆಯ ಆತಂಕ: ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ

ಬೆಳ್ತಂಗಡಿ : ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನ ನಿರಂತರವಾಗಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಭಾರೀ ಪ್ರವಾಹೋಪಾದಿಯ ಮಳೆಯಿಂದ ತಾಲೂಕಿನ ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾಗುವ ಅಪಾಯ ಇದೆ. ಈ ಹಿನ್ನೆಲೆಯಲ್ಲಿ ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುತ್ತಮುತ್ತ ಗುಡ್ಡ ಕುಸಿತದ ಅಪಾಯ ಇರುವ ಹಿನ್ನೆಲೆಯಲ್ಲಿ, ಅದರಲ್ಲೂ ಅತ್ಯಂತ ಹೆಚ್ಚು ಅಪಾಯ ಇರುವ ಗಣೇಶ್ ನಗರದ 32 ಕುಟುಂಬಗಳಿಗೆ ತಾತ್ಕಾಲಿಕ ಕಾಳಜಿ ಕೇಂದ್ರ ತೆರೆಯಲು ಪುತ್ತೂರು ಸಹಾಯಕ ಆಯುಕ್ತ […]

ರಸ್ತೆ ದುರವಸ್ಥೆ – ದುರಸ್ಥಿಗೊಳಿಸಲು ಒತ್ತಾಯ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಕಿನ್ನಿಗೋಳಿಯಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕೆಲವೇ ದಿನಗಳಲ್ಲಿ ಸಂಪರ್ಕ ಕಡಿದುಕೊಳ್ಳಲಿದೆ. ದೇವಸ್ಥಾನದ ಸಮೀಪ ದೇರಮಾರ್ ಎಂಬಲ್ಲಿ ರಸ್ತೆ ಮಳೆಗೆ ಕುಸಿದು ಸಂಪರ್ಕ ಕಡಿತವಾಗುವ ಸನ್ನಿವೇಶ ಎದುರಾಗಿದೆ. ಮದ್ದಡ್ಕ ಸಮೀಪದ ಕಿನ್ನಿಗೋಳಿಯಿಂದ ದೇರಮಾರ್‌ವರೆಗೆ ಕುವೆಟ್ಟು ಗ್ರಾಮ ಪಂಚಾಯತ್ ಹಾಗೂ ಅಲ್ಲಿಂದ ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಈ ರಸ್ತೆ ಹೊಂಡ ಗುಂಡಿಯಿಂದ ಕೂಡಿದ್ದು, ಕಲ್ಲು ಇನ್ನಿತರ ವಸ್ತುಗಳನ್ನು ಸಾಗಿಸುವ ಲಾರಿಗಳು ಈ ರಸ್ತೆಯಲ್ಲಿ ಸಾಗುತ್ತಿದ್ದು ರಸ್ತೆ […]

ಸ್ವಸಹಾಯ ಸಂಘಗಳ ಲಾಭಾಂಶ ವಿತರಣೆ

ಬೆಳ್ತಂಗಡಿ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಮತ್ತು ಸಿ ಟ್ರಸ್ಟ್(ರಿ) ಮಡಂತ್ಯಾರು ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಲಾಭಾಂಶ ವಿತರಣೆ ಕಾರ್ಯಕ್ರಮ ಮಡಂತ್ಯಾರು ವಲಯದ ಕಛೇರಿಯಲ್ಲಿ ಜುಲೈ 17ರಂದು ಜರಗಿತು. ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಬಿ. ಜಯಂತ ಶೆಟ್ಟಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಯಶವಂತ್, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲ, ಉಮೇಶ್ ಸುವರ್ಣ ಅಲೆಕ್ಕಿ, ವಲಯ ಮೇಲ್ವಿಚಾರಕ ಮಧು ಕಿರಣ್, […]

ಹೆದ್ದಾರಿಗೆ ಮರ ಉರುಳಿಬಿದ್ದ ಮರ-ಸಂಚಾರ ವ್ಯತ್ಯಯ

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಬಳಿ ಜುಲೈ 14ರ ಸಂಜೆ ಮಳೆಯೊಂದಿಗೆ ಬೀಸಿದ ಭಾರೀ ಗಾಳಿಗೆ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಲೈನ್ ಹಾಗೂ ರಸ್ತೆಗೆ ಉರುಳಿ ವಾಹನ ಸಂಚಾರ ಹಾಗೂ ವಿದ್ಯುತ್ ಪೂರೈಕೆಗೆ ಅಡಚಣೆ ಉಂಟಾಯಿತು.ಕಕ್ಕಿಂಜೆಯಿಂದ ಮುಂಡಾಜೆಗೆ ವಿದ್ಯುತ್ ಪೂರೈಸುವ 11ಕೆವಿ ಲೈನ್‌ನ ಎರಡು ಕಂಬಗಳು ಮುರಿದು ಬಿದ್ದಿವೆ. ಇದರಿಂದ ಮುಂಡಾಜೆ, ಸೋಮಂತಡ್ಕ, ಕಲ್ಮಂಜ, ಕಾಯರ್ತೋಡಿ, ಕೊಡಂಗೆ, ಕುಡೆಂಚಿ, ಮೂಲಾರು, ಕಡಂಬಳ್ಳಿ ಮೊದಲಾದ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ […]

ಸೇವಾಭಾರತಿಯ ಸೇವೆಗೆ ಕೃತಜ್ಞತೆ

ಬೆಳ್ತಂಗಡಿ: ಸೇವಾಭಾರತಿ ಬೆಳ್ತಂಗಡಿ ಇದರ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಬೆನ್ನು ಮೂಳೆ ಮುರಿತಕ್ಕೊಳಗಾದ ದಾವಣಗೆರೆ ಜಿಲ್ಲೆಯ ಗೊಪ್ಪೇನಹಳ್ಳಿಯ ನಾಗರಾಜ್ ಇವರು ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದು, ಗಾಲಿಕುರ್ಚಿಯ ಸಹಾಯವಿಲ್ಲದೆ ನಡೆದಾಡಲು ಕಷ್ಟಪಡುತ್ತಿದ್ದರು. ಇವರು ಸತತ ಮೂರು ತಿಂಗಳ ಪುನಶ್ಚೇತನ ಶಿಬಿರದಲ್ಲಿ ತೊಡಗಿಸಿಕೊಂಡು ಇದೀಗ ವಾಕರ್ ಮೂಲಕ ನಡೆಯುವಂತಾಗಿದ್ದು; ಪುನಶ್ಚೇತನ ಮುಗಿಸಿ ಮನೆಗೆ ಹೋಗುವ ದಾರಿ ಮಧ್ಯೆ ಸೇವಾಭಾರತಿಯ ಕಾರ್ಯಾಲಯ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿನೀಡಿ ಕೃತಜ್ಞತೆ ತಿಳಿಸಿರುತ್ತಾರೆ.ಈ ಸಂದರ್ಭ ನಾಗರಾಜ್‌ರ ತಾಯಿ ಮತ್ತು ಸ್ನೇಹಿತರು ಉಪಸ್ಥಿತರಿದ್ದರು. ಸೇವಾಭಾರತಿಯ ಅಧ್ಯಕ್ಷ ವಿನಾಯಕ […]

ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಳದಂಗಡಿ ವಲಯದ ಸುಲ್ಕೇರಿಮೊಗ್ರು ಒಕ್ಕೂಟದಲ್ಲಿನ ಎ ಮತ್ತು ಬಿ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಲಾಭಾಂಶ ವಿತರಣೆ ಜುಲೈ 14ರಂದು ಸುಲ್ಕೇರಿ ಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರು ಸದಸ್ಯರಿಗೆ ಲಾಭಾಂಶದ ಚೆಕ್‍ನ್ನು ವಿತರಸಿ ಶುಭ ಹಾರೈಸಿದರು. ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಯೋಜನೆಯ ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಯಶವಂತ ಎಸ್., ಒಕ್ಕೂಟದ ಅಧ್ಯಕ್ಷ ಆನಂದ, ಶಕುಂತಳಾ, ಕೋಶಾಧಿಕಾರಿ ಪ್ರೇಮಾ, […]

ಸಿಎಸ್‌ಆರ್ ಯೋಜನೆಯಡಿ ಒದಗಿಸಲಾದ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ಹಸ್ತಾಂತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿರುವ ಕೋವಿಡ್ ಸಂತ್ರಸ್ತರ ಚಿಕಿತ್ಸೆಗೆ ನೆರವಾಗಲು ಸಿಎಸ್‌ಆರ್ ಯೋಜನೆಯಡಿ ಒದಗಿಸಲಾದ 15 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಶಾಸಕ ಹರೀಶ್ ಪೂಂಜರವರು ಜುಲೈ 14ರಂದು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಹಸ್ತಾಂತರಿಸಿದರು.ಬೆಳ್ತಂಗಡಿ ತಾಲೂಕಿನಲ್ಲಿರುವ ಕೋವಿಡ್ ಸಂತ್ರಸ್ತರ ಚಿಕಿತ್ಸೆಗಾಗಿ ಸಿಎಸ್‌ಆರ್ ಯೋಜನೆಯಡಿ 20ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಒದಗಿಸಿಕೊಡುವಂತೆ ಶಾಸಕ ಹರೀಶ್ ಪೂಂಜರವರು ಕಳೆದ ಮೇ ತಿಂಗಳ 29ರಂದು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ರವರಿಗೆ ಮನವಿ ನೀಡಿದ್ದರು. ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ ಸಿಎಸ್‌ಆರ್ ಯೋಜನೆಯಡಿ ತಾಲೂಕಿಗೆ 15ಆಕ್ಸಿಜನ್ […]