ಕೋಟೆಬಾಗಿಲಿನಲ್ಲಿ ವೃಕ್ಷಾರೋಪಣ ಕಾರ್ಯಕ್ರಮ

ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನಲ್ಲಿ ಬಿಜೆಪಿ ನಗರ ಮಹಾ ಶಕ್ತಿಕೇಂದ್ರದ ವತಿಯಿಂದ ವೃಕ್ಷಾರೋಪಣ ಕಾರ್ಯಕ್ರಮವುಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲ, ಬಿಜೆಪಿ ಮೂಡುಬಿದಿರೆ ನಗರ ಮಹಾ ಶಕ್ತಿಕೇಂದ್ರದ ಸಹಭಾಗಿತ್ವದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಭಾರತೀಯ ಜನಸಂಘದ ಸ್ಥಾಪಕ ಅಧ್ಯಕ್ಷರಾದ ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸದ ಪ್ರಯುಕ್ತ ಪ್ರತಿ ಬೂತಿನಲ್ಲಿ 20 ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಬೇಕೆಂದು ಪಕ್ಷದ ಸೂಚನೆ […]
ಬೆಳ್ತಂಗಡಿ: ತಾಲೂಕು ಪತ್ರಿಕಾ ದಿನಾಚರಣೆ ಆಧುನಿಕ ತಂತ್ರಜ್ಞಾನದ ಮಧ್ಯೆಯೂ ಪತ್ರಿಕೆ ವಿಶ್ವಾಸಾರ್ಹ

ಬೆಳ್ತಂಗಡಿ: ತಾಲೂಕು ಪತ್ರಿಕಾ ದಿನಾಚರಣೆ ಆಧುನಿಕ ತಂತ್ರಜ್ಞಾನದ ಮಧ್ಯೆಯೂ ಪತ್ರಿಕೆ ವಿಶ್ವಾಸಾರ್ಹಫೊಟೊ ಬೆಳ್ತಂಗಡಿ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪತ್ರಿಕೆ ಮಹತ್ತರ ಪಾತ್ರ ವಹಿಸಿತ್ತು. ಅದೇ ರೀತಿ ಕೊರೊನಾ ಸಂದರ್ಭದಲ್ಲಿ ಪತ್ರಿಕೆಗಳು ಸೋಂಕನ್ನು ಕ್ಷಿಪ್ರವಾಗಿ ನಿಯಂತ್ರಣಕ್ಕೆ ತರುವಲ್ಲಿ ಸರಕಾರ ಎಷ್ಟು ಕಾರಣವೋ ಅಷ್ಟೇ ಮಾಧ್ಯಮವೂ ಕಾರಣ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ವತಿಯಿಂದ ಜುಲೈ 3ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತುರ್ತು ಪರಿಸ್ಥಿತಿ […]
ಕೋರೋನ ವಾರಿಯರ್ಸ್ಗೆ ಗೌರವಧನ ಹಾಗೂ ಪರಿಕರ ಕೊಡುಗೆ

ಬೆಳ್ತಂಗಡಿ: ಗ್ರಾಮ ಮಟ್ಟದಲ್ಲಿ ಕೊರೋನ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಿರಿಯ ಅರೋಗ್ಯ ಮಹಿಳಾ ಸಹಾಯಕಿಯರುಗಳ ಜನಸೇವೆಯನ್ನು ಗುರುತಿಸಿ ಅವರಿಗೆ ಮಾಸ್ಕ್, ಗ್ಲೌಸ್ ಹಾಗೂ ಸೇನಿಟೈಸರ್ ಜೊತೆಗೆ ಗೌರವಧನವನ್ನು ಕಡಿರುದ್ಯಾವರ ಗ್ರಾಮ ಪಂಚಾಯತ್ ವತಿಯಿಂದ ನೀಡಲಾಯಿತು.ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜುಲೈ 2ರಂದು ಪಂಚಾಯತ್ ಅಧ್ಯಕ್ಷ ಅಶೋಕ್ ಕುಮಾರ್ ಅಧ್ಯಕ್ಷತೆಯಲ್ಲಿ ಸರಳ ಕಾರ್ಯಕ್ರಮ ಆಯೋಜನೆಗೊಂಡಿತ್ತು.ಆಶಾ ಕಾರ್ಯಕರ್ತೆಯರಾದ ಭಾರತಿ ಕೊಂದೋಡಿ, ಯಶೋಧಾ, ವಿನಯ ಆರ್. ಗೌಡ, ಶಾರದಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಾದ ಭಾರತಿ ಯು, ಸವಿತಾ […]
ಕಟ್ಟಡ ಕಾರ್ಮಿಕರಿಗೆ ಕೊರೋನಾ ಸುರಕ್ಷತಾ ಕಿಟ್ ವಿತರಣೆ

ಬೆಳ್ತಂಗಡಿ: ಸರಕಾರವು ಕಟ್ಟಡ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು ಪ್ರಸ್ತುತ ಕೊರೊನಾ ಮಹಾಮಾರಿ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸರಕಾರ ಸುರಕ್ಷತಾ ಕಿಟ್ ನೀಡುತ್ತಿದ್ದು ಇದನ್ನು ಸಮರ್ಪಕವಾಗಿ ಬಳಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಬೆಳ್ತಂಗಡಿ ಸಿವಿಲ್ ಜಡ್ಜ್ ಸೀನಿಯರ್ ಡಿವಿಜನ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾದೀಶ ನಾಗೇಶ್ ಮೂರ್ತಿ ಹೇಳಿದ್ದಾರೆ.ಅವರು ಜುಲೈ 2ರಂದು ಬೆಳ್ತಂಗಡಿಯ ಕೋರ್ಟ್ ರಸ್ತೆಯ ಇಎಂಎಸ್ ಭವನದಲ್ಲಿರುವ ಕಾರ್ಮಿಕ ಸಂಘದ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, […]
ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿದ ಬೆಳ್ತಂಗಡಿ ರೋಟರಿ ಕ್ಲಬ್: ಪ್ರಕಾಶ ಕಾರಂತ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಕೊರೊನ ಸಂಕಷ್ಟದ ಸಂದರ್ಭದಲ್ಲೂ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿ, ಉತ್ತಮ ಜನೋಪಯೋಗಿ ಕಾರ್ಯಕ್ರಮಗಳಿಂದ ಉನ್ನತ ಮಟ್ಟದ ವಿಶೇಷ ಸಾಧನೆ ಮಾಡಿ ರಾಷ್ಟ್ರದಲ್ಲೇ ಮೊದಲ ಸ್ಥಾನ ಪಡೆದು, ರೋಟರಿ ಜಿಲ್ಲೆಗೇ ಮಾದರಿಯಾಗಿದೆ ಎಂದು ರೋಟರಿ ಜಿಲ್ಲೆ 3181 ರ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ ಕಾರಂತ ಹೇಳಿದರು ಅವರು ಜುಲೈ 1ರಂದು ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ನಡೆದ ರೋಟರಿ ಕ್ಲಬ್ನ 51ನೇ ವರ್ಷದ ಪದಗ್ರಹಣ ಸಮಾರಂಭದಲ್ಲಿ 2021-22ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ಗೈದು ಶುಭಾಶಂಸನೆಯ ಮಾತಗಳನ್ನಾಡುತ್ತಿದ್ದರು. ಕ್ಲಬ್ಸು ವರ್ಣವರ್ಷದಲ್ಲಿ 1000ಕ್ಕೂ ಹೆಚ್ಚು […]
ವೈದ್ಯರ ದಿನದ ಪ್ರಯುಕ್ತ ಮಾನವ ಸ್ಪಂದನ ತಂಡದಿಂದ ಸರಕಾರಿ ವೈದ್ಯರಿಗೆ ಗೌರವಾರ್ಪಣೆ

ಬೆಳ್ತಂಗಡಿ: ವೈದ್ಯರ ದಿನಾಚರಣೆಯ ಜುಲೈ 1ರಂದು ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರದ ಕರ್ತವ್ಯನಿರತ ವೈದ್ಯರುಗಳಿಗೆ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಮಾನವ ಸ್ಪಂದನ ಕೋವಿಡ್ ಸೋಲ್ಜರ್ಸ್ ತಂಡದ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮವು ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ನಡೆಯಿತು.ಮಾನವ ಸ್ಪಂದನ ತಂಡದ ಚೇರ್ಮೆನ್ ಪಿ. ಸಿ. ಸೆಬಾಸ್ಟಿಯನ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದ ಕೋವಿಡ್ ಸೋಲ್ಜರ್ಸ್ ತಂಡದ ಕ್ಯಾಪ್ಟನ್ ಅಶ್ರಫ್ ಆಲಿಕುಂಞಿ ಮಾತನಾಡಿ, ವೈದ್ಯರುಗಳು ಕೋವಿಡ್ ನಿಯಂತ್ರಣದಲ್ಲಿ ಮಾಡುತ್ತಿರುವ ಸೇವೆಗೆ ಪೂರಕವಾಗಿ ನಮ್ಮ ಸಂಘ ಕೆಲಸಮಾಡುತ್ತಿದೆ. […]
ಎಂಡೊ ಸಂತ್ರಸ್ತರ ಬೇಡಿಕೆ ಈಡೇರಿಸಲು ಸಚಿವರಿಗೆ ಮನವಿ

ಬೆಳ್ತಂಗಡಿ: ಎಂಡೋ ಸಂತ್ರಸ್ತರಿಗೆ ಸೂಕ್ತ ಮಾಸಾಶನ ಮತ್ತು ಸರಕಾರದ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಹಾಗೂ ಕೊಕ್ಕಡದ ನೂತನ ಸಮುದಾಯ ಆಸ್ಪತ್ರೆಯಲ್ಲಿ ಎಂಡೋ ಪೀಡಿತರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತಾಗಬೇಕು ಎಂಬ ಬಗ್ಗೆ ಎಂಡೋ ಸಂತ್ರಸ್ತರ ಪರವಾಗಿ ಹೋರಾಟಗಾರ ಶ್ರೀಧರ ಗೌಡ ಕೆಂಗುಡೇಲು ಅವರು ಆರೋಗ್ಯ ಸಚಿವ ಡಾl ಸುಧಾಕರ್ ಅವರಿಗೆ ಜೂನ್ 30ರಂದು ಮನವಿ ಸಲ್ಲಿಸಿದರು.ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಂಡೋಸಂತ್ರಸ್ತರೆಂದು ಸುಮಾರು 9ಸಾವಿರ ಜನರನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, 2011ರಲ್ಲಿ ನ್ಯಾಯಾಲಯದ ಆದೇಶದ […]
ಪುಂಜಾಲಕಟ್ಟೆ ಸರಕಾರಿ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ

ಬೆಳ್ತಂಗಡಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದಲ್ಲಿ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಸಿಕಾ ಅಭಿಯಾನ ಜರುಗಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ, ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಆಶಿಸಿದರು. ತಾಲೂಕು ವೈದ್ಯಾಧಿಕಾರಿ ಡಾl ಕಲಾಮಧು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾl ವಿದ್ಯಾವತಿ, ಇಲಾಖೆಯ […]
ಸಿದ್ಧ ರವೀಂದ್ರ ಪೈ ಅವರಿಗೆ ಜವುಳಿ ವರ್ತಕರ ಸಂಘದಿಂದ ಶ್ರದ್ಧಾಂಜಲಿ

ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ವಸ್ತ್ರ ಮಳಿಗೆ ” ಸಿದ್ಧ ” ಇದರ ಮಾಲಕ ರವೀಂದ್ರ ಪೈ ಅವರು ಅನಿರೀಕ್ಷಿತ ನಿಧನರಾಗಿದ್ದು ಆ ಪ್ರಯುಕ್ತ ಅವರ ಗೌರವಾರ್ಥ ಮೂಡಬಿದರೆಯ ಸಮಸ್ತ ಜವುಳಿ ವರ್ತಕ ಬಾಂಧವರು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಎರಡು ಗಂಟೆಗಳವರೆಗೆ ತಮ್ಮ ಜವುಳಿ ವ್ಯಾಪಾರ ವಹಿವಾಟನ್ನು ಬಂದ್ ಮಾಡಿ ಶೋಕಾಚರಣೆ ಆಚರಿಸಿದರು.ಅಂದು ಮಧ್ಯಾಹ್ನ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಜವುಳಿ ವರ್ತಕರ ಸಂಘದ ವತಿಯಿಂದ ಶೃದ್ಧಾಂಜಲಿ ಸಭೆಯನ್ನು ನಡೆಸಲಾಯಿತು. ಮೂಡುಬಿದಿರೆಯ ಬಹುತೇಕ ಎಲ್ಲಾ ಜವುಳಿ ವ್ಯವಹಾರಸ್ಥರು ಈ ಸಭೆಯಲ್ಲಿ […]
ಕೂಕ್ರಬೆಟ್ಟು ಶಾಲೆಗೆ ಸುಸಜ್ಜಿತ ಕಟ್ಟಡ: ಜಯಂತ ಕೋಟ್ಯಾನ್

ಬೆಳ್ತಂಗಡಿ: ಮರೋಡಿ ಗ್ರಾಮದ ಕೂಕ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಿಸಲು ಶಾಸಕ ಹರೀಶ್ ಪೂಂಜ ರೂಪಾಯಿ 45 ಲಕ್ಷ ಮಂಜೂರು ಮಾಡಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್ ಹೇಳಿದರು.ಶಾಲಾ ಆರಂಭೋತ್ಸವ, ಆನ್ಲೈನ್ ತರಗತಿ ಹಾಗೂ ನೂತನ ಕಟ್ಟಡ ನಿರ್ಮಾಣದ ಕುರಿತು ಜೂನ್ 28ರಂದು ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.ಎರಡು ವರ್ಷಗಳ ಹಿಂದೆ 16 ಮಕ್ಕಳಿದ್ದ ಈ […]