ಗ್ರಾಮೀಣ ಜನರ ಆರೋಗ್ಯದ ಬಗ್ಗೆ ಕಾಳಜಿ- ‘ವೈದ್ಯರ ನಡಿಗೆ ಹಳ್ಳಿಯ ಕಡೆಗೆ’ ಅಭಿಯಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಜನರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರಿಸಿ, ಜಿಲ್ಲಾಡಳಿತದ ಸೂಚನೆಯಂತೆ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ವೈದ್ಯರ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಅಭಿಯಾನವನ್ನು ನಡೆಸಲಾಗುತ್ತದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಜೂನ್ 1ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆದ ಗ್ರಾಮ ಪಂಚಾಯತ್ ವಾರ್ ಕೋವಿಡ್-19 ನಿರ್ವಹಣಾ ಮತ್ತು ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆಯನ್ನುದ್ಧೇಶಿಸಿ ಮಾತನಾಡುತ್ತಿದ್ದರು.ಗ್ರಾಮೀಣ ಪ್ರದೇಶಗಳಲ್ಲಿ ವಯಸ್ಸಾದವರು ಬೇರೆಬೇರೆ ಆರೋಗ್ಯ […]

ಕವಿ ವಿಭೂಷಣ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆ

ಬೆಳ್ತಂಗಡಿ: ಬೆಳಗಾವಿಯ ಕಸ್ತೂರಿ ಕನ್ನಡ ಸಿರಿಗನ್ನಡ ವೇದಿಕೆಯು ಬೆಳ್ತಂಗಡಿ ತಾಲೂಕು ಮುಂಡಾಜೆಯ ವಿದ್ಯಾಶ್ರೀ ಅಡೂರ್‌ರವರನ್ನು ರಾಜ್ಯ ಮಟ್ಟದ ‘ಕವಿ ವಿಭೂಷಣ’ ಪ್ರಶಸ್ತಿ ನೀಡಿ ಪುರಸ್ಕರಿಸಲು ಆಯ್ಕೆ ಮಾಡಿದೆ.ವಿದ್ಯಾಶ್ರೀ ಅಡೂರ್‌ರವರು ಕನ್ನಡ ಸಾಹಿತ್ಯ, ಭಾಷೆ, ನೆಲ-ಜಲ, ಸಂಸ್ಕೃತಿ ಸಹಿತ ಸಿರಿಗನ್ನಡ ಕ್ಷೇತ್ರಕ್ಕೆ ನೀಡಿದ ಗಣನೀಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿದ ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ವಿದ್ಯಾಶ್ರೀ ಅಡೂರ್‌ರವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜೂನ್ 5ರಂದು ಅಂತರ್ಜಾಲದ ಮೂಲಕ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ವಿದ್ಯಾಶ್ರೀ […]

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ದಾಳಿ

ಬೆಳ್ತಂಗಡಿ: ಖಚಿತ ಮಾಹಿತಿಯ ಮೇರೆಗೆ ಜೂನ್ 1ರ ಬೆಳಿಗ್ಗೆ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಯಲ್ಲಿನ ಅಕ್ರಮ ಮದ್ಯ ಮಾರಾಟದ ಅಡ್ಡೆಗೆ ತನ್ನ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ಪುಂಜಾಲಕಟ್ಟೆ ಪೊಲೀಸ್ ಠಾಣಾ ಸಬ್‌ಇನ್ಸ್‌ಪೆಕ್ಟರ್ ಜೆ. ಸೌಮ್ಯಾ; ಮಾರಾಟದ ಉದ್ಧೇಶಕ್ಕಾಗಿ ಅಕ್ರಮವಾಗಿ ದಾಸ್ತಾನಿರಿಸಿದ ರೂಪಾಯಿ 42,356/- ಅಂದಾಜು ಮೌಲ್ಯದ 58.68ಲೀಟರ್ ಮದ್ಯ ಹಾಗೂ ರೂಪಾಯಿ 14,125/- ಅಂದಾಜು ಮೌಲ್ಯದ 82.53ಲೀಟರ್ ಬಿಯರ್‌ನ್ನು ಸ್ವಾದೀನ ಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]

ಜಲಜೀವನ ಮಿಷನ್ ಅಡಿಯಲ್ಲಿ ನೂತನ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಜಲ ಜೀವನ್ ಮಿಷನ್ ಅಡಿಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಒಟ್ಟು ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಟ್ಯಾಂಕ್‌ಗಳು ಹಾಗೂ ನೀರು ಸರಬರಾಜಿಗೆ ಸಂಬಂಧಪಟ್ಟ ಪೈಪ್‌ಲೈನ್ ಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಜೂನ್ 1ರಂದು ಲಾಯಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂಟಿನಿ ಎಂಬಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ ಅಂದಾಜು 30ಲಕ್ಷ ರೂಪಾಯಿ ವೆಚ್ಚದ ನೂತನ ನೀರಿನ ಟ್ಯಾಂಕ್ […]

ಜೀವ ಉಳಿಸಿ – ಜೀವನ ರಕ್ಷಿಸಿ ಎಂಬ ಘೋಷಣೆಯಡಿ ಪ್ರತಿಭಟನೆ

ಬೆಳ್ತಂಗಡಿ: ಕೋವಿಡ್ ಎರಡನೇ ಅಲೆಯಿಂದ ಜೀವ ಉಳಿಸಿ-ಜೀವನ ರಕ್ಷಿಸಿ; ಮೂರನೇ ಅಲೆ ಎದುರಿಸಲು ಸರ್ವಸನ್ನದ್ಧರಾಗಿ ಎಂಬ ಘೋಷಣೆಗಳಡಿ 7 ಎಡಪಕ್ಷಗಳ ಒಕ್ಕೂಟದ ಕರೆಯಂತೆ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿಪಿಐ(ಎಂ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ ಮತ್ತು ಚಿಕಿತ್ಸೆಗಾಗಿ;ರೈತರು, ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ; 200 ದಿನಗಳ ಉದ್ಯೋಗ ಖಾತ್ರಿಗಾಗಿ; ನಗರಗಳಿಗೂ ಉದ್ಯೋಗ ಖಾತರಿ ಯೋಜನೆಯ ವಿಸ್ತರಣೆಗಾಗಿ;ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ […]

ಅಭಯಚಂದ್ರ ಜೈನ್ ಅವರಿಂದ 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಔಷಧಿ ಕಿಟ್ ವಿತರಣೆ

ಮೂಡಬಿದಿರೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡಬಿದಿರೆಯ ಪುರಸಭಾ ವ್ಯಾಪ್ತಿಯ ಸುಮಾರು 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಹೋಮ್ ಐಸೊಲೇಷನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ಭಾಗವಹಿಸಿ ಕಿಟ್ ಗಳನ್ನು ವಿತರಿಸಿದರು.ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಯ ಕುಮಾರ್ ಶೆಟ್ಟಿ, ವಕ್ತಾರರಾದ ರಾಜೇಶ್ ಕಡಲಕೆರೆ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಸುರೇಶ್ […]

ಗುರುವಾಯನಕೆರೆ ಸೊಸೈಟಿಯ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 30ವರ್ಷಗಳ ಕಾಲ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ಸಂಘದ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕ ದುಡಿಮೆ ಸಲ್ಲಿಸಿ ಮೇ 31ರಂದು ವಯೋ ನಿವೃತ್ತರಾದ ಅನಂತ್ರಾಜ್ ಜೈನ್‌ರವರ ಬೀಳ್ಕೊಡುಗೆ ಸಮಾರಂಭವು ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿ, ಸರಳವಾಗಿ ಸಂಘದ ಸಭಾಭವನದಲ್ಲಿ ಮೇ 31ರಂದು ನಡೆಯಿತು.ಅತ್ಯಂತ ಹೃದಯಸ್ಪರ್ಶಿಯಾಗಿ ನಡೆದ ಈ ವಿದಾಯ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಜಿ. ಭಗೀರಥ ಮತ್ತು ಉಪಾಧ್ಯಕ್ಷೆ ಸುಜಿತಾ ವಿ. ಬಂಗೇರ ನಿವೃತ್ತಿ ಹೊಂದಿದ ಸಂಘದ ಮುಖ್ಯ […]

ರಕ್ತಚೆಲ್ಲುವ ಸಂಸ್ಕೃತಿಗಿಂತ ರಕ್ತದಾನಗೈಯುವ ಸಂಸ್ಕೃತಿ ರೂಡಿಯಾಗಲಿ- ಡಾl ರಾಜಾರಾಮ್

ಬೆಳ್ತಂಗಡಿ: ಬಿಸಿ ರಕ್ತದ ಯುವ ಜನತೆ ಯಾರದೋ ಮಾತಿಗೆ ಮರುಳಾಗಿ ರಕ್ತಚೆಲ್ಲುವ ಸಂಸ್ಕೃತಿಯ ಕಡೆ ಕಾಲಿಡದೆ ರಕ್ತದಾನಗೈಯುವ ಮೂಲಕ ದೇಶ ಸೇವೆಗೆ ಮುಂದಾಗಬೇಕು. ರಕ್ತದಾನ ಜೀವದಾನಕ್ಕೆ ಸಮಾನಾಗಿದ್ದು ಭ್ರಾತೃತ್ವವನ್ನು ಹತ್ತಿರಗೊಳಿಸುತ್ತದೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಡಾl ರಾಜಾರಾಮ್ ಕೆ. ಬಿ. ಹೇಳಿದರು. ಅವರು ಮೇ 28ರಂದು ಉಪ್ಪಿನಂಗಡಿಯ ಎಚ್. ಎಮ್. ಆಡಿಟೋರಿಯಂನಲ್ಲಿ ಸೌಹಾರ್ದ ಸಮಿತಿ (ರಿ) ಇಳಂತಿಲ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಮತ್ತು ಬ್ಲಡ್ ಡೋನರ್ಸ್ (ರಿ) […]

ಸಿಐಟಿಯು ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: ದೇಶದ ಕಾರ್ಮಿಕ ವರ್ಗದ ಕೇಂದ್ರವಾಗಿರುವ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)ನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮವು ಮೇ 30 ರಂದು ನಡೆಯಿತು.ಸಿಐಟಿಯು ಸಂಘಟನೆ ಸ್ಥಾಪನೆಯಾಗಿ ಮೇ 30ಕ್ಕೆ 51 ವರ್ಷಗಳಾಯಿತು. ಈ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಧ್ವಜಾರೋಹಣದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರ ಸಮಿತಿ ಕರೆ ನೀಡಿತು. ದೇಶದ ವಿವಿಧ ಕ್ಷೇತ್ರದ ಕಾರ್ಮಿಕ ಸಂಘಟನೆಗಳು ಸಿಐಟಿಯು ಜೊತೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.ಸಿಐಟಿಯುನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ […]

ಮಾಜಿ ಸಚಿವರ ಹುಟ್ಟುಹಬ್ಬವನ್ನು ಆಶ್ರಮಕ್ಕೆ ದಿನಸಿ ನೀಡಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಇವರ ಹುಟ್ಟುಹಬ್ಬದ ದಿನವನ್ನು ಅನಾಥಾಶ್ರಮಕ್ಕೆ ಅಕ್ಕಿ ಮತ್ತು ದಿನಸಿ ವಸ್ತುಗಳನ್ನು ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.ಮೇ 30 ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ದಿನವಾಗಿದ್ದು ಆ ಪ್ರಯುಕ್ತ ಇಂದು ಯುವ ನಾಯಕ, ಎಪಿಎಂಸಿ ಸದಸ್ಯರು ಆಗಿರುವ ಚಂದ್ರಹಾಸ ಸಾಧು ಸನಿಲ್ ಅವರು ತಮ್ಮ ವೈಯುಕ್ತಿಕ ನೆಲೆಯಲ್ಲಿ ಅಲಂಗಾರು ಮೌಂಟ್ ರೊಸಾರಿ ಆಶ್ರಮಕ್ಕೆ ಅಕ್ಕಿ ಹಾಗೂ ದಿನ ಉಪಯೋಗಿ ವಸ್ತುಗಳನ್ನು ನೀಡಿದರು , ಮೌಂಟ್ ರೊಸಾರಿ […]