ಜಲಜೀವನ ಮಿಷನ್ ಅಡಿಯಲ್ಲಿ ನೂತನ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಜಲ ಜೀವನ್ ಮಿಷನ್ ಅಡಿಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಒಟ್ಟು ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಟ್ಯಾಂಕ್ಗಳು ಹಾಗೂ ನೀರು ಸರಬರಾಜಿಗೆ ಸಂಬಂಧಪಟ್ಟ ಪೈಪ್ಲೈನ್ ಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಜೂನ್ 1ರಂದು ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಟಿನಿ ಎಂಬಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ ಅಂದಾಜು 30ಲಕ್ಷ ರೂಪಾಯಿ ವೆಚ್ಚದ ನೂತನ ನೀರಿನ ಟ್ಯಾಂಕ್ […]
ಜೀವ ಉಳಿಸಿ – ಜೀವನ ರಕ್ಷಿಸಿ ಎಂಬ ಘೋಷಣೆಯಡಿ ಪ್ರತಿಭಟನೆ

ಬೆಳ್ತಂಗಡಿ: ಕೋವಿಡ್ ಎರಡನೇ ಅಲೆಯಿಂದ ಜೀವ ಉಳಿಸಿ-ಜೀವನ ರಕ್ಷಿಸಿ; ಮೂರನೇ ಅಲೆ ಎದುರಿಸಲು ಸರ್ವಸನ್ನದ್ಧರಾಗಿ ಎಂಬ ಘೋಷಣೆಗಳಡಿ 7 ಎಡಪಕ್ಷಗಳ ಒಕ್ಕೂಟದ ಕರೆಯಂತೆ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿಪಿಐ(ಎಂ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ ಮತ್ತು ಚಿಕಿತ್ಸೆಗಾಗಿ;ರೈತರು, ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ; 200 ದಿನಗಳ ಉದ್ಯೋಗ ಖಾತ್ರಿಗಾಗಿ; ನಗರಗಳಿಗೂ ಉದ್ಯೋಗ ಖಾತರಿ ಯೋಜನೆಯ ವಿಸ್ತರಣೆಗಾಗಿ;ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ […]
ಅಭಯಚಂದ್ರ ಜೈನ್ ಅವರಿಂದ 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಔಷಧಿ ಕಿಟ್ ವಿತರಣೆ

ಮೂಡಬಿದಿರೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೂಡಬಿದಿರೆಯ ಪುರಸಭಾ ವ್ಯಾಪ್ತಿಯ ಸುಮಾರು 57 ಪೌರಕಾರ್ಮಿಕರಿಗೆ ಆಹಾರ ಕಿಟ್ ಮತ್ತು ಹೋಮ್ ಐಸೊಲೇಷನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ಭಾಗವಹಿಸಿ ಕಿಟ್ ಗಳನ್ನು ವಿತರಿಸಿದರು.ಈ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಲೇರಿಯನ್ ಸಿಕ್ವೇರಾ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಯ ಕುಮಾರ್ ಶೆಟ್ಟಿ, ವಕ್ತಾರರಾದ ರಾಜೇಶ್ ಕಡಲಕೆರೆ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಸುರೇಶ್ […]
ಗುರುವಾಯನಕೆರೆ ಸೊಸೈಟಿಯ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬೆಳ್ತಂಗಡಿ: ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 30ವರ್ಷಗಳ ಕಾಲ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ಸಂಘದ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕ ದುಡಿಮೆ ಸಲ್ಲಿಸಿ ಮೇ 31ರಂದು ವಯೋ ನಿವೃತ್ತರಾದ ಅನಂತ್ರಾಜ್ ಜೈನ್ರವರ ಬೀಳ್ಕೊಡುಗೆ ಸಮಾರಂಭವು ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿ, ಸರಳವಾಗಿ ಸಂಘದ ಸಭಾಭವನದಲ್ಲಿ ಮೇ 31ರಂದು ನಡೆಯಿತು.ಅತ್ಯಂತ ಹೃದಯಸ್ಪರ್ಶಿಯಾಗಿ ನಡೆದ ಈ ವಿದಾಯ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಜಿ. ಭಗೀರಥ ಮತ್ತು ಉಪಾಧ್ಯಕ್ಷೆ ಸುಜಿತಾ ವಿ. ಬಂಗೇರ ನಿವೃತ್ತಿ ಹೊಂದಿದ ಸಂಘದ ಮುಖ್ಯ […]
ರಕ್ತಚೆಲ್ಲುವ ಸಂಸ್ಕೃತಿಗಿಂತ ರಕ್ತದಾನಗೈಯುವ ಸಂಸ್ಕೃತಿ ರೂಡಿಯಾಗಲಿ- ಡಾl ರಾಜಾರಾಮ್

ಬೆಳ್ತಂಗಡಿ: ಬಿಸಿ ರಕ್ತದ ಯುವ ಜನತೆ ಯಾರದೋ ಮಾತಿಗೆ ಮರುಳಾಗಿ ರಕ್ತಚೆಲ್ಲುವ ಸಂಸ್ಕೃತಿಯ ಕಡೆ ಕಾಲಿಡದೆ ರಕ್ತದಾನಗೈಯುವ ಮೂಲಕ ದೇಶ ಸೇವೆಗೆ ಮುಂದಾಗಬೇಕು. ರಕ್ತದಾನ ಜೀವದಾನಕ್ಕೆ ಸಮಾನಾಗಿದ್ದು ಭ್ರಾತೃತ್ವವನ್ನು ಹತ್ತಿರಗೊಳಿಸುತ್ತದೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಡಾl ರಾಜಾರಾಮ್ ಕೆ. ಬಿ. ಹೇಳಿದರು. ಅವರು ಮೇ 28ರಂದು ಉಪ್ಪಿನಂಗಡಿಯ ಎಚ್. ಎಮ್. ಆಡಿಟೋರಿಯಂನಲ್ಲಿ ಸೌಹಾರ್ದ ಸಮಿತಿ (ರಿ) ಇಳಂತಿಲ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಮತ್ತು ಬ್ಲಡ್ ಡೋನರ್ಸ್ (ರಿ) […]
ಸಿಐಟಿಯು ಸಂಸ್ಥಾಪನಾ ದಿನಾಚರಣೆ

ಬೆಳ್ತಂಗಡಿ: ದೇಶದ ಕಾರ್ಮಿಕ ವರ್ಗದ ಕೇಂದ್ರವಾಗಿರುವ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು)ನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಧ್ವಜಾರೋಹಣದೊಂದಿಗೆ ಕಾರ್ಯಕ್ರಮವು ಮೇ 30 ರಂದು ನಡೆಯಿತು.ಸಿಐಟಿಯು ಸಂಘಟನೆ ಸ್ಥಾಪನೆಯಾಗಿ ಮೇ 30ಕ್ಕೆ 51 ವರ್ಷಗಳಾಯಿತು. ಈ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಧ್ವಜಾರೋಹಣದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರ ಸಮಿತಿ ಕರೆ ನೀಡಿತು. ದೇಶದ ವಿವಿಧ ಕ್ಷೇತ್ರದ ಕಾರ್ಮಿಕ ಸಂಘಟನೆಗಳು ಸಿಐಟಿಯು ಜೊತೆಯಲ್ಲಿ ಕಾರ್ಯನಿರ್ವಹಿಸುತ್ತಿದೆ.ಸಿಐಟಿಯುನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ […]
ಮಾಜಿ ಸಚಿವರ ಹುಟ್ಟುಹಬ್ಬವನ್ನು ಆಶ್ರಮಕ್ಕೆ ದಿನಸಿ ನೀಡಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಇವರ ಹುಟ್ಟುಹಬ್ಬದ ದಿನವನ್ನು ಅನಾಥಾಶ್ರಮಕ್ಕೆ ಅಕ್ಕಿ ಮತ್ತು ದಿನಸಿ ವಸ್ತುಗಳನ್ನು ನೀಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.ಮೇ 30 ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರ ಹುಟ್ಟುಹಬ್ಬದ ದಿನವಾಗಿದ್ದು ಆ ಪ್ರಯುಕ್ತ ಇಂದು ಯುವ ನಾಯಕ, ಎಪಿಎಂಸಿ ಸದಸ್ಯರು ಆಗಿರುವ ಚಂದ್ರಹಾಸ ಸಾಧು ಸನಿಲ್ ಅವರು ತಮ್ಮ ವೈಯುಕ್ತಿಕ ನೆಲೆಯಲ್ಲಿ ಅಲಂಗಾರು ಮೌಂಟ್ ರೊಸಾರಿ ಆಶ್ರಮಕ್ಕೆ ಅಕ್ಕಿ ಹಾಗೂ ದಿನ ಉಪಯೋಗಿ ವಸ್ತುಗಳನ್ನು ನೀಡಿದರು , ಮೌಂಟ್ ರೊಸಾರಿ […]
ಬಿಜೆಪಿ ಜಿಲ್ಲಾಧ್ಯಕ್ಷರಿಂದ ಆರ್ಥಿಕ ನೆರವು, ಆಹಾರ ಸಾಮಗ್ರಿ ವಿತರಣೆ

ಮೂಡುಬಿದಿರೆ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಎರಡನೇ ಅವಧಿಯ ಎರಡನೆ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಂಭ್ರಮ ಆಚರಣೆ ಆಚರಿಸುವ ಬದಲಾಗಿ ಕಾರ್ಯಕರ್ತರು ತಮ್ಮ ಬೂತ್ ಗಳಲ್ಲಿ ಸೇವಾಕಾರ್ಯ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಜೆ.ಪಿ.ನಡ್ಡಾಜಿಯವರ ಹಾಗು ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರ ಸೂಚನೆಯಂತೆ ಬಿಜೆಪಿ ಜಿಲ್ಲಾದ್ಯಕ್ಷರಾದ ಸುದರ್ಶನ ಎಂ ರವರು ತಮ್ಮ ಬೂತ್ ನಲ್ಲಿ ಕೊವಿಡ್ ಪೀಡಿತರಿಗೆ ಆರ್ಥಿಕ ನೆರವು, ಮಾರಿಗುಡಿ ಅರ್ಚಕರಿಗೆ ಆಹಾರ ಸಾಮಗ್ರಿ ವಿತರಣೆ, ಹಾಗು ಸಸಿ ನೆಡುವ […]
ಉಜಿರೆ: ಕೊರೋನಾ ಮುಕ್ತವಾದ ಕಂಟೊನ್ಮೆಂಟ್ ಝೋನ್-ಸಿಹಿ ಹಂಚಿ ಸಂಭ್ರಮ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ನ ಗಾಂಧಿನಗರ ಕಾಲನಿಯಲ್ಲಿ ಹತ್ತಕ್ಕೂ ಅಧಿಕ ಮಂದಿ ಕೊರೋನಾ ಪೀಡಿತರಾಗಿದ್ದು, ಗ್ರಾಮ ಪಂಚಾಯತ್ ವತಿಯಿಂದ ಸರಕಾರದ ಕೋವಿಡ್-19 ನಿಯಮಾವಳಿಯಂತೆ ಈ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲಾಗಿತ್ತು.ಇದೀಗ ಈ ಪ್ರದೇಶದ ಎಲ್ಲ ಸೋಂಕಿತರೂ ಕೊರೋನಾದಿಂದ ಗುಣಮುಖರಾಗಿದ್ದು; ಗಾಂಧಿನಗರ ಕಾಲನಿಗೆ ಭೇಟಿ ನೀಡಿದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಕೊರೋನಾದಿಂದ ಗುಣಮುಖರಾದವರಿಗೆ ಸಿಹಿಹಂಚಿ ಕಾಲನಿಯನ್ನು ಕಂಟೆನ್ಮೆಂಟ್ […]
ಪಟ್ರಮೆಯಲ್ಲಿ ವಿದ್ಯುದಾಘಾತಕ್ಕೆ ತಾಯಿ-ಮಗು ಬಲಿ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಬೋಳೋಡಿ ಸಮೀಪ ಕೊಡಂದೂರು ಎಂಬಲ್ಲಿ ತೋಟದ ಪಂಪ್ಶೆಡ್ ಒಳಗೆ ಸಂಭವಿಸಿದ ವಿದ್ಯುದಾಘಾತಕ್ಕೆ ಬೋಳೋಡಿ ನಿವಾಸಿ ಹರೀಶ್ ಗೌಡರ ಪತ್ನಿ ಗೀತಾ (30) ಹಾಗೂ ಕಂದಮ್ಮ ಭವಿಷ್ (4) ಸಾವನ್ನಪ್ಪಿದ ಘಟನೆ ಮೇ 30ರ ಬೆಳಿಗ್ಗೆ ಸಂಭವಿಸಿದೆ.ತಮ್ಮ ತೋಟದ ಮನೆಯಲ್ಲಿದ್ದ ಹಸುಗಳಿಗೆ ನೀರುಣಿಸಲು ಪಂಪ್ನ ಸ್ವಿಚ್ ಹಾಕಲು ಗೀತಾ ತನ್ನ ಮಗುವಿನೊಂದಿಗೆ ಪಂಪ್ಶೆಡ್ಗೆ ತೆರಳಿ ಸ್ವಿಚ್ ಆನ್ ಮಾಡುವ ಸಂದರ್ಭ ಈ ದುರ್ಘಟನೆ ಸಂಭವಿಸಿದೆ ಎಂದು ಸಂದೇಹಿಸಲಾಗಿದೆ. ಪಂಪ್ನ ವಿದ್ಯುತ್ ಸಂಪರ್ಕದ ಮೂರು ಫೇಸ್ನ […]