ನಾಲ್ಕೂರು ಗ್ರಾಮದಲ್ಲಿ ಕೊರೋನಾ ಅಟ್ಟಹಾಸ.

ಬೆಳ್ತಂಗಡಿ: ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಕೋವಿಡ್-19 ಸೋಂಕು ಅಟ್ಟಹಾಸದಿಂದ ಕೇಕೆ ಹಾಕುತ್ತಿದ್ದು; ಉಲ್ಬಣಾವಸ್ಥೆಗೆ ತಲುಪಿದ ಕೊರೋನಾ ಸೋಂಕನ್ನು ಹತೋಟಿಗೆ ತರಲು ಗ್ರಾಮಸ್ಥರು ಸಹಕರಿಸಬೇಕು ಎಂದು ಬಳಂಜ ಗ್ರಾಮ ಪಂಚಾಯತ್ ಆಡಳಿತ ವಿನಂತಿಸಿದೆ.ನಾಲ್ಕೂರು ಗ್ರಾಮದ ವ್ಯಾಪ್ತಿಯಲ್ಲಿ ಮುಂದಿನ ಆದೇಶದವರೆಗೆ ಯಾವುದೇ ರೀತಿಯ ಕಾರ್ಯಕ್ರಮವನ್ನು ನಡೆಸುವಂತಿಲ್ಲ. ಸದ್ರಿ ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಅನ್ಯ ಗ್ರಾಮಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಮತ್ತು ಕಾರ್ಯಕ್ರಮವನ್ನು ನಡೆಸುವಂತಿಲ್ಲ. ಪ್ರತಿಯೊಬ್ಬರು ತಮ್ಮ ತಮ್ಮ ಮನೆಯಲ್ಲಿದ್ದು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಈಗಾಗಲೇ ಕ್ವಾರೈಂಟೆನ್ ನಲ್ಲಿ […]

ಕೊರೋನಾ ಸಂತ್ರಸ್ತರ ನೆರವಿಗೆ ಆರ್‌ಎಸ್‌ಎಸ್

ಬೆಳ್ತಂಗಡಿ: ಕೋವಿಡ್-19 ಸಾಂಕ್ರಾಮಿಕ ಮಹಾಮಾರಿ  ಸಮಾಜದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಇಂತಹ ದುಃಸ್ಥಿತಿಯ ಸಮಯದಲ್ಲಿ ಅನೇಕ ಸಾಮಾಜಿಕ ಸಂಘಟನೆಗಳು ಸಮಾಜಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ,  ಸಹಕಾರ ನೀಡಲು ಮುಂದೆ ಬಂದಿವೆ. ಅದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಕೂಡ ಒಂದು. ಗಂಭೀರ ಸ್ವರೂಪದ ಎರಡನೇ ಅಲೆಯ ಮಧ್ಯೆ ಸಮಾಜಕ್ಕೆ ಶಕ್ತಿ-ವಿಶ್ವಾಸ ತುಂಬುವಂತದ್ದು ಹಾಗೂ ಸಹಾಯ-ಸಹಕಾರ ಮಾಡುವ ದೃಷ್ಟಿಯಿಂದ ಏಳೆಂಟು ವಿಭಾಗಗಳಾಗಿ ವಿಂಗಡಿಸಿ ತಾಲೂಕಿನಾದ್ಯಾಂತ ಸೇವಾ ಭಾರತಿ ಬೆಳ್ತಂಗಡಿ ತಾಲೂಕು  ಮೂಲಕ ಸೇವಾ ಕಾರ್ಯಗಳನ್ನು  ಪ್ರಾರಂಭಿಸಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ […]

ಧರ್ಮಸ್ಥಳ ಸೊಸೈಟಿ ಸಿಇಒ ಅಸಹಜ ಸಾವಿನ ಪ್ರಕರಣ;ತನಿಖೆಗೆ ಸಂಪೂರ್ಣ ಸಹಕಾರ-ಅಧ್ಯಕ್ಷ ಗಾಂಭೀರ್

ಬೆಳ್ತಂಗಡಿ: ಮೇ 3ರಂದು ಸಂಘದ ಸಭಾಂಗಣದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್‌ರ ಸಾವಿಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ್, ಮೃತ ರವೀಂದ್ರನ್‌ರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವುದರ ಜೊತೆಗೆ ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಸರ್ವಶಕ್ತ ಅವರ ಕುಟುಂಬಿಕರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.ಇದೊಂದು ನಂಬಲಾಗದ ದುರ್ದೈವ ಸಂಗತಿ ಎಂದಿರುವ ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ್, ಮೃತ ರವೀಂದ್ರನ್‌ರ ಕುಟುಂಬಕ್ಕೆ ಸಂಘದಿಂದ ಸಾಧ್ಯವಿರುವ […]

ಧರ್ಮಸ್ಥಳ ಸೊಸೈಟಿ ಸಿಇಒ ಅಸಹಜ ಸಾವು?ಸಮಗ್ರ ತನಿಖೆಗೆ ಬಂಗೇರ ಒತ್ತಾಯ

ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಮೇ 4ರಂದು ಸಂಘದ ಸಭಾಂಗಣದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದು; ಇವರ ಈ ಅಸಹಜ ಸಾವಿಗೆ ಸಂಘದ ಆಡಳಿತ ಮಂಡಳಿಯ ಇಬ್ಬರು ಸದಸ್ಯರು ನೀಡಿದ ಮಾನಸಿಕ‌ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ, ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.ಅವರು ಮೇ 5ರಂದು ಬೆಳ್ತಂಗಡಿಯ ಶ್ರಿ ಗುರುನಾರಾಯಣ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ […]

ಕೊರೋನಾ ನಡುವೆ ಹೆಲ್ಮೆಟ್ ಕೇಸ್

ಮೂಡುಬಿದಿರೆ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಜನತಾ ಲಾಕ್‌ಡೌನ್ ಘೋಷಿಸಿರುವ ಮಧ್ಯೆಯೂ, ಅತೀ ಅವಶ್ಯಕ ವಸ್ತುಗಳ ಖರೀದಿಗೆ ಜನರಿಗೆ ಮಧ್ಯಾಹ್ನದವರೆಗೆ ಅವಕಾಶ ಕಲ್ಪಿಸಿರುವ ಕಾರಣ ಮೂಡುಬಿದಿರೆಯಲ್ಲಿ ವಾಹನ ಸಂಚಾರ ಎಗ್ಗಿಲ್ಲದೆ ನಡೆಯುತ್ತಿದೆ.ದ್ವಿಚಕ್ರ, ತ್ರಿಚಕ್ರ ಮತ್ತು ಚತುಷ್ಚಕ್ರ ವಾಹನಗಳು ಭಾರೀ ಸಂಖ್ಯೆಯಲ್ಲಿ ಓಡಾಡುತ್ತಿದ್ದು, ಕೆಲವು ದ್ವಿಚಕ್ರ ವಾಹನಗಳ ಸವಾರರು ಹೆಲ್ಮೆಟ್ ಧರಿಸದೆ ಓಡಾಡಿದ ಪರಿಣಾಮವಾಗಿ ದಂಡ ತೆರಬೇಕಾದ ಸ್ಥಿತಿಯನ್ನು ಮೈಮೇಲೆಳೆದುಕೊಂಡಿದ್ದಾರೆ. ಮೇ 4ರಂದು ಮುಂಜಾನೆಯೇ ಹೆದ್ದಾರಿ ಗಸ್ತುದಳದ ಪೊಲೀಸರು ಹೆಲ್ಮೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು […]

ಮೂಡುಬಿದಿರೆ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಆಳ್ವಾಸ್‌ನಿಂದ ಉಚಿತ ಚಿಕಿತ್ಸೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ। ಎಂ. ಮೋಹನ ಆಳ್ವರ ಹೃದಯವಂತಿಕೆಯಿಂದ ಇಲ್ಲಿನ ನೂತನ ನಿರ್ಮಿತ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನವು ಸಧ್ಯ ಆರೋಗ್ಯ ಕೇಂದ್ರವಾಗಿ ಪರಿವರ್ತನೆಗೊಂಡಿದ್ದು, ಕೊರೋನಾ ಸಂಕಷ್ಟ ಕಾಲದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಈ ಉಚಿತ ಆರೋಗ್ಯ ಸೇವೆ ಇನ್ನಷ್ಟು ದಿನ ಮುಂದುವರಿಯುವ ಸಾಧ್ಯತೆಯಿದೆ.ಆಯುರ್ವೇದಿಕ್ ವೈದ್ಯರೂ ಆಗಿರುವ ಡಾ। ಎಂ. ಮೋಹನ ಆಳ್ವ ಅವರು ಸ್ವತಹ ಇಲ್ಲಿನ ಮೇಲುಸ್ತುವಾರಿಯನ್ನು ವಹಿಸಿಕೊಂಡು ಇಲ್ಲಿನ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿ ನಡೆಯುವಂತೆ ಶ್ರಮಿಸುತ್ತಿರುವುದು ಸರ್ವರ […]

ಮೆಸ್ಕಾಂ ನಿರ್ಲಕ್ಷ್ಯದಿಂದ ಲಕ್ಷಾಂತರ ರೂಪಾಯಿ ನಷ್ಟ

ಮೂಡುಬಿದಿರೆ: ಮೆಸ್ಕಾಂ ಅಧಿಕಾರಿಗಳನಿರ್ಲಕ್ಷ್ಯದಿಂದಾಗಿ ಮೆಸ್ಕಾಂ ಇಲಾಖೆಗೇ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.ಮೇ 2ರಂದು ಮಧ್ಯರಾತ್ರಿ ಬೀಸಿದ ಸುಂಟರಗಾಳಿಗೆ ಮೂಡುಬಿದಿರೆ ಮಹಾವೀರ ಕಾಲೇಜು ಸತ್ಯನಾರಾಯಣ ಕಟ್ಟೆಯ ಮುಂಭಾಗದಲ್ಲಿ ಮುಖ್ಯರಸ್ತೆಯಲ್ಲಿದ್ದ ಭಾರೀ ಮರವೊಂದು ವಿದ್ಯುತ್ ತಂತಿಯ ಮೇಲೆ ಉರುಳಿ ಬಿದ್ದು ಏಳು ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಕಾರಣ ಈ ನಷ್ಟ ಸಂಭವಿಸಿದೆ.ಸುಮಾರು ಎರಡು ತಿಂಗಳ ಹಿಂದೆ ಇಲ್ಲೇ ಸಮೀಪದ ಕೀರ್ತಿನಗರ ಜಂಕ್ಷನ್ ಬಳಿ ವಿದ್ಯುತ್ ತಂತಿ ಸ್ಪರ್ಷಿಸುತ್ತಿದ್ದ ಮರವನ್ನು ಕಡಿಯಲು ಕ್ರೇನ್ ತರಿಸಲಾಗಿತ್ತು. ಈ ಸಂದರ್ಭ ಮೆಸ್ಕಾಂ ಅಧಿಕಾರಿಗಳನ್ನು […]

ಧರ್ಮಸ್ಥಳದ ಬೊಳಿಯಾರು ತಾಲೂಕಿನ ಪ್ರಥಮ ಕಂಟೈನ್‌ಮೆಂಟ್ ಝೋನ್

ಬೆಳ್ತಂಗಡಿ: ತಾಲೂಕು ಆಡಳಿತದ ಸೂಚನೆಯಂತೆ 30ಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದ ಧರ್ಮಸ್ಥಳ ಗ್ರಾಮದ ಬೊಳಿಯಾರು ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಬೊಳಿಯಾರು ಪ್ರದೇಶದವರು ಯಾರು ಕೂಡ ಹೊರಗೆ ಹೋಗುವಂತಿಲ್ಲ. ಸದ್ರಿ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಸದ್ರಿ ಪ್ರದೇಶಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿದೆ. ದಿನದ ಅಗತ್ಯ ವಸ್ತುಗಳಿಗೆ ಗ್ರಾಮ ಪಂಚಾಯತಿನಿಂದ ಕ್ರಮವಹಿಸಲಾಗುವುದು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರ್ಷಿತ್ ಜೈನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಸಿಬ್ಬಂದಿಗಳು, […]

ಕಲ್ಲು ಗಣಿಗಾರಿಕೆಗೆ ವಿರೋಧ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊರಂಬಾಡ್ ಪ್ರದೇಶದಲ್ಲಿ ಸ್ಥಳೀಯ ವ್ಯಕ್ತಿಯೊರ್ವರು ಕಲ್ಲು ಗಣಿಗಾರಿಕೆಗೆ ಸಿದ್ದತೆಯನ್ನು ನಡೆಸುತ್ತಿದ್ದು, ಈ ಪರಿಸರದಲ್ಲಿ ಹಲವಾರು ಮನೆಗಳು, ತೋಟಗಳು ಇದ್ದು ಮುಂದೆ ಸಾಕಷ್ಟು ಅನಾಹುತವಾಗುವ ಸಂಭವವಿದೆ. ಆದ್ದರಿಂದ ಈ ಕಲ್ಲು ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಪರವಾನಿಗೆಯನ್ನು ನೀಡಬಾರದು ಎಂದು ಇಂದು ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತ್‌ಗೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಲೋಕಯ್ಯ ಪೂಜಾರಿ, ಉಪಾಧ್ಯಕ್ಷೆ ಶ್ವೇತಾ ಪರಮೇಶ್ವರ, ಸದಸ್ಯರಾದ ಜಗದೀಶ್ ಹೆಗ್ಡೆ , […]

ತೆಂಗಿನ ಮರ ಬಿದ್ದು ಮನೆಗೆ ಹಾನಿ

ಬೆಳ್ತಂಗಡಿ: ಮೇ 1ರಂದು ಸುರಿದ ಭಾರೀ ಗಾಳಿಮಳೆಗೆ ತೆಂಗಿನ ಮರವೊಂದು ಸುಲ್ಕೇರಿಮೊಗ್ರು ಗ್ರಾಮದ ಕಂಬ್ಳದಡ್ಡ ನಾರಾಯಣ ಮಡಿವಾಳರ ಮನೆಗೆ ಬಿದ್ದ ಪರಿಣಾಮ ಮನೆಯ ಪಾರ್ಶವೊಂದು ಕುಸಿದುಬಿದ್ದಿದೆ. ನಷ್ಟದ ಅಂದಾಜು ಇನ್ನಷ್ಟೇ ತಿಳಿಯಬೇಕಾಗಿದೆ.