ಕೋವಿಡ್ ಕೇರ್ ಸೆಂಟರ್‌ನ ಸಿದ್ಧತೆ ಪರಿಶೀಲನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸುಪರ್ದಿಯಲ್ಲಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ‌ ಮತ್ತು ಸಂಶೋಧನಾ ಕೇಂದ್ರದಲ್ಲಿ ಆರಂಭಿಸಲಾಗುವ ವಿಶೇಷ ಕೋವಿಡ್ ಕೇರ್ ಸೆಂಟರ್‌ನ ಸಿದ್ಧತೆಯನ್ನು ಎಪ್ರಿಲ್ 29ರಂದು ಪರಿಶೀಲಿಸಿದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ, ವ್ಯವಸ್ಥೆಯ ದೃಷ್ಟಿಯಿಂದ ಸೂಕ್ತ ಸಲಹೆ-ಸೂಚನೆ ನೀಡಿದರು.ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಸಿದ್ಧವಾಗುತ್ತಿರುವ ಈ ವಿಶೇಷ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂಪೂರ್ಣ […]

ಗ್ರಾಹಕರ ಪ್ರೀತಿಗೆ ಪಾತ್ರವಾದ ಕಥೋಲಿಕ್ ಸೊಸೈಟಿ;ಅಳದಂಗಡಿಯ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿ ಶಾಸಕ ಪೂಂಜ

ಬೆಳ್ತಂಗಡಿ: ತನ್ನ ಆರ್ಥಿಕ ಚಟುವಟಿಕೆಗಳ ಮೂಲಕ ಗ್ರಾಹಕರಿಗೆ ಸಕಾಲದಲ್ಲಿ ಸ್ಪಂದಿಸಿ, ಗ್ರಾಹಕರಲ್ಲಿ ವಿಶ್ವಾಸ ಮೂಡಿಸಿರುವ ಬೆಳ್ತಂಗಡಿಯ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಗ್ರಾಹಕರ ಪ್ರೀತಿಗೆ ಪಾತ್ರವಾಗಿ ಎತ್ತರಕ್ಕೆ ಬೆಳೆಯುತ್ತಿದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು.ಅವರು ಎಪ್ರಿಲ್ 26ರಂದು ಅಳದಂಗಡಿಯ ಎಜಿಎಸ್ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡ ಬೆಳ್ತಂಗಡಿಯ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಅಳದಂಗಡಿ ಶಾಖೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಅಳದಂಗಡಿ ಸಂತ ಪೀಟರ್ ಕ್ಲೆವರ್ ಚರ್ಚ್‌ನ ಧರ್ಮಗುರು ವಂದನೀಯ ನವೀನ್ ಪಿಂಟೊ ಆಶೀರ್ವಚನ ನೀಡುತ್ತಾ, ದುಡಿಮೆಗೆ ಪ್ರತಿಫಲ […]

ಖಾಸಗಿ ಆಸ್ಪತ್ರೆಗಳನ್ನು ಸರಕಾರದ ಸುಪರ್ದಿಗೆ ಪಡೆಯಲು ಆಗ್ರಹ

ಬೆಳ್ತಂಗಡಿ: ಕೋವಿಡ್ ಎರಡನೇ ಅಲೆಯನ್ನು ಸಮಾರೋಪಾದಿಯಲ್ಲಿ ನಿಯಂತ್ರಣ ಮಾಡಲು ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಬೆಳ್ತಂಗಡಿ ತಾಲೂಕು ಸಮಿತಿ ಕೇಂದ್ರ, ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದೆ.ಎಪ್ರಿಲ್ 28ರಂದು ಬೆಳ್ತಂಗಡಿ ತಹಶೀಲ್ದಾರರ ಮೂಲಕ ಪ್ರಧಾನಿ ಹಾಗೂ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಕರ್ನಾಟಕ ಪ್ರಾಂತ ರೈತ ಸಂಘದ ನಿಯೋಗವು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಳೆದ ಒಂದು ವರ್ಷಗಳಿಂದ ಕೋವಿಡ್-19 ಬಗ್ಗೆ ನಿರ್ಲಕ್ಷ್ಯ ವಹಿಸಿದ ಕಾರಣದಿಂದಾಗಿ […]

ಶಾಲೆಗಳು ಕ್ವಾರಂಟೈನ್ ಸೆಂಟರ್-ಪೂಂಜ

ಶಾಲಾಗಳು ಕ್ವಾರಂಟೈನ್ ಸೆಂಟರ್-ಪೂಂಜಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕೊರೋನಾ ಅಲೆ ಹರಡುವಿಕೆ ತಡೆಯಲು ಸಮರೋಪಾದಿಯಲ್ಲಿ ಸರಕಾರಿ ಯಂತ್ರವನ್ನು ಕಾರ್ಯಾಚರಣೆಗೆ ಇಳಿಸಲು ಮುಂದಾಗಿರುವ ಶಾಸಕ ಹರೀಶ್ ಪೂಂಜ; ಇದೀಗ ಬೆಂಗಳೂರು ಸಹಿತ ಪರವೂರುಗಳಲ್ಲಿ ಉದ್ಯೋಗದಲ್ಲಿದ್ದು, ಲಾಕ್‌ಡೌನ್ ಸಂದರ್ಭ ತಾಲೂಕಿನ ಹಳ್ಳಿಗಳಿಗೆ ಬರಲಿರುವ ವ್ಯಕ್ತಿಗಳು ಒಂದು ವಾರ ಕಾಲ ತಮ್ಮತಮ್ಮ ಊರುಗಳ ಶಾಲೆಯಲ್ಲಿ ಕ್ವಾರಂಟೈನ್‌ಗೊಳಗಾಗುವ ಮೂಲಕ ತಾಲೂಕಿನ ಹಳ್ಳಿಗಳಲ್ಲಿ ಕೊರೋನಾ ಹರಡುವಿಕೆ ತಡೆಯಲು ತಾಲೂಕು ಆಡಾಳಿತದೊಂದಿಗೆ ಸಹಕರಿಸಲು ಕೋರಿದ್ದಾರೆ. ಎಪ್ರಿಲ್ 27ರಂದು ಬೆಳ್ತಂಗಡಿಯ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ […]

ಮೂಡುಬಿದಿರೆಯಲ್ಲಿ ಆಕರ್ಷಣೆಯ ಕೇಂದ್ರ ದಾನ ಮಾಲ್

ದಾನ ಮಾಲ್

ಮೂಡಬಿದಿರೆ: ವಿಸ್ತಾರವಾದ, ಅತೀ ಸುಂದರವಾದ ವಾಣಿಜ್ಯ ಸಂಕೀರ್ಣ ” ದಾನ ಮಾಲ್ ” ಇಂದು ಲೋಕಾರ್ಪಣೆಗೊಳ್ಳಲಿದೆ.ಗಲ್ಫ್ ರಾಷ್ಟ್ರಗಳಲ್ಲಿರುವ ವಾಣಿಜ್ಯ ಸಂಕೀರ್ಣಗಳ ಮಾದರಿಯಲ್ಲಿ ಮೂಡುಬಿದಿರೆ ಜುಮ್ಮಾ ಮಸೀದಿಯ ಸನಿಹದಲ್ಲಿ ಇರುವೈಲು ರಸ್ತೆಯಲ್ಲಿ ಈ ಅತ್ಯಾಕರ್ಷಕ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ.ಸುಮಾರು 85 ಸಾವಿರ ಚದರ ಅಡಿ ವಿಸ್ತೀರ್ಣದ ದಾನ ಮಾಲ್ ನ ಬೇಸ್ ಮೆಂಟ್ ನಲ್ಲಿ 55 ಕಾರುಗಳು ಮತ್ತು 35 ದ್ವಿಚಕ್ರ ವಾಹನಗಳು ತಂಗಲು ಅವಕಾಶ ಸ್ಥಳಾವಕಾಶವಿದೆ. ಒಟ್ಟು ನಾಲ್ಕು ಅಂತಸ್ತಿನ ಈ ಕಟ್ಟಡದ ಮೊದಲ 3 ಅಂತಸ್ತುಗಳಲ್ಲಿ […]

ಕಸ ವಿಲೇವಾರಿ ಘಟಕದಲ್ಲಿ ಅರ್ಧಂಬರ್ಧ ವಿಲೇವಾರಿ : ಸ್ಥಳೀಯರು ಗರಂ

ಮೂಡುಬಿದಿರೆ : ಕರಿಂಜೆಯಲ್ಲಿ ರಾಶಿ ಹಾಕಲಾಗುತ್ತಿವ ಕಸ ಗಬ್ಬೆದ್ದು ನಾರುತ್ತಿರುವ ಹಿನ್ನೆಲೆಯಲ್ಲಿ ಕರಿಂಜೆ ಕಸ ವಿಲೇವಾರಿ ಘಟಕದ ಅವ್ಯವಸ್ಥೆ ಬಗ್ಗೆ ಈಗಾಗಲೇ ಹಲವಾರು ದಿನಗಳಿಂದ ದೂರುಗಳು ಬರುತಿದ್ದು, ಕೆಲ ದಿನಗಳ ಹಿಂದೆ ಈ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಮತ್ತು ಸಾರ್ವಜನಿಕವಾಗಿ ಮೂಡಬಿದಿರೆ ಪುರಸಭೆಗೆ ಸಾರ್ವಜನಿಕರು ಚೆನ್ನಾಗಿ ಮಂಗಳಾರತಿ ಎತ್ತಿದ್ದಾರೆ. ಜನವರಿ 31ರಂದು ಒಂದು ಜೆಸಿಬಿ ಮತ್ತು ಹಿಟಾಚಿ ಮೂಲಕ ಈ ಘನತ್ಯಾಜ್ಯ ಘಟಕದಲ್ಲಿ ಕಸವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಒಂದು ಪ್ರಯತ್ನ ನಡೆದಿದ್ದು, ಈ ಬಗ್ಗೆ ಮಾಹಿತಿ […]

ಗಬ್ಬೆದ್ದು ನಾರುತ್ತಿರುವ ಕರಿಂಜೆ ಕಸ ವಿಲೇವಾರಿ ಘಟಕ

ಮೂಡುಬಿದಿರೆ: ಮೂಡುಬಿದಿರೆಯನ್ನು ಸ್ವಚ್ಛಗೊಳಿಸುವ ಕಾರ್ಯ ಸ್ಥಳೀಯ ಪುರಸಭೆ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ನಡೆಯುತ್ತಿದೆ. ಜವಾಬ್ದಾರಿಯನ್ನು ಮರೆತಿರುವ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಒಳ್ಳೆಯ ಉದ್ದೇಶವಿಟ್ಟು ಸ್ಥಾಪಿಸಲಾಗಿರುವ ಕರಿಂಜೆಯ ಕಸ ವಿಲೇವಾರಿ ಘಟಕ ಗಬ್ಬೆದ್ದು ನಾರುತ್ತಿದ್ದು, ಪರಿಸರದಲ್ಲಿ ವಾಸಿಸುವ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯನ್ನೆದುರಿಸುತ್ತಿದ್ದಾರೆ. ಹಲವು ದಿನಗಳಿಂದ ಕರಿಂಜೆ ಕಸ ವಿಲೇವಾರಿ ಘಟಕದ ಸುತ್ತಲಿನ ಪ್ರದೇಶದಲ್ಲಿ ಕಸದ ರಾಶಿ ತಂದು ಹಾಕಲಾಗುತ್ತಿದೆ. ಈ ಪರಿಸರ ದುರ್ವಾಸನೆಯಿಂದ ತುಂಬಿದ್ದು ಈ ಪರಿಸರದಲ್ಲಿ ವಾಸಿಸುವ ಜನ ಮೂಗು ಮುಚ್ಚಿ ತಿರುಗುವಂತಾಗಿದೆ. ಈ […]

ಮಾರೂರಿನಲ್ಲಿ ಮದ್ಯದಂಗಡಿಗೆ ಪರವಾನಿಗೆ -ಅಧಿಕಾರಿಗಳ ಬೆವರಿಳಿಸಿದ ಕಾಂಗ್ರೆಸ್ ಪ್ರತಿಭಟನೆ

ಮೂಡುಬಿದಿರೆ: ಇಲ್ಲಿನ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಆಪ್ತರೊಬ್ಬರಿಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮಾರೂರಿನಲ್ಲಿ ಎಂ.ಎಸ್.ಐ.ಎಲ್. ಪರವಾನಿಗೆಯ ಮದ್ಯದಂಗಡಿ ತೆರೆಯಲು ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ನೇತೃತ್ವದಲ್ಲಿ ಇಲ್ಲಿನ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಜನವರಿ 22ರ ಬೆಳಿಗ್ಗೆ 10-30ಕ್ಕೆ ಸರಿಯಾಗಿ ಪ್ರತಿಭಟನೆ ನಡೆಸುವುದೆಂದು ತೀರ್ಮಾನಿಸಿ, ನಮ್ಮ ಮನವಿ ಸ್ವೀಕರಿಸಿ ಎಂದು ತಹಶಿಲ್ದಾರರಿಗೆ ಮೊದಲೇ ತಿಳಿಸಲಾಗಿತ್ತು. ಸಮಯಕ್ಕೆ ಸರಿಯಾಗಿ ತಾಲೂಕು ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು […]

ನಾರಾವಿ ದೇಗುಲದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ.

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರ ಸಭೆಯು ಜನವರಿ 18ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಡೆಯಿತು ಆಡಳಿತ ಮೊಕ್ತೇಸರರಾಗಿ ನಿರಂಜನ ಬಿ. ಆಜ್ರಿ ರಾಮೆರಗುತ್ತು ನಾರಾವಿ ಆಯ್ಕೆಯಾದರು. ಸಹ ಮೊಕ್ತೇಸರರಾದ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ. ಕೃಷ್ಣತಂತ್ರಿ, ಪ್ರಸಾದ್ ಬಿ. ಶೆಟ್ಟಿ, ಉದಯ ಕುಮಾರ್ ಹೆಗ್ಡೆ, ಡಾಕಯ್ಯ ಪೂಜಾರಿ, ವಸಂತಿ ನಾರಾಯಣ ಪೂಜಾರಿ, ಅರ್ಪಿತಾ ವಸಂತ ಆಚಾರ್ಯ ಸಭೆಯಲ್ಲಿ ಭಾಗವಹಿಸಿದ್ದರು.

ಮತ‌ಎಣಿಕೆ ಕೇಂದ್ರದ ಬಳಿ‌ ರಾಷ್ಟ್ರದ್ರೋಹಿಗಳಿಂದ ಪಾಕಿಸ್ತಾನಪರ ಘೋಷಣೆ.ರಾಷ್ಟ್ರದ್ರೋಹಿಗಳ ಬಂಧನಕ್ಕೆ ಆಗ್ರಹ.

*ಬಿಗ್ ಬ್ರೇಕಿಂಗ್ ನ್ಯೂಸ್ * ಬೆಳ್ತಂಗಡಿ: ಡಿಸೆಂಬರ್ 30ರಂದು ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯ ಮತಗಳ ಎಣಿಕೆ ಕಾರ್ಯ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎದುರುಗಡೆ ಜಮಾಯಿಸಿದ ಎಸ್‌ಡಿಪಿಐ ಕಾರ್ಯಕರ್ತರು ತಮ್ಮ ಸಂಘಟನೆಯ ಧ್ವಜ ಹಿಡಿದು ಸಹಸ್ರಾರು ಮಂದಿ ಸಾರ್ವಜನಿಕರ ನಡುವೆಯೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿ ರಾಷ್ಟ್ರದ್ರೋಹದ ವಿಕೃತಿ ಮೆರೆದರು. ಸ್ಥಳದಲ್ಲಿದ್ದ ಕೇಸರಿ ಶಾಲು ಧರಿಸಿದ್ದ ಸಹಸ್ರಾರು ಸಂಖ್ಯೆಯ ಹಿಂದು ಕಾರ್ಯಕರ್ತರು ಈ ಸಂದರ್ಭದಲ್ಲಿ ಉದ್ವೇಗಕ್ಕೆ ಒಳಗಾಗದೇ ತಾಳ್ಮೆ ಪ್ರದರ್ಶಿಸಿದ್ದು ಸಂಭಾವ್ಯ […]