ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಕಪುಚಿನ್‌ ಕೃಷಿಕ ಸೇವಾ ಕೇಂದ್ರದ ಅಂಗ ಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯನ್ನು ಉಜಿರೆಯ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು. ಶಾಲಾ ಸಂಚಾಲಕರಾದ ವಂದನೀಯ ವಿನೋದ್‌ ಮಸ್ಕರೇನಸ್‌ ಕಾರ್ಯಕ್ರಮದ ಅಧ್ಯಕ್ಷತೆದ್ದರು. ಮುಖ್ಯ ಅತಿಥಿಗಳಾಗಿ ಬದ್ಯಾರು ಎಲ್‌.ಎಂ‌. ಪಿಂಟೊ ಆಸ್ಪತ್ರೆಯ ಆಡಳಿತಾಧಿಕಾರಿ ವಂದನೀಯ ರೋಶನ್‌ ಕ್ರಾಸ್ತಾ, ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಲೇರಿಯನ್‌ ರೋಡ್ರಿಗಸ್‌, ಉಪಾಧ್ಯಕ್ಷ ಅನಿಲ್‌ ಪ್ರಕಾಶ್‌ ಡಿಸೋಜಾ, ವಿಮುಕ್ತ ಸ್ವ-ಸಹಾಯ ಸಂಘಗಳ ಟ್ರಸ್ಟ್‌ನ ಅಧ್ಯಕ್ಷೆ […]

ಕುಲದೈವೋ ಬ್ರಹ್ಮ’ ನೂತನ ಪ್ರಸಂಗಬಿಡುಗಡೆ

‘ ಬೆಳ್ತಂಗಡಿ: ಮೂಡುಬಿದಿರೆಯ ಕನ್ನಡ ಕಲಾಭವನದಲ್ಲಿ ಸೆಪ್ಟೆಂಬರ್ 1ರಂದು ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ಮತ್ತು ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ‘ಕುಲದೈವೋ ಬ್ರಹ್ಮ’ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷ ಪೀತಾಂಬರ ಹೆರಾಜೆ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು; ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ […]

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಆಚರಣೆ

ಬೆಳ್ತಂಗಡಿ: ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫಯರ್, ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಅಂಗವಾಗಿ ತೋಕೂರು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಣ್ಣು ಹಂಪಲು ವಿತರಣೆಯನ್ನು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫಯರ್ ವತಿಯಿಂದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಪ್ಪನಾಡು ಲಯನ್ಸ್ ಕ್ಲಬ್ […]

ಸೈಂಟ್ ಮೇರಿಸ್ ವಿಶೇಷ ಮಕ್ಕಳ ಶಾಲೆ ಮಧ್ಯಾಹ್ನದ ಊಟ ವಿತರಣೆ

ಬೆಳ್ತಂಗಡಿ: ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್‌ಫಯರ್ ವತಿಯಿಂದ ಸೈಂಟ್ ಮೇರಿಸ್ ವಿಶೇಷ ಚೇತನ ಮಕ್ಕಳ ಶಾಲೆಗೆ ಮಧ್ಯಾಹ್ನದ ಊಟ ವಿತರಣೆಯನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಬಪ್ಪನಾಡು ಲಯನ್ಸ್ ಅಧ್ಯಕ್ಷ ಬಿ. ಶಿವಪ್ರಸಾದ್, ಕಾರ್ಯದರ್ಶಿ ಪ್ರತಿಭಾ ಹೆಬ್ಬಾರ್, ಖಜಾಂಚಿ ಅನಿಲ್ ಕುಮಾರ್ ಸದಸ್ಯರಾದ ಕಲ್ಲಪ್ಪ ತಡವಲಗ, ಲಯನ್ ಪ್ರಾಂತ್ಯ 11ರ ಪ್ರಾಂತ್ಯ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ದಿವ್ಯ ಚೇತನ ಶಾಲೆಯ ಮುಖ್ಯ ಶಿಕ್ಷಕಿ ರೇಷ್ಮಾ ಮರಿಯ ಮಾರ್ಟಿಸ್, ಶಿಕ್ಷಕರು ಸಿಬ್ಬಂದಿ ವರ್ಗದವರು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಕೊಕ್ಕಡ ಪೇಟೆಗೊಂದು ಹೊನ್ನಗರಿ.’ಸ್ವಾಮಿಪ್ರಸಾದ್ ಪ್ಯಾರಡೈಸ್’ ಶುಭಾರಂಭ.

ಬೆಳ್ತಂಗಡಿ: ಅಭಿವೃದ್ಧಿ ಹೊಂದುತ್ತಿರುವ ಕೊಕ್ಕಡ ಪೇಟೆಗೆ ಹೊನ್ನಗರಿಯಂತೆ ತಲೆಎತ್ತಿರುವ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣ, ಬಾಲ್ಕನಿಯನ್ನೊಳಗೊಂಡ ವಿಶಾಲ ಕೊಠಡಿಗಳು ಹಾಗೂ ಸವಿರುಚಿಯ ಊಟ-ಉಪಹಾರಗಳ ಹೊಟೇಲ‌ನ್ನು ಒಳಗೊಂಡ ಸ್ವಾಮಿಪ್ರಸಾದ್ ಪ್ಯಾರಡೈಸ್ ವಸತಿಗೃಹ ಮತ್ತು ವಾಣಿಜ್ಯ ಸಂಕೀರ್ಣದ ಉದ್ಭಾಟನಾ ಸಮಾರಂಭವು ಸೆಪ್ಟೆಂಬರ್ 6ರಂದು ಆಮಂತ್ರಿತ ಹಿರಿಯರ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಸರಳವಾಗಿ ಅಷ್ಟೇ ಸಾಂಪ್ರದಾಯಿಕವಾಗಿ ನೆರವೇರಿತು.ಪ್ಯಾರಡೈಸ್‌ನ ಮಾಲಕರಾದ ಗಿರೀಶ್ ಕುಮಾರ್ ಗೌಡ ಕೆ.ಎಂ.ರ ಮಾತಾಪಿತರಾದ ಶ್ರೀಮತಿ ಲೀಲಾವತಿ ಮತ್ತು ಮಾಯಿಲಪ್ಪ ಗೌಡರು ಆಶೀರ್ವಾದಪೂರ್ವಕವಾಗಿ ದೀಪ ಬೆಳಗಿ ನೂತನ ಪ್ಯಾರಡೈಸ್‌ನ್ನು ಉದ್ಘಾಟಿಸಿದರು. ಪುತ್ತೂರಿನ […]

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಆಗಸ್ಟ್ 31ರಂದು ಬೆಳ್ತಂಗಡಿ ಸಿವಿಸಿ ಹಾಲ್‌ನಲ್ಲಿ ಜರಗಿತು. ಸಂಘದ ಅಧ್ಯಕ್ಷ ಹೆನ್ರಿ ಲೋಬೊ ಅಧ್ಯಕ್ಷತೆ ವಹಿಸಿ ಮಾತನಾಡಿ; ಸಂಘದ ಸದಸ್ಯರಿಗೆ 25% ಡಿವಿಡೆಂಡ್ ಘೋಷಿಸಿದರು. ಸಂಘವು 2023-24ನೇ ಸಾಲಿನಲ್ಲಿ ಒಟ್ಟು 308ಕೋಟಿ ರೂಪಾಯಿ ವ್ಯವಹಾರ ನಡೆಸಿ ರೂಪಾಯಿ 1.67 ಕೋಟಿ ಲಾಭ ಗಳಿಸಿದೆ. ರೂಪಾಯಿ 89.11ಕೋಟಿ ಠೇವಣಿ ಸಂಗ್ರಹವಾಗಿದೆ. ಸಂಘವು ಒಟ್ಟು 2647 ‘ಎ’ ವರ್ಗದ ಸದಸ್ಯರನ್ನು ಹೊಂದಿದ್ದು ರೂಪಾಯಿ 94 ಲಕ್ಷ ಪಾಲು ಬಂಡವಾಳ […]

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕಗಳ ಸಭೆ.

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ. ಬಂಗೇರ ಹಾಗೂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೇಖರ್ ಕುಕ್ಕೆಡಿ, ಉಬಯ ಬ್ಲಾಕ್ ಪರಿಶಿಷ್ಟ ಜಾತಿ […]

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ಎಂದೇ ಪರಿಚಿತರಾದ ವಿಶ್ವನಾಥ ಕೆ. ವಿಟ್ಲ ಅವರಿಗೆ ಈ ಬಾರಿಯ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ. ಮೂಲತಃ ವಿಟ್ಲದ ಕಲ್ಲಕಟ್ಟ ನಿವಾಸಿ, ಪ್ರಸ್ತುತ ಉಜಿರೆಯ ಪೆರ್ಲ ರಸ್ತೆ ಬಳಿಯಲ್ಲಿ ಸ್ವಂತ ಮನೆಯಲ್ಲಿ ವಾಸ್ತವ್ಯವಿರುವ ಅವರು ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯನ್ನು ವಿವಿಧ ಚಿತ್ರಕಲಾಕೃತಿಗಳ ಮೂಲಕ ವರ್ಣರಂಜಿತವಾಗಿ ಅಲಂಕರಿಸಿ, ರಾಜ್ಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಗಣೇಶ, ಶಾರದೆ ಮತ್ತಿತರ ಚಿತ್ರ ಕಲಾಕೃತಿಗಳ ಮೂಲಕ […]

ಧರ್ಮ ಸಂಸ್ಥಾಪನೆಗೆ ಆದ್ಯಾತ್ಮ ಶಕ್ತಿ ಜಾಗೃತವಾಗಬೇಕು-ಸದ್ಗುರು ಶ್ರೀ ಗಳು

ಬೆಳ್ತಂಗಡಿ: ಸುಖ ಶಾಂತಿ ಪಡೆಯಲು ತ್ಯಾಗದಿಂದ ಕರ್ಮ ಮಾಡಬೇಕು. ದೇಶದಲ್ಲಿ ಧರ್ಮ ಸಂಸ್ಥಾಪನೆಗಾಗಿ ಅಧ್ಯಾತ್ಮ ಶಕ್ತಿ ಜಾಗೃತವಾಗಬೇಕು. ತ್ಯಾಗದಿಂದ ಕೆಲಸ ಮಾಡುವವನು ಅಮೃತತ್ವ ಪಡೆಯುತ್ತಾನೆ. ಭಗವದ್ಭಕ್ತಿ ಮತ್ತು ಕರ್ಮಯೋಗದಿಂದ ಜಗತ್ ಕಲ್ಯಾಣ. ಅದೇ ಸನ್ಯಾಸಿಗಳ ಕಾರ್ಯ. ಪ್ರತಿಯೊಬ್ಬರೂ ಅವರವರ ಧರ್ಮವನ್ನು ಸರಿಯಾಗಿ ಅರ್ಥಮಾಡಿಕೊಂಡು ಆಚರಿಸುವ ಜ್ಞಾನ ಸತ್ರ ಮಾಡಬೇಕು. ನಾವು ಯಾರನ್ನೂ ದೂರದೇ ನಮ್ಮ ದಾರಿಯನ್ನು ನಾವು ಸೃಷ್ಟಿಸಿಕೊಳ್ಳಬೇಕು. ಸೇವೆಯೇ ಭಗವಂತನ ಸನಿಹಕ್ಕೆ ಹೋಗುವ ಸುಲಭ ಮಾರ್ಗ. ಸನಾತನ ಸಂಸ್ಕೃತಿಯನ್ನು ಮುಂದಿನ ಪರಂಪರೆಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ […]

ಎಕ್ಸೆಲ್ ಕಾಲೇಜಿನಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಹೆಚ್.ಡಿ.ಎಫ್.ಸಿ. ಬ್ಯಾಂಕ್‌ನ ಮ್ಯೂಚುವಲ್ ಫಂಡ್ ಮತ್ತು ಎ.ಎಸ್.ಆರ್. ಫಿನ್‌ಟೆಕ್ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕ ವೃಂದಕ್ಕೆ ಹಾಗೂ ವಾಣಿಜ್ಯ ವಿಭಾಗದ ಮಕ್ಕಳಿಗಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಬಾಲಾಜಿ ರಾವ್ ಡಿ.ಜಿ.. ಮಾತನಾಡಿ; ಜನರು ಸಾಮಾನ್ಯವಾಗಿ ತಮ್ಮ ವ್ಯಾಪ್ತಿಗೆ ಬರುವ ಮತ್ತು ಹೆಸರುವಾಸಿಯಾಗಿರುವ ಬೆರಳೆಣಿಕೆಯ ಸಂಸ್ಥೆಗಳಲ್ಲಿ ತಮ್ಮ ಹೂಡಿಕೆ ಚಟುವಟಿಕೆಗಳನ್ನು ನಡೆಸುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ […]