ಎಸ್ಎಸ್ಎಲ್ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ಗೆ ಅಭಿನಂದನೆ.

ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಅವರನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ವಿದ್ಯಾರ್ಥಿಯ ನಿವಾಸಕ್ಕೆ ತೆರಳಿ ಅಭಿನಂದಿಸಿ, ಸಮ್ಮಾನಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ ಮತ್ತು ಜಯಾನಂದ ಗೌಡ ಹಾಗೂ […]
ನಂದಗೋಕುಲ ಗೋಶಾಲೆ ನಿರ್ವಹಣೆಗೆ ನೆರವು.

ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕ ನಂದಗೋಕುಲ ಗೋಶಾಲೆಯ ದೀಪೋತ್ಸವ ಮತ್ತು ಗೋಶಾಲೆ ನಿರ್ವಹಣೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರೂಪಾಯಿ 5ಲಕ್ಷದ ಆರ್ಥಿಕ ನೆರವನ್ನು ನೀಡಿರುತ್ತಾರೆ. ಶ್ರೀ ಕ್ಷೇತ್ರದ ಪರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ರವರು ನಂದಗೋಕುಲ ಗೋಶಾಲೆ ನಿರ್ವಹಣೆಯ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪದಾಧಿಕಾರಿಗಳಿಗೆ ನೆರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ […]
ರಾಷ್ಟ್ರೀಯ ಪರೀಕ್ಷೆಯಲ್ಲಿ 191ನೇ ರಾಂಕ್

ಬೆಳ್ತಂಗಡಿ: ಭಾರತೀಯ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಮಟ್ಟದ (INICET) ಪ್ರವೇಶ ಪರೀಕ್ಷೆಯಲ್ಲಿ ಉಜಿರೆಯ ಡಾ| ಶಿವಾನಿ ಎಂ.ಡಿ. ಅವರು ರಾಷ್ಟ್ರೀಯ ಮಟ್ಟದಲ್ಲಿ 191ನೇ ರಾಂಕ್ ಪಡೆದಿರುತ್ತಾರೆ. ಅವರು ತನ್ನ ಎಂ.ಬಿ.ಬಿ.ಎಸ್. ಪದವಿಯನ್ನು ಮಂಗಳೂರಿನ ಕೆ.ಎಂ.ಸಿ. ಕಾಲೇಜಿನಲ್ಲಿ ಪೂರೈಸಿದ್ದರು. ಅವರು ಉಜಿರೆಯ ದಂತ ವೈದ್ಯರಾದ ಡಾ|ಎಂ.ಎಂ. ದಯಾಕರ್ ಮತ್ತು ಡಾ| ಅನಿತಾ ದಯಾಕರ್ ದಂಪತಿಗಳ ಪುತ್ರಿ. ಅವರು ಪ್ರಸ್ತುತ ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಉಜಿರೆಯಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ಯಾವುದೇ ಪ್ರಚಾರದ ಬಯಕೆ ಇಲ್ಲದೆ ಮಾಡುವ ರಕ್ತದಾನವು ಇತರ ಎಲ್ಲಾ ದಾನಗಳಿಗಿಂತ ಶ್ರೇಷ್ಠವಾಗಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ನ ನಿಯೋಜಿತ ಅಧ್ಯಕ್ಷ ಪೂರನ್ವರ್ಮ ಹೇಳಿದರು.ಅವರು ಮೇ 26ರಂದು ಉಜಿರೆಯ ಶಾರದಾ ಮಂಟಪದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಮಂಗಳೂರಿನ ಕೆ.ಎಂ.ಸಿ. ರಕ್ತ ಕೇಂದ್ರದ ಜಂಟಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ರಕ್ತದಾನ ಮಾಡಿದವರಿಗೆ ಆರೋಗ್ಯವರ್ಧನೆಯೊಂದಿಗೆ ಮಾನಸಿಕಶಾಂತಿ, ನೆಮ್ಮದಿ ಸಿಗುತ್ತದೆ. ಜೊತೆಗೆ ಧನಾತ್ಮಕ ಚಿಂತನೆಯೊಂದಿಗೆ ಧನ್ಯತಾ ಭಾವವೂ ಮೂಡಿ ಬರುತ್ತದೆ ಎಂದು […]
ಮುಖ್ಯಮಂತ್ರಿ ಸಿದ್ಧರಾಮಯ್ಯ ಧರ್ಮಸ್ಥಳ ಭೇಟಿ.

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಾಜಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ಪಶುಸಂಗೋಪನಾ ಸಚಿವ ವೆಂಕಟೇಶ್ ಮೇ 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದಾಗ; ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಪ್ರವೇಶದ್ವಾರದಿಂದ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.ಡಿ. ಹರ್ಷೇಂದ್ರ ಕುಮಾರ್ ಸಚಿವರುಗಳನ್ನು ಸ್ವಾಗತಿಸಿದರು.ಬಳಿಕ ಮುಖ್ಯಮಂತ್ರಿ ಸಹಿತ ಗಣ್ಯರು ದೇವರದರ್ಶನ ಮಾಡಿ, ವಿಶೇಷಪೂಜೆ ಸಲ್ಲಿಸಿ, ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಉತ್ಸವ

ಬೆಳ್ತಂಗಡಿ: ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ (ಹತ್ತನಾವಧಿ) ಮೇ 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವರ್ಷದ ಉತ್ಸವ, ವಿಶೇಷ ಸೇವೆಗಳು ಸಮಾಪ್ತಿಗೊಳ್ಳುವ ಸಂಭ್ರಮದ ಪರ್ವ. ಮೇ 24 ರಂದು ಪತ್ತನಾಜೆ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಂಗ ಪೂಜೆ, ಬಲಿ ಉತ್ಸವ, ವಸಂತ ಮಂಟಪದಲ್ಲಿ ಕಟ್ಟೆಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜ ಮರ ಇಳಿಸುವ ಕಾರ್ಯಕ್ರಮದೊಂದಿಗೆ ವಿಶೇಷ ಉತ್ಸವ, ಸೇವೆಗಳು […]
ಉದ್ಯಮಶೀಲತೆ ಕಾರ್ಯಾಗಾರ

ಬೆಳ್ತಂಗಡಿ: ಸ್ಪಷ್ಟಗುರಿ ಮತ್ತು ಕೌಶಲ್ಯಯುತ ಹೆಜ್ಜೆಗಳ ಮೂಲಕ ಯಶಸ್ವಿ ಉದ್ಯಮಿಯಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಎನ್. ಜನಾರ್ಧನ ಹೇಳಿದರು.ಅವರು ಮೇ 22ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಎಂಟರ್ಪ್ರೈನರ್ಶಿಪ್ ಡೆವಲಪ್ಮೆಂಟ್ ಸೆಲ್ ಸಹಯೋಗದಲ್ಲಿ ಆಯೋಜಿದ್ದ ಉದ್ಯಮಶೀಲತೆಯ ಅಭಿವೃದ್ಧಿ ಕುರಿತಾದ ಎರಡು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಕೇವಲ ಶಿಕ್ಷಣ ಮಾತ್ರದಿಂದ ಬೆಳವಣಿಗೆಯ ಮಾನದಂಡವನ್ನು ನಿರ್ಧರಿಸಲಾಗುವುದಿಲ್ಲ. ನಿರಂತರವಾದ ಪ್ರಯತ್ನ […]
ಸಂಸ್ಕೃತಿ ಉಳಿಯಲು ಕನ್ನಡ ಭಾಷೆ ಬೆಳೆಯಬೇಕು- ಶ್ರದ್ಧಾ ಅಮಿತ್

ಬೆಳ್ತಂಗಡಿ: ಪ್ರಾಥಮಿಕ ಶಿಕ್ಷಣ ವಿದ್ಯಾರ್ಥಿಯ ಬದುಕಿನ ಪಂಚಾಂಗ. ವಿದ್ಯಾರ್ಥಿಗಳು ಸಜ್ಜನರಾಗಿ ವ್ಯಕ್ತಿತ್ವ ರೂಪಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳನ್ನು ರೂಪಿಸುವ ಶಿಲ್ಪಿಗಳಂತೆ ಸುಂದರ ಕೈತೋಟದ ಗಿಡಗಳನ್ನು ಬೆಳೆಸುವವರು; ಪೋಷಕಾಂಶ ನೀಡಿ ಅವರ ಸಾಮರ್ಥ್ಯ ಗುರುತಿಸುವವರು. ಶಿಕ್ಷಕರ ನಿಸ್ವಾರ್ಥ ಸೇವೆಗೆ ಬೆಲೆ ಕಟ್ಟುವಹಾಗಿಲ್ಲ. ಪ್ರತಿ ಮಕ್ಕಳು ಒಂದಲ್ಲ ಒಂದು ಕಲೆಯಲ್ಲಿ ಬೆಳೆಯುತ್ತಾರೆ. ನಮ್ಮ ಸಂಸ್ಕೃತಿ ಉಳಿಯಲು ಕನ್ನಡ ಭಾಷೆ ಹಾಗೂ ಶಾಲೆಗಳನ್ನು ಉಳಿಸಿ ಬೆಳೆಸಬೇಕು. ಮಕ್ಕಳಿಗೆ ಭಾಷೆ, ಸಂಸ್ಕೃತಿ, ನೆಲ ಜಲ, ಪರಿಸರದ ಬಗ್ಗೆ ತಿಳಿಸುವ ಕನ್ನಡ […]
ಬೀಡಿ ಕಾರ್ಮಿಕರ ಹೋರಾಟಕ್ಕೆ ಜಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಭಾರತ ಬೀಡಿ ಕಂಪೆನಿ ಉಳಿಸಲು ನಡೆಸಿದ ಹೋರಾಟ ಯಶಸ್ವಿಯಾಗಿ ಇತ್ಯರ್ಥವಾಯಿತು ಎಂದು ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಅದ್ಯಕ್ಷ ಬಿ.ಎಂ. ಭಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತ ಬೀಡಿ ಕಂಪೆನಿಯನ್ನು ಕಾನೂನು ಬಾಹಿರವಾಗಿ ಸರಕಾರದ ಅನುಮತಿ ಪಡೆಯದೇ ಮುಚ್ಚಲು ನಿರ್ಧರಸಿದ ಬೀಡಿ ಮಾಲಕರ ನಡೆಯನ್ನು ಖಂಡಿಸಿ ‘ಭಾರತ ಬೀಡಿ ಉಳಿಸಿ, ಕಾರ್ಮಿಕರ ಬದುಕು ರಕ್ಷಿಸಿ’ ಎಂಬ ಘೋಷವಾಕ್ಯದೊಂದಿಗೆ ಮೇ 16ರಿಂದ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ (ಸಿಐಟಿಯು), ಬೆಳ್ತಂಗಡಿ ತಾಲೂಕು […]
‘ಸೃಜನಶೀಲ ಸಂಶೋಧನೆಗಳಿಂದ ಸಮಾಜಕ್ಕೆ ವಿಶೇಷ ಕೊಡುಗೆ’

ಬೆಳ್ತಂಗಡಿ: ಕಠಿಣ ಪರಿಶ್ರಮ ಹಾಗೂ ಪ್ರಯತ್ನದಿಂದ ವಿಶೇಷ ಸಾಧನೆಗಳನ್ನು ಮಾಡಿ ತಾಂತ್ರಿಕ ಆವಿಷ್ಕಾರಗಳನ್ನು ಪ್ರದರ್ಶನಕ್ಕೆ ಅಣಿಗೊಳಿಸಿದ್ದೀರಿ. ಸೃಜನಶೀಲ ಸಂಶೋಧನೆಗಳಿಂದ ಸಮಾಜ ಹಾಗೂ ಮುಂದಿನ ಪೀಳಿಗೆಗೆ ವಿಶೇಷ ಕೊಡುಗೆ ನೀಡಿದ್ದೀರಿ. ಅಧ್ಯಯನಕ್ಕೆ ವಿಪುಲ ಅವಕಾಶಗಳಿದ್ದು ಅದನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವುದು ಮುಖ್ಯ. ಸಮೂಹದ ಸಾಧನೆಯಲ್ಲಿ ಗುರಿ ತಲುಪಿ ಗ್ರಾಹಕರಿಗೆ ಉಪಯುಕ್ತ ವಸ್ತುಗಳನ್ನು ಒದಗಿಸಿದಲ್ಲಿ ನಿಮ್ಮ ಸಾಧನೆ ಹಾಗು ಪರಿಶ್ರಮ ಸಾರ್ಥಕ್ಯ ಪಡೆಯುತ್ತದೆ ಎಂದು ಸಿಂಗಾಪುರದಲ್ಲಿ 16 ವರ್ಷಗಳ ಕಾಲ ತಾಂತ್ರಿಕ ವಿಭಾಗದಲ್ಲಿ ವಿಶೇಷ ಪರಿಣತಿ ಪಡೆದ ತೀರ್ಪುಗಾರ ಆದರ್ಶ ಕಾರಂತ್ […]