Warning: Constant WP_AUTO_UPDATE_CORE already defined in /home/u584898912/domains/jaikannadamma.in/public_html/wp-config.php on line 100
ತಾಜಾ ಸುದ್ದಿ - Jai Kannadamma - Page 3

ಡೆನ್ನನ ಡೆನ್ನಾನ ಶಬ್ಧವೇ ತುಳುವರಿಗೆ ರೋಮಾಂಚಕ-ರಕ್ಷಿತ್

ಬೆಳ್ತಂಗಡಿ: ತುಳುವರನ್ನು ಜಾತಿ, ಮತ, ಧರ್ಮ ಭೇದವಿಲ್ಲದೇ ಬೆಸೆಯುವ ಶಬ್ಧವೇ ಡೆನ್ನನ ಡೆನ್ನಾನ. ಡೆನ್ನನ ಡೆನ್ನಾನ ಶಬ್ಧವೇ ತುಳುವರಿಗೆ ರೋಮಾಂಚಕ. ಎಲ್ಲ ಸಮುದಾಯಗಳಿಗೂ ಒಂದು ಸಾಂಸ್ಕೃತಿಕ ಹಿನ್ನೆಲೆ ಇದೆ. ಆದರೆ ಇಂದು ಸರಿಯಾದ ಆಚರಣೆ ಇಲ್ಲದೇ ನಿರ್ಲಕ್ಷ್ಯದಿಂದ ನಮ್ಮ ಸಾಂಸ್ಕೃತಿಕ ಹಿನ್ನೆಲೆಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದೇವೆ. ಯುವವಾಹಿನಿ ಸಂಘಟನೆ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಸಂಸ್ಕರಿಸುವ ಒಳ್ಳೆಯ ಉದ್ಧೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಖಂಡಿತಾ ಯುವವಾಹಿನಿಯ ಎಲ್ಲ ಸದಸ್ಯರೂ ಅಭಿನಂದನಾರ್ಹರು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ […]

ಪುರುಷ ಹಾಗೂ ಮಹಿಳೆ ಸಮಾನತೆಯಿಂದ ದೇಶದ ಅಭಿವೃದ್ಧಿ’

ಬೆಳ್ತಂಗಡಿ: ಕಾಲ ಬದಲಾಗಿದೆ, ಭಾರತ ಬದಲಾಗುತ್ತಿದೆ; ಸಂಸಾರವೆಂಬ ರಥದಲ್ಲಿ ಪುರುಷ ಹಾಗೂ ಮಹಿಳೆ ಎರಡು ಚಕ್ರಗಳಿದ್ದಂತೆ. ಇಬ್ಬರೂ ಸರಿಸಮಾನವಾಗಿ ಹೆಜ್ಜೆ ಹಾಕಿದರೆ ಸಂಸಾರದ ಹಾದಿ ಸುಗಮವಾಗಿ ಸಾಗುವುದು. ಅಂತೆಯೇ ಸರಿಸಮಾನತೆಯಿಂದ ದೇಶ ಹಾಗೂ ಸಮಾಜದ ಅಭಿವೃದ್ಧಿಯ ದೃಷ್ಟಿಯಲ್ಲಿ ಜೊತೆಯಾಗಿ ಸಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್ ಹೇಣಲಿದರು. ಅವರು ನವೆಂಬರ್ 23ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ಲಾಯ್ಲದ ವಿಮುಕ್ತಿ ಸ್ವಸಹಾಯ ಸಂಘಗಳ ಟ್ರಸ್ಟ್ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಧರ್ಮ, […]

ದೇವರ ನಾಮಸ್ಮರಣೆಗೆ ಸೋಲೇ ಇಲ್ಲ-ಡಾ. ಹೆಗ್ಗಡೆ

ಬೆಳ್ತಂಗಡಿ: ದೇವರ ನಾಮಸ್ಮರಣೆಗೆ ಸೋಲೇ ಇಲ್ಲ; ಬದುಕಿನಲ್ಲಿ ಎಲ್ಲವೂ ಗೆಲುವೇ. ಆದ್ದರಿಂದ ಇಲ್ಲಿ ಏರ್ಪಡಿಸಿದ ಜಿನಭಜನಾ ಸ್ಪರ್ಧೆಯಲ್ಲಿ ಎಲ್ಲರೂ ಶ್ರದ್ಧೆಯಿಂದ ಭಾಗವಹಿಸಿ; ಸ್ಪರ್ಧೆಯಲ್ಲಿ ಒಂದು ತಂಡ ಗೆಲ್ಲಬಹುದು; ಉಳಿದ ತಂಡಗಳಿಗೆ ಅದು ಮುಂದಿನ ಸ್ಪರ್ಧೆಗೆ ಸಿದ್ಧತೆಗೆ ವೇದಿಕೆಯಾದಂತೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಅವರು ನವೆಂಬರ್ 24ರಂದು ಬೆಳ್ತಂಗಡಿಯ ಶ್ರೀ ಮಂಜುನಾಥಸ್ವಾಮಿ ಕಲಾಭವನದಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆಯನ್ನು ತಂತ್ರಜ್ಞಾನ ಮತ್ತು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ […]

ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ

ಬೆಳ್ತಂಗಡಿ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನವೆಂಬರ್ 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ಶಿಕ್ಷಣ ಸಂಸ್ಥೆಗಳ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಂಗಳಜ್ಯೋತಿ ಐಟಿಐ […]

ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಸೂಕ್ಷ್ಮ ಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಮೂಳೆ ಶಸ್ತ್ರಚಿಕಿತ್ಸಕ ಡಾ| ರೋಹಿತ್ ಜಿ. ಭಟ್ ಅವರು ಇತ್ತೀಚೆಗೆ ನಡೆದ ಸರಳ ಸಮಾರಂಭದಲ್ಲಿ ಸೇವೆಗೆ ಸೇರ್ಪಡೆಗೊಂಡರು.ಕೈ ಮತ್ತು ಮಣಿಕಟ್ಟಿನ ಮೈಕ್ರೊಸರ್ಜರಿಯಲ್ಲಿ ಹೆಬ್ಬೆರಳು ಅಥವಾ ಬೆರಳು, ರಕ್ತನಾಳದ ತೀವ್ರವಾದ ಸೀಳುವಿಕೆ ಅಥವಾ ಗಂಭೀರ ಸ್ನಾಯುರಜ್ಜು ಅಥವಾ ನರಗಳ ಗಾಯದಂತಹ ಆಘಾತಕಾರಿ ಗಾಯಗಳಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗುವುದು. ತೀವ್ರವಾಗಿ ಗಾಯಗೊಂಡ ಬೆರಳುಗಳು ಮತ್ತು ಮಣಿಕಟ್ಟುಗಳನ್ನು ರಕ್ಷಿಸುವ ಹಾಗೂ ಕೈ ಮತ್ತು ಬೆರಳಿನ ಪುನರ್ನಿರ್ಮಾಣ ಮಾಡುವ […]

ಎಸ್.ಡಿ.ಎಂ ಇಂಗ್ಲಿಷ್ ವಿಭಾಗದಿಂದ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಸರಣಿ

ಬೆಳ್ತಂಗಡಿ : ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಾದಿಯಲ್ಲಿ ಇಂಗ್ಲಿಷ್ ಭಾಷಾ ಕಲಿಕೆ ಪ್ರಮುಖ ಪಾತ್ರವಹಿಸುತ್ತದೆ ಎಂದು ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಡಾ.ಮಂಜುಶ್ರೀ ಹೇಳಿದರು.ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್, ಬಳಂಜ ಎಜುಕೇಷನಲ್ ಟ್ರಸ್ಟ್ ಮತ್ತು ಎಸ್. ಡಿ. ಎಂ ಸ್ನಾತಕೋತ್ತರ ಸಂಸ್ಥೆಯ ಸಹಯೋಗದೊಂದಿಗೆ ವಿವಿಧೆಡೆ ಆಯೋಜಿತವಾಗಲಿರುವ ‘ಸ್ಪೋಕನ್ -ಇಂಗ್ಲಿಷ್ ಕ್ಲಾಸ್’ ಸರಣಿ ಕಾರ್ಯಕ್ರಮಕ್ಕೆ ಬಳಂಜದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿದ್ಯುಕ್ತ ಚಾಲನೆ ನೀಡಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಹಾಗೂ ಸಾಮಾಜಿಕ ಪರಿಕಲ್ಪನೆಗಳ […]

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

ಉಜಿರೆ: ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಮ್ಮ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರೇರಕವಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.ಅವರು ನವೆಂಬರ್ 9ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕನ್ನಡ ಭುವನೇಶ್ವರಿ ರಥಕ್ಕೆ ಮಾಲಾರ್ಪಣೆ ಮಾಡಿ ಗೌರವಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶವಾದ ಧರ್ಮಸ್ಥಳದಲ್ಲಿ ಅಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಡಾ. ಹಂಪನಾ ನೇತೃತ್ವದಲ್ಲಿ ೫೧ನೆ […]

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪೂರ್ವಭಾವಿ ಸಭೆ

ಬೆಳ್ತಂಗಡಿ: ಸಮಾನ ಮನಸ್ಕರು, ಸಜ್ಜನರು ಸೇರಿ ಆರಂಭಿಸಿದ ಪಾದಯಾತ್ರೆ ಪರಂಪರೆ ಇಂದು ಸಂಸ್ಕೃತಿಯಾಗಿ ಬೆಳೆದಿದೆ. ಊರಿನ ಸೌಹಾರ್ದತೆ, ಸತ್ಯ, ಧರ್ಮ, ಪ್ರೀತಿ ಎತ್ತಿ ಹಿಡಿಯಲು ಪಾದಯಾತ್ರೆ ಸಹಕಾರಿಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ಹೇಳಿದರು. ಅವರು ನವೆಂಬರ್ 10ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಭವನದಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಿದ್ದರು. ಪ್ರತಿ ವರ್ಷವೂ 10,000 ಕ್ಕಿಂತ […]

ಕಂಚಿಕಾಮಕೋಟಿ ಸ್ವಾಮೀಜಿ ಧರ್ಮಸ್ಥಳ ಪುರಪ್ರವೇಶ, ಅನುಗ್ರಹ ಭಾಷಣ

ಬೆಳ್ತಂಗಡಿ: ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ಸದಾ ಕಾಪಾಡುತ್ತದೆ. ಧರ್ಮಸ್ಥಳ ಸೌಂದರ್ಯ ನಗರ, ಸಂಸ್ಕೃತಿ ನಗರ ಮತ್ತು ಸೇವಾ ನಗರ. ಧರ್ಮೋ ರಕ್ಷತಿ ರಕ್ಷಿತ. ಇಡೀ ದೇಶಕ್ಕೆ ಮುಕುಟಪ್ರಾಯವಾದ ಧರ್ಮಸ್ಥಳದಲ್ಲಿ ಅಮೂಲ್ಯ ಆಸ್ತಿಯಾದ ಭಕ್ತಿ, ಸೇವೆ, ಅನುಭವ, ನಾಯಕತ್ವ, ಪ್ರತಿಷ್ಠೆ, ಪ್ರಜ್ಞಾ, ಕೀರ್ತಿ ಎಲ್ಲವೂ ಇದೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಒಬ್ಬ ಸಾಧಾರಣ ವ್ಯಕ್ತಿಯಾಗಿ. ಅಸಾಧಾರಣ ಸೇವೆ, ಸಾಧನೆ ಮಾಡಿದ್ದಾರೆ. ಅವರ ದಕ್ಷ ಕಾರ್ಯವೈಖರಿ, ಆದರ್ಶ ನಾಯಕತ್ವ, ಸಾಮಾಜಿಕ ಸೇವಾ ಕಳಕಳಿ ಮತ್ತು ಹೃದಯ […]

ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾ ಕೂಟ

ಬೆಳ್ತಂಗಡಿ: ಶ್ರೇಷ್ಠ ಸಾಧಕರು ನಿರಂತರ ಸಾಧನೆಯಿಂದ ಯಶಸ್ವಿಯಾಗುತ್ತಾರೆ. ವಿದ್ಯಾರ್ಥಿಗಳು ಕೂಡ ಕಲಿಕೆ, ಕ್ರೀಡೆ ಮತ್ತಿತರ ಚಟುವಟಿಕೆಗಳಲ್ಲಿ ನಿರಂತರ ಸಾಧನೆ ಮಾಡಬೇಕು; ಆಗ ಮಾತ್ರ ಶ್ರೇಷ್ಟ ವ್ಯಕ್ತಿಗಳಾಗಲು ಸಾದ್ಯ ಎಂದು ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು. ಅವರು ಅಕ್ಟೋಬರ್ 26ರಂದು ಬಳಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾದಿಕಾರಿಗಳ ಕಚೇರಿ ಬೆಳ್ತಂಗಡಿ, ಶಾಲಾಬಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ, ತಾಲೂಕು […]