ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

ಬೆಳ್ತಂಗಡಿ: ಸಿಯೋನ್ ಆಶ್ರಮ ಗಂಡಿಬಾಗಿಲಿನಲ್ಲಿ ಅಕ್ಟೋಬರ್ 26ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಿಯೋನ್ ಗೋಶಾಲೆಯಲ್ಲಿ ಗೋವುಗಳಿಗೆ ಹೂವಿನ ಹಾರ ಹಾಕಿ ಗೋಪೂಜೆ ಮಾಡಲಾಯಿತು. ಸಿಯೋನ್ ಸಭಾಂಗಣದಲ್ಲಿ ರಂಗೋಲಿ ಹಾಕಿ ದೀಪ ಹಚ್ಚಿ ವಿವಿಧ ಬಗೆಯ ಪಟಾಕಿಗಳನ್ನು ಸಿಡಿಸಿ ಆಶ್ರಮ ನಿವಾಸಿಗಳೆಲ್ಲರೂ ಸಂಭ್ರಮಿಸಿದರು. ಸಿಯೋನ್ ಸಂಸ್ಥೆಯ ಟ್ರಸ್ಟೀ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು. ವಿವಿಧ ಬಗೆಯ ಸಿಹಿತಿಂಡಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು. ಬೆಳಗ್ಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನವನ್ನು ಹಿತೈಷಿಗಳಾದ ಜಯಪ್ರಕಾಶ್ ಶೆಟ್ಟಿ ಬೆಳ್ತಂಗಡಿ […]
ಸುರತ್ಕಲ್ ಟೋಲ್ಗೇಟ್ ಬಳಿ ರಾತ್ರಿಯಿಡೀ ಧರಣಿ ಕುಳಿತ ಅಭಯಚಂದ್ರ

ಮೂಡುಬಿದಿರೆ: ಸುರತ್ಕಲ್ ಅನಧಿಕೃತ ಟೋಲ್ಗೇಟ್ ತೆರವು ಬಗ್ಗೆ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಾ ಇದೆ. ಧರಣಿನಿರತರ ಹೋರಾಟವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಜಿಲ್ಲೆಯ ಸಂಸದರು ಮತ್ತು ಶಾಸಕರುಗಳ ಆಗ್ರಹ ಹಾಗೂ ಸರಕಾರದ ಆದೇಶದಂತೆ ಟೋಲ್ಗೇಟ್ ಸುತ್ತಮುತ್ತ ಜಿಲ್ಲಾಡಳಿತ ನಿಷೇಧಾಜ್ಞೆಯನ್ನೂ ಜಾರಿಗೊಳಿಸಿದೆ. ಆದರೂ ಜನಸಾಮಾನ್ಯರಿಂದ ನಿರಂತರವಾಗಿ ಹಣ ದೋಚುತ್ತಿರುವ ಈ ಅನಧಿಕೃತ ಟೋಲನ್ನು ಮುಚ್ಚಿಸಿಯೇ ಸಿದ್ಧ ಎಂದು ಸಂಕಲ್ಪತೊಟ್ಟು ಹೋರಾಟಕ್ಕೆ ಇಳಿದಿರುವ ಮುನೀರ್ ಕಾಟಿಪಳ್ಳ ನೇತೃತ್ವದ ಹೋರಾಟ ಸಮಿತಿಯ ಸದಸ್ಯರು ಅಕ್ಟೋಬರ್ 28ರಂದು ದಿನಪೂರ್ತಿ ಟೋಲ್ಗೇಟ್ ಬಳಿ ಧರಣಿ ಕುಳಿತು ಸಂಜೆಯ […]
ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೀಪಾವಳಿ ಹಬ್ಬ

ಮೂಡುಬಿದಿರೆ: ಸರಕಾರದಿಂದ ನಡೆಸಲ್ಪಡುವ ಬಡವರ ಹೆಣ್ಣು ಮಕ್ಕಳ ವಸತಿ ಶಾಲೆ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಲಯನ್ಸ್ ಕ್ಲಬ್ ಮೂಡಬಿದಿರೆ ಇದರ ವತಿಯಿಂದ ಅಕ್ಟೋಬರ್ 27ರಂದು ದೀಪಾವಳಿ ಹಬ್ಬ ಆಚರಿಸಲಾಯಿತು.ಹಿರಿಯ ಲಯನ್ಸ್ ಸದಸ್ಯ, ಮಾಜಿ ಪ್ರಾಂತೀಯ ಅಧ್ಯಕ್ಷ ಪ್ರಮಥ್ ಕುಮಾರ್ ಅವರ ಪ್ರಾಯೋಜಕತ್ವದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ಸಂಗಣ್ಣ ಬಸಯ್ಯ ಹಿರೇಮಠ್ ವಹಿಸಿದ್ದರು. ಲಯನ್ಸ್ ಸದಸ್ಯ ವಿನೋದ್ ಕುಮಾರ್ ದೀಪಾವಳಿ ಆಚರಣೆ ಬಗ್ಗೆ ಸವಿಸ್ತಾರವಾಗಿ, ಸ್ವಾರಸ್ಯಪೂರ್ಣವಾಗಿ ವಿವರಿಸಿದರು. ನಿಕಟಪೂರ್ವ ಅಧ್ಯಕ್ಷ ವಿನೋದ್ […]
ರಸ್ತೆ ದುರಸ್ತಿಗೂ ಹೆಗ್ಗಡೆಯವರೇ ಬರಬೇಕಾಯ್ತು.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಓರ್ವ ಚುನಾಯಿತ ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕರಿದ್ದಾರೆ. ತಾಲೂಕಿನ ಮತದಾರರು ಹೆದ್ದಾರಿಯ ಹೊಂಡಗುಂಡಿಯ ರಸ್ತೆಯಲ್ಲಿ ಸಂಚರಿಸಲು ಪರದಾಡಿ ಸಾಕಷ್ಟು ಬಾರಿ ರಸ್ತೆ ರಿಪೇರಿ ಮಾಡುವಂತೆ ತಮ್ಮ ಬಿಜೆಪಿಯ ಶಾಸಕ ಹರೀಶ್ ಪೂಂಜರಲ್ಲಿ ಪರಿಪರಿಯಾಗಿ ವಿನಂತಿಸಿದರು; ಪ್ರತಿಭಟನೆ ನಡೆಸಿ ಎಚ್ಚರಿಸಲು ನೋಡಿದರು. ಆದರೆ ನಮ್ಮ ಶಾಸಕ ಹರೀಶ್ ಪೂಂಜ ಎಚ್ಚರವಾಗಲೇ ಇಲ್ಲ. ಕಾರ್ಯಕ್ರಮವೊಂದರಲ್ಲಿ ರಸ್ತೆ ದುರಸ್ತಿಗೆ ಮನವಿ ಮಾಡಿದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವರಿಗೆ ಉತ್ತರಿಸಿದ ಶಾಸಕ […]
ರಸ್ತೆ ರಿಪೇರಿಗೆ ಕೊಡೆ ಹಿಡಿಯಬೇಕಾಗಿಲ್ಲ – ರಸ್ತೆ ಗುಂಡಿಯಲ್ಲಿ ದೀಪ ಬೆಳಗಿ ವಿನೂತನ ಪ್ರತಿಭಟನೆ

ಬೆಳ್ತಂಗಡಿ: ಹೆದ್ದಾರಿಯ ರಸ್ತೆ ದುರಸ್ತಿಗೆ ಆಗ್ರಹಿಸಿ, ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಅಥವಾ ತೆಂಗಿನ ಗಿಡ ಹಾಗೂ ಅಡಿಕೆ ಗಿಡ ನೆಟ್ಟು ಪ್ರತಿಭಟಿಸುವುದನ್ನು ಕಂಡಿದ್ದೇವೆ. ಹೊಂಡಗುಂಡಿಯ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸಿ ಅಥವಾ ಹೋಲ್ಡಿಂಗ್ಸ್ ಅಳವಡಿಸಿ ಪ್ರತಿಭಟಿಸಿ ಸರಕಾರದ ಕಣ್ಣು ತೆರೆಸುವ ಪ್ರತಿಭಟನೆಯನ್ನೂ ನೋಡಿದ್ದೇವೆ. ರಸ್ತೆ ದುರಸ್ಥಿಗೆ ಒತ್ತಾಯಿಸಿ, ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ ಹೋರಾಟಗಳನ್ನೂ ನೋಡಿದ್ದೇವೆ. ಆದರೆ ರಸ್ತೆ ಹೊಂಡಗುಂಡಿಗಳಲ್ಲಿ ದೀಪಗಳನ್ನು ಹಚ್ಚಿ ರಸ್ತೆ ದುರವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟಿಸಿದ ಉದಾಹರಣೆ […]
ಎನ್ಎಸ್ಟಿ ಸೋಮನಾಥ ನಾಯಕ್ ಮೇಲ್ಮನವಿ ವಜಾ-ಜೈಲು ಶಿಕ್ಷೆ ಖಾಯಂ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಹಾಗೂ ಶ್ರೀ ಕ್ಷೇತ್ರದ ಸಂಸ್ಥೆಗಳ ಬಗ್ಗೆ ನ್ಯಾಯಾಲಯದ ತಡೆಯಾಜ್ಞೆಯನ್ನೂ ಧಿಕ್ಕರಿಸಿ, ಗೌರವಕ್ಕೆ ಚ್ಯುತಿ ತರುವ ರೀತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನ್ಯಾಯಾಂಗ ನಿಂದನೆಗೈದ ಆರೋಪದಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ರಿಗೆ ಬೆಳ್ತಂಗಡಿಯ ಜೆಎಂಎಫ್ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದ ರಾಷ್ಟ್ರದ ಸರ್ವೋಚ್ಛ ನ್ಯಾಯಾಲಯ ಅಕ್ಟೋಬರ್ 19ರಂದು ನೀಡಿದ ಮಹತ್ವದ ತೀರ್ಪಿನಲ್ಲಿ ಸೋಮನಾಥ ನಾಯಕ್ರಿಗೆ ಜೈಲು ಶಿಕ್ಷೆ ಖಾಯಂಗೊಳಿಸಿ […]
ಲಯನ್ಸ್ ಪ್ರಾಂತ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ

ಬೆಳ್ತಂಗಡಿ: ನವೆಂಬರ್ 27ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆಯಲಿರುವ ಲಯನ್ಸ್ ಜಿಲ್ಲೆ 317ಡಿಯ ಪ್ರಾಂತ್ಯ 5ರ ‘ಪ್ರಾಪ್ತಿ’ ಪ್ರಾಂತೀಯ ಸಮ್ಮೇಳನ 2022ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು, ಬೆಳ್ತಂಗಡಿ ಲಯನ್ಸ್ ಕ್ಲಬ್ನ ಗೌರವ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಕ್ಟೋಬರ್ 17ರಂದು ಅವರ ಅಧಿಕೃತ ನಿವಾಸ ಧರ್ಮಸ್ಥಳದ ಬೀಡಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ, ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗೆತ್ಯಾರು, ಕಾರ್ಯಾಧ್ಯಕ್ಷ ಹೇಮಂತ ರಾವ್ […]
ಆಳ್ವಾಸ್ ಜಾಂಬೂರಿ: ಪುರಸಭೆಯಲ್ಲಿ ಸ್ವಚ್ಛತಾ ಪೂರ್ವಭಾವಿ ಸಭೆ

ಮೂಡುಬಿದಿರೆ: ಡಿಸೆಂಬರ್ ತಿಂಗಳಲ್ಲಿ ಮೂಡುಬಿದಿರೆಯ ಆಳ್ವಾಸ್ನಲ್ಲಿ ನಡೆಯುವ ಅಂತರಾಷ್ಟ್ರೀಯ ಜಂಬೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಮೂಡುಬಿದಿರೆ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸನಿಹದ ಕೆಲವು ಪಂಚಾಯತ್ ಆಡಳಿತಕ್ಕೂ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ಸಭೆಯಲ್ಲಿ ಸ್ವಚ್ಛ ಭಾರತದ ಪರಿಕಲ್ಪನೆ ಯೊಂದಿಗೆ ಸ್ವಚ್ಛ ಸುಂದರ ಮೂಡುಬಿದಿರೆ ಕುರಿತು ಮಕ್ಕಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕುರಿತು ಚರ್ಚಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷೆ ಸುಜಾತ […]
ಎಕ್ಸೆಲ್ ನಲ್ಲಿ ಅಕ್ಟೋಬರ್ 29ರಂದು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ‘ ಶೋಧ ‘ ರಾಜ್ಯ ಮಟ್ಟದ ವಿಜ್ಞಾನ – ಕಲಾ ಸ್ಪರ್ಧೆಗಳು
**ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 29 ರಂದು ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಶೋಧ 2022 ಹೆಸರಿನಲ್ಲಿ ವಿಜ್ಞಾನ – ಕಲಾ ಸ್ಪರ್ಧೆಗಳು ನಡೆಯಲಿವೆ. ವಿಜ್ಞಾನ ಮಾದರಿ, ವಿಜ್ಞಾನ ರಸಪ್ರಶ್ನೆ, ಇಂಗ್ಲೀಷ್ ಭಾಷಣ,ಕನ್ನಡ ಭಾಷಣ, ಇಂಗ್ಲೀಷ್ ಪ್ರಬಂಧ, ಕನ್ನಡ ಪ್ರಬಂಧ , ಪೆನ್ಸಿಲ್ ಡ್ರಾಯಿಂಗ್, ವರ್ಣ ಚಿತ್ರ, ಛದ್ಮ ವೇಷ ಸ್ಪರ್ಧೆ, ರಂಗೋಲಿ,ಚದುರಂಗ ಸ್ಪರ್ಧೆಗಳು ನಡೆಯಲಿವೆ. ಪ್ರತಿ ಸ್ಪರ್ಧೆಗಳಲ್ಲೂ ಪ್ರಥಮ , ದ್ವಿತೀಯ, ತೃತೀಯ ಬಹುಮಾನ ವಿಜೇತರಿಗೆ ತಲಾ 3000,2000,1000 ಮೊತ್ತದೊಂದಿಗೆ ಪ್ರಮಾಣ ಪತ್ರ ಹಾಗೂ […]
ಉಜಿರೆ ಗ್ರಾಮಸಭೆ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ಗ್ರಾಮಸ್ಥರ ಆಗ್ರಹ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ನ 2022-23 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಅಕ್ಟೋಬರ್ 11ರಂದು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ| ಯತೀಶ್ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಇಲಾಖಾ ಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರು ಮತ್ತು […]