‘ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಅಗತ್ಯ’

ಬೆಳ್ತಂಗಡಿ: ಶಿಕ್ಷಣ ಎಂಬ ದಾರಿದೀವಿಗೆ ಎಲ್ಲ ಮಕ್ಕಳಿಗೂ ದಕ್ಕಿದಾಗ ಸಮಾಜದಲ್ಲಿ ಉಳ್ಳವರು ಮತ್ತು ಇಲ್ಲದವರ ನಡುವಿನ ತಾರತಮ್ಯ ದೂರವಾಗಲು ಸಾಧ್ಯ. ಶೈಕ್ಷಣಿಕ ಕ್ರಾಂತಿ ಬಡತನ ಬೇಗೆಯಿಂದ ಹೊರಬರಲು ಮೂಲ ಕಾರಣ ಎಂಬುದನ್ನರಿತು ದಾನಿಗಳ ನೆರವಿನಿಂದ ಇಂದು ಹಮ್ಮಿಕೊಂಡ ಈ ಕಾರ್ಯಕ್ರಮ ಶಿಕ್ಷಣ ಮೌಲ್ಯದ ಗರಿಮೆ ಹೆಚ್ಚಿಸಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷೆ ವಿ. ಮನೋರಮಾ ಭಟ್ ಹೇಳಿದರು.ಬದುಕು ಕಟ್ಟೋಣ ಬನ್ನಿ ತಂಡ ಉಜಿರೆಯ ಆಶ್ರಯದಲ್ಲಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿಯ […]

ಕೆಸರುಡೊಂಜಿ ದಿನ ನೇಜಿ ನೆಡುವ ಸಂಭ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನೆಡುವ ಸಂಭ್ರಮ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು. ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಜಿರೆ ರತ್ನಮಾನಸದ ಮೇಲ್ವಿಚಾರಕ ಯತೀಶ್ ಬಳಂಜ ಮಾತನಾಡುತ್ತಾ, ಪ್ರಕೃತಿಯ ವಿಸ್ಮಯ, ಅದರಿಂದಾಗುವ ಪ್ರಯೋಜನ, ಅದನ್ನು ಉಳಿಸುವ ಪ್ರಯತ್ನ ವಿದ್ಯಾರ್ಥಿಗಳು ಮಾಡಬೇಕಾಗಿದೆ ಎಂದು ನುಡಿದರು. ಕೃಷಿ ಹಾಗೂ ಅದರ ಮಹತ್ವ, ಗದ್ದೆ ಮಾಡುವ […]

ಛಾಯಾಗ್ರಾಹಕರ ಸಂಘದಿಂದ ಪೊಲೀಸ್ ಠಾಣಾ ಉಪನಿರೀಕ್ಷಕರಿಗೆ ಅಭಿನಂದನೆ

ಬೆಳ್ತಂಗಡಿ: 2021ನೇ ಸಾಲಿನ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದಿರುವ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕರಿಗೆ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವತಿಯಿಂದ ಜುಲೈ 15ರಂದು ಅಭಿನಂದನೆ ಸಲ್ಲಿಸಲಾಯಿತು.ಈ ಸಂಧರ್ಭದಲ್ಲಿ ಛಾಯಾಗ್ರಾಹಕರ ಸಂಘದ  ವಲಯ ಸ್ಥಾಪಕ ಅಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಅಧ್ಯಕ್ಷ ಅಶೋಕ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಹರ್ಷ ಬಳ್ಳಮಂಜ, ಜೊತೆ ಕಾರ್ಯದರ್ಶಿ ಸುಜೀತ್ ಕುಮಾರ್ ಕೊಯ್ಯೂರು, ಉಪಾಧ್ಯಕ್ಷರುಗಳಾದ ಸಿಲ್ವಿಯಾ ಬೆಳ್ತಂಗಡಿ ಮತ್ತು ಪ್ರವೀಣ್ ಕೆದ್ದು, ಸಂಘಟನಾ ಕಾರ್ಯದರ್ಶಿ ಗೋಪಾಲ ಉಜಿರೆ, ಗೌರವ […]

ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ ಸರಕಾರಿ ನೌಕರರ ಅಭಿನಂದನೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಇಲಾಖೆಗಳ ಮುಖ್ಯಸ್ಥರು, ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ರಾಜ್ಯ ಸರಕಾರಿ ನೌಕರರ ವಿವಿದೋದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರು ಮತ್ತು ಸರಕಾರಿ ನೌಕರರ ವಿವಿಧ ಸಂಘಗಳ ಪದಾಧಿಕಾರಿಗಳು ಜುಲೈ 11ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಹೆಗ್ಗಡೆಯವರ ಅಧಿಕೃತ ನಿವಾಸ ಬೀಡುವಿನಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು […]

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ

ಬೆಳ್ತಂಗಡಿ: ಶ್ರೀ ಕೃಷ್ಣ ಭಜನಾ ಮಂಡಳಿ ಅದೂರ್ ಪೆರಲ್ ಕೊಯ್ಯೂರು ಇಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಮತ್ತು ಕೊಯ್ಯೂರು ಪ್ರೌಢಶಾಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೊಯ್ಯೂರು ಇಲ್ಲಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಶ್ರೀಕೃಷ್ಣ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ ಜರಗಿತು. ಸಮಾರಂಭದಲ್ಲಿ ಮುಖ್ಯ […]

ಯಕ್ಷಗಾನ ಕಲಾವಿದ ವೇಣೂರು ಸುಂದರ ಆಚಾರ್ಯ ಸಂಸ್ಮರಣೆ

ಬೆಳ್ತಂಗಡಿ: ಭಾವಪೂರ್ಣ ಹಾಸ್ಯಗಾರರಾಗಿದ್ದ ವೇಣೂರು ಸುಂದರ ಆಚಾರ್ಯ ಅವರ ಹಾಸ್ಯದಲ್ಲಿ ರಸವಿತ್ತೇ ಹೊರತು ಕಸವಿರಲಿಲ್ಲ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಯಂ. ಕೆ. ರಮೇಶ್ ಆಚಾರ್ಯ ತೀರ್ಥಹಳ್ಳಿ ಹೇಳಿದರು.ಅವರು ಜುಲೈ 10ರಂದು  ವೇಣೂರಿನ ಶ್ರೀ ಭರತೇಶ ಸಮುದಾಯ ಭವನದಲ್ಲಿ ನಡೆದ ಹಾಸ್ಯಗಾರ ವೇಣೂರು ಸುಂದರ ಆಚಾರ್ಯ ಸಂಸ್ಮರಣಾ ಕಾರ್ಯಕ್ರಮದಲ್ಲಿ ಸಂಸ್ಮರಣೆ ಹಾಗೂ ಅಭಿನಂದನಾ ನುಡಿಗಳನ್ನಾಡಿದರು.ಅವರು ಶೇಣಿ ಗೋಪಾಲಕೃಷ್ಣ ಭಟ್ಟರು ಮೆಚ್ಚಿದ ಹಾಸ್ಯಗಾರರಾಗಿದ್ದರು. ಆಚಾರ್ಯ ಅವರು ದಿವಂಗತರಾದ ಮೇಲೆಯೂ ಅವರ ಸ್ಮರಣೆ ಎಲ್ಲರಲ್ಲಿದೆ. ಸಜ್ಜನರು ನಾಮ […]

ದ.ಕ. ಜಿಲ್ಲಾ ಬಿಜೆಪಿ ಶಾಸಕರುಗಳಿಂದ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ಭಾರತ ಸರಕಾರದಿಂದ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಜುಲೈ 11ರಂದು ಬೀಡಿನಲ್ಲಿ‌ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ‌ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್,‌ ಉತ್ತರ ಕ್ಷೇತ್ರದ ಶಾಸಕ ಡಾ| ಭರತ್‌ ಶೆಟ್ಟಿ, ‌ಮೂಡಬಿದ್ರೆ […]

ಮುದ್ರಾಧಾರಣೆಯಿಂದ ಜನ್ಮಾಂತರದ ಪಾಪಕರ್ಮ ದೂರ: ಸುಬ್ರಹ್ಮಣ್ಯಶ್ರೀಗಳು

                               ಬೆಳ್ತಂಗಡಿ: ಆಷಾಢ ಶುದ್ಧ ಏಕಾದಶಿ ದಿನದಂದು  ಸುದರ್ಶನ ಹವನದಲ್ಲಿ ಭಗವಂತನ ಆಯುಧವಾದ ಶಂಖ-ಚಕ್ರ ಚಿಹ್ನೆಯನ್ನು    ಅಭಿಮಂತ್ರಿಸಿ, ತೋಳುಗಳಲ್ಲಿ ಧರಿಸುವುದು ಪರಂಪರೆ ಯಿಂದ ನಡೆದುಕೊಂಡು ಬಂದಿದೆ.  ಮುದ್ರಾಧಾರಣೆಯಿಂದ  ಆರೋಗ್ಯಕರವಾಗಿಯೂ ಭಗವಂತನ ಸಾಮೀಪ್ಯ ಹೊಂದಲು  ಸಹಕಾರಿಯಾಗಿ  ಜನ್ಮಾಂತರದ ಪಾಪಕರ್ಮಗಳು ಪರಿಹಾರವಾಗುವುದೆಂದು ಶಾಸ್ತ್ರೀಯವಾಗಿಯೂ  ನಂಬಿಕೊಂಡು ಬರಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರು ನುಡಿದರು.    […]

ಬಹುಜನ ಚಳವಳಿ ನಾಯಕ ಪಿ. ಡೀಕಯ್ಯ ನಿಧನ

ಬೆಳ್ತಂಗಡಿ: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ(63) ನವರು ಜುಲೈ 9ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿ ಬೆಳೆಸುವುದರಲ್ಲಿ ಡೀಕಯ್ಯ ಅವರ ಪಾತ್ರ ಅತ್ಯಂತ ಹಿರಿದು. ಜಿಲ್ಲೆಯ ಗ್ರಾಮ ಗ್ರಾಮಗಳಲ್ಲಿ ಸಂಚರಿಸಿ ಚಳವಳಿಯನ್ನು ಕಟ್ಟಿದವರು  ಪಿ.ಡೀಕಯ್ಯನವರು.  ದೇಶದ ಇತಿಹಾಸದ ಜೊತೆಗೆ ತುಳುನಾಡಿನ ಇತಿಹಾಸವನ್ನೂ ಅರೆದು ಕುಡಿದಿದ್ದರು. ತುಳುನಾಡಿನಲ್ಲಿ ತಮ್ಮದೇ ಶೈಲಿಯಲ್ಲಿ ಬಹುಜನ ಚಳವಳಿಯನ್ನು ಕಟ್ಟಿದವರು. ಅವರು ಸಾಕಷ್ಟು ಯುವ ನಾಯಕರನ್ನು […]

ಬೀದಿಬದಿ ವ್ಯಾಪಾರಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ವತಿಯಿಂದ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಗರ ಬೀದಿ ವ್ಯಾಪಾರಿಗಳ ಬೆಂಬಲ ಉಪ ಘಟಕದಡಿ ಬೀದಿ ಬದಿ ವ್ಯಾಪಾರಿಗಳಿಗೆ 2 ದಿನಗಳ ಸಾಮರ್ಥ್ಯ ಅಭಿವೃದ್ದಿ ತರಬೇತಿ ಕಾರ್ಯಾಗಾರವು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಜುಲೈ 6ರಂದು ಆರಂಭಗೊಂಡಿತು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಇವರು […]