ಗೃಹ ಸಚಿವ ಹಾಗೂ ಸ್ವಾಮೀಜಿಯ ಗುಪ್ತ ಸಮಾಲೋಚನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನವೆಂಬರ್ 9 ರಂದು ಪೊಲೀಸ್ ಠಾಣೆಯ ಕಟ್ಟಡದ ಶಿಲಾನ್ಯಾಸಕ್ಕೆ ಆಗಮಿಸಿದ ರಾಜ್ಯ ಸರಕಾರ ಗೃಹ ಸಚಿವ ಅರಗ ಜ್ಞಾನೇಂದ್ರ ಶಿಲಾನ್ಯಾಸ ಕಾರ್ಯಕ್ರಮ ಪೂರೈಸಿ ಸುಲ್ಕೇರಿ ಶಾಲೆಗೆ ತೆರಳುವ ಹಾದಿ ಮಧ್ಯೆ ಧರ್ಮಸ್ಥಳ ಕನ್ಯಾಡಿಯ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಸೀತಾರಾಮರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರ ಕೋರಿಕೆಯಂತೆ ಶ್ರೀ ರಾಮಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಬಳಿಕ ಕ್ಷೇತ್ರದ ಬ್ರಹ್ಮಾನಂದ […]
‘ಸಂಘದ ಮೂಲಕ ಸಮಾಜದ ಬಂಧುಗಳಿಗೆ ಇನ್ನಷ್ಟು ಸಹಾಯ ನೀಡುವಂತಾಗಲಿ’ಬೆಳ್ತಂಗಡಿ ಬಿಲ್ಲವ ಸಂಘದ ಮಹಾಸಭೆಯಲ್ಲಿ ಬಂಗೇರ

ಬೆಳ್ತಂಗಡಿ : ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಆರ್ಥಿಕವಾಗಿ ಇನ್ನಷ್ಟು ಸದೃಢವಾಗಿ ಬೆಳೆಯಬೇಕು. ಆ ಮೂಲಕ ಸಮಾಜದ ಬಂಧುಗಳಿಗೆ, ವಿದ್ಯಾರ್ಥಿಗಳಿಗೆ ಸಹಕಾರ ನೀಡುವಲ್ಲಿ ಇನ್ನಷ್ಟು ಹೆಚ್ಚಿನ ಮುತುವರ್ಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.ಅವರು ನವೆಂಬರ್ 7ರಂದು ಬೆಳ್ತಂಗಡಿಯ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ನಡೆದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆಯನ್ಬು ಉದ್ದೇಶಿಸಿ ಮಾತನಾಡುತ್ತಿದ್ದರು.ಸಂಘಕ್ಕೆ […]
ಕರ್ನಾಟಕ ಮುಸ್ಲಿಂ ಜಮಾಅತ್ ಕಣಿಯೂರು ಬ್ಲಾಕ್: ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಬೆಳ್ತಂಗಡಿ: ಮುಸ್ಲಿಂ ಸಮುದಾಯದ ಅಭಿವೃದ್ಧಿ, ಸಮಾಜದ ಸಾಂಸ್ಕೃತಿಕ-ಆರ್ಥಿಕ-ಸಾಮಾಜಿಕ-ಶೈಕ್ಷಣಿಕ-ಆರೋಗ್ಯ, ಔದ್ಯೋಗಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಬಲೀಕರಣ, ನಾಡಿನ ಸರ್ವ ಜನರ ಮಧ್ಯೆ ಸಾಮರಸ್ಯ ಸೌಹಾರ್ದತೆ ಸಹಿಷ್ಣುತೆ ಸೃಷ್ಟಿಸಿ, ರಾಷ್ಟ್ರದ ಏಕತೆಗಾಗಿ ಶ್ರಮಿಸುವ ಧ್ಯೇಯದೊಂದಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದೆ.ನವೆಂಬರ್ 1ರಿಂದ 30ರತನಕ ನಡೆಯುವ ಸದಸ್ಯತ್ವ ಅಭಿಯಾನದ ಭಾಗವಾಗಿ, ಕಣಿಯೂರು ಬ್ಲಾಕ್ ವ್ಯಾಪ್ತಿಯಲ್ಲಿ ಚಾಲನೆಯನ್ನು ನೀಡಲಾಯಿತು. ಬ್ಲಾಕ್ ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಅಶ್ರಫ್ ಸಖಾಫಿ ಮೂಡಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು, SMA ಕುಪ್ಪೆಟ್ಟಿ ರೀಜನಲ್ ಹಾಗೂ […]
ಜಾತಿ ನಿಂದನೆ ದೂರು; ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲು
ಬೆಳ್ತಂಗಡಿ: ಅಕ್ಟೋಬರ್ 13ರಂದು ನಡೆದ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಮಾನ್ಯ ಸಭೆಯಲ್ಲಿ ಸಂಘದ ನಿರ್ದೇಶಕ ರಘುಚಂದ್ರ ರಾವ್ ಸಂಘದ ಇನ್ನೋರ್ವ ನಿರ್ದೇಶಕ ನಾರ್ಯ ನಿವಾಸಿ ಶೀನ ಎಂಬವರನ್ನು ಜಾತಿ ಹೆಸರಲ್ಲಿ ನಿಂದನೆ ಮಾಡಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಅಕ್ಟೋಬರ್ 13ರಂದು ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ಇತ್ತೀಚೆಗೆ ಅಸಹಜವಾಗಿ ನಿಧನರಾದ ಸಂಘದ ದೈನಿಕ ಠೇವಣಿ ಸಂಗ್ರಾಹಕ ಜಗದೀಶ್ರ ಕುಟುಂಬಕ್ಕೆ ಸಂಘದಿಂದ ಆರ್ಥಿಕ ನೆರವು ನೀಡುವ ವಿಚಾರ ಪ್ರಸ್ತಾಪವಾದಾಗ ಮಾತನಾಡಿದ ನಿರ್ದೇಶಕ ರಘುಚಂದ್ರ […]
ರಾಜ್ಯೋತ್ಸವ ಆಚರಣೆ ಶಿಷ್ಟಾಚಾರಕ್ಕೆ ಸವಾಲ್ : ಹಸಿದ ಮಕ್ಕಳು ಬರಿಹೊಟ್ಟೆಯಲ್ಲಿ ಮನೆಗೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತದ ನೇತೃತ್ವದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ನವೆಂಬರ್ 1ರಂದು ಬೆಳ್ತಂಗಡಿಯ ಮಿನಿವಿಧಾನಸೌಧದ ಆವರಣದಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವವು ಸಾಕಷ್ಟು ಎಡವಟ್ಟುಗಳಿಗೆ ಸಾಕ್ಷಿಯಾಯಿತು.ರಾಜ್ಯದೆಲ್ಲೆಡೆ ಶಿಷ್ಟಾಚಾರದಂತೆ ಬೆಳಿಗ್ಗೆ ಗಂಟೆ 9-00ರಿಂದ 9-30ರೊಳಗೆ ಧ್ವಜಾರೋಹಣವಾದರೆ; ಬೆಳ್ತಂಗಡಿಯಲ್ಲಿ ಮಾತ್ರ ಗಂಟೆ 10-00 ಆದರೂ ಧ್ವಜಾರೋಹಣಕ್ಕೆ ಮುಹೂರ್ತ ಕೂಡಿ ಬಂದಿರಲೇ ಇಲ್ಲ. ಈ ರೀತಿ ಶಿಷ್ಟಾಚಾರ ಉಲ್ಲಂಘನೆಗೆ ಕಾರಣ ಎಲ್ಲರಿಗೂ ಗೊತ್ತಿತ್ತು. ಆದರೆ ಅಭಿಪ್ರಾಯಿಸುವ ‘ದಂ’ ಯಾರಿಗೂ ಇದ್ದಂತಿರಲಿಲ್ಲ. ಶಾಸಕ ಹರೀಶ್ ಪೂಂಜರಿಗೆ ಬಕೆಟ್ ಹಿಡಿಯುವುದೇ […]
ಸಹಕಾರ ಭಾರತಿಗೆ ಆಯ್ಕೆ

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ರಾಜೇಶ್ ಪೆಂರ್ಬುಡ ಆಯ್ಕೆಯಾಗಿದ್ದಾರೆ. ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 20ರಂದು ಬೆಳ್ತಂಗಡಿಯಲ್ಲಿ ನಡೆದ ಸಹಕಾರ ಭಾರತಿಯ ಸಭೆಯಲ್ಲಿ ಜಿಲ್ಲಾಧ್ಯಕ್ಷರು ತಾಲೂಕಿನ ನೂತನ ಸಮಿತಿಯನ್ನು ಘೋಷಿಸಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಸಹಸೇವಾ ಪ್ರಮುಖ್ ಸುಭಾಷ್ ಕಳೆಂಜ, ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಕೊಂಪದವು, ಸಹಕಾರ ಭಾರತಿ ತಾಲೂಕು ಅಧ್ಯಕ್ಷರಾಗಿದ್ದ ಸುಂದರ ಹೆಗ್ಡೆ ವೇಣೂರು ಉಪಸ್ಥಿತರಿದ್ದರು.ಮುಂದಿನ ಮೂರು ವರ್ಷಗಳ ಅವಧಿಗೆ ನೂತನ […]
ಶ್ರೀ ಗುರುದೇವ ಸೊಸೈಟಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಸಾಧನೆಯ ಮಹಾಪೂರ ಹೊತ್ತುಕೊಂಡು ‘ನಿಮ್ಮ ಸ್ಫೂರ್ತಿ ನಮ್ಮ ಉತ್ಕೃಷ್ಟ ಸೇವೆ’ ಎಂಬ ಧ್ಯೇಯವಾಕ್ಯದೊಂದಿಗೆ ನಮ್ಮ ಸಹಕಾರ ಸಂಘವು ಅದ್ವಿತೀಯ ಸಾಧನೆ ತೋರಿದೆ. ಸಂಸ್ಥೆಯ ಬೆನ್ನೆಲುಬಾದ ಸದಸ್ಯ ಮಿತ್ರರ ಸಹಕಾರ ಮತ್ತು ಗ್ರಾಹಕ ಸ್ನೇಹಿ ವ್ಯವಹಾರ ನೀಡಿದ್ದರಿಂದ ಸಂಸ್ಥೆಯ ಪ್ರಗತಿಯಲ್ಲಿ ಮಹತ್ತರ ಏಳಿಗೆ ಕಾಣಲು ಸಾಧ್ಯವಾಗಿದೆ ಎಂದು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಮಾಣಿಂಜ ಹೇಳಿದರು.ಬೆಳ್ತಂಗಡಿ ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದಲ್ಲಿ ಅಕ್ಟೋಬರ್ 17ರಂದು ನಡೆದ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ […]
ಕುಲಾಲ ಸಮುದಾಯ ಭವನಕ್ಕೆ ಸರಕಾರದಿಂದ ರೂ.1.50 ಕೋಟಿಕುಂಬಾರರ ಸೊಸೈಟಿಯ ಬೆಳ್ತಂಗಡಿ ಶಾಖೆ ಉದ್ಘಾಟಿಸಿ ಶಾಸಕ ಪೂಂಜ

ಬೆಳ್ತಂಗಡಿ: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು ಇದರ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿಯ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ನಲ್ಲಿ ನೂತನವಾಗಿ ಆರಂಭಗೊಂಡ 11ನೇ ಬೆಳ್ತಂಗಡಿ ಶಾಖೆಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಅಕ್ಟೋಬರ್ 15 ವಿಜಯದಶಮಿಯಂದು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಎರಡು ವರ್ಷದ ಹಿಂದೆ ಬೆಳ್ತಂಗಡಿಯಲ್ಲಿ ನಡೆದ ಕುಲಾಲ ಸಮಾಜದ ಸಮಾವೇಶದಲ್ಲಿ ನೀಡಿದ ಭರವಸೆಯಂತೆ ಗುರುವಾಯನಕೆರೆ ಕುಲಾಲ ಮಂದಿರದ ಅಭಿವೃದ್ಧಿಗೆ ಎರಡು ಹಂತಗಳಲ್ಲಿ ಸರಕಾರದಿಂದ […]
ಪೂರ್ವತಯಾರಿಯೇ ಕಾರ್ಯಕ್ರಮದ ಯಶಸ್ಸಿನ ಗುಟ್ಟುಉಜಿರೆಯಲ್ಲಿ ಅ.ಭಾ.ಸಾ.ಪ.ದ ಅಧಿವೇಶನದ ಕಾರ್ಯಾಲಯ ಉದ್ಘಾಟಿಸಿ ಹರ್ಷೇಂದ್ರ ಕುಮಾರ್

ಬೆಳ್ತಂಗಡಿ: ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗಿ ಜರಗಲು ಹಿರಿಯರ ಮಾರ್ಗದರ್ಶನ ಹಾಗೂ ಸ್ವಯಂಸೇವಕರ ಬೆಂಬಲ ಅತಿ ಮುಖ್ಯ, ಕಾರ್ಯಕ್ರಮದ ಜವಾಬ್ದಾರಿಗಳನ್ನು ಹಂಚಿ ಕೆಲಸ ನಿರ್ವಹಿಸಿದರೆ ಯಾವುದೇ ಒತ್ತಡ ಇರುವುದಿಲ್ಲ. ಕಾರ್ಯಕ್ರಮಕ್ಕೆ ಮುಂಚಿತವಾಗಿ ಎಲ್ಲಾ ತಯಾರಿಗಳನ್ನು ಪೂರ್ಣಗೊಳಿಸಿದರೆ ಯಶಸ್ಸು ನಿಶ್ಚಿತ. ಉಜಿರೆಯ ಅಧಿವೇಶನ ಶಾಶ್ವತವಾಗಿ ಎಲ್ಲರ ನೆನಪಿನಲ್ಲಿ ಉಳಿಯುವಂತಾಗಲಿ ಎಂದು ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಜನವರಿ ತಿಂಗಳಲ್ಲಿ ಉಜಿರೆಯಲ್ಲಿ ನಡೆಯಲಿರುವ ಮೂರನೇ ರಾಜ್ಯ ಅಧಿವೇಶನಕ್ಕೆ ಸಂಬಂಧಪಟ್ಟ ಕಾರ್ಯಾಲಯವನ್ನು ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಅಕ್ಟೋಬರ್ 14ರಂದು […]
ಸ್ಕ್ರೀನ್ ಪ್ಲೇ ರೈಟಿಂಗ್ – ಸಿನಿಮಾಟೊಗ್ರಫಿ – ಡೈರೆಕ್ಷನ್ ರಾಜ್ಯ ಮಟ್ಟದ ಕಾರ್ಯಾಗಾರ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಗುರುಮಿತ್ರ ಸಮೂಹ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಬೋಧಿ ಪ್ರೊಡಕ್ಷನ್ಸ್ ಮುಂಬೈ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 1ರಿಂದ 12ರವರೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಆಯೋಜಿಸಲಾದ ಸ್ಕ್ರೀನ್ ಪ್ಲೇ ರೈಟಿಂಗ್ -ಸಿನಿಮಾಟೊಗ್ರಫಿ -ಡೈರೆಕ್ಷನ್ ವಿಷಯದ ಬಗ್ಗೆ ರಾಜ್ಯ ಮಟ್ಟದ ಕಾರ್ಯಾಗಾರದ ಸಮಾರೋಪವು ಅಕ್ಟೋಬರ್ 12ರಂದು ನೆರವೇರಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ಬಿ. ವೋಕ್ […]